ಹಲವು ಗ್ರಾಮಗಳಲ್ಲಿ ರಸ್ತೆಯಲ್ಲಿ ಹರಿಯುತ್ತಿರುವ ಮಳೆ ನೀರು.
ಚಾಮರಾಜನಗರ: ರಾತ್ರಿ ಇಡೀ ಬಿಟ್ಟುಬಿಡದೇ ಸುರಿದ ಮಳೆಯಿಂದಾಗಿ ಗಡಿಜಿಲ್ಲೆಯಲ್ಲಿ ಅವಾಂತರ ಸೃಷ್ಟಿಯಾಗಿದೆ. ಯಳಂದೂರು ತಾಲೂಕಿನಲ್ಲಿರುವ ಮಾಂಬಳ್ಳಿ ಪೊಲೀಸ್ ಠಾಣೆಗೆ ನೀರು ನುಗ್ಗಿ ಇಡೀ ಠಾಣೆಯೇ ಜಲಾವೃತವಾಗಿದೆ. ಎಲ್ಲರನ್ನೂ ರಕ್ಷಿಸಲು ತೆರಳುವ ಪೊಲೀಸರಿಗೇ ಮಳೆಯಿಂದ ರಕ್ಷಣೆ ಸಿಗದಂತಾದ ಸ್ಥಿತಿ ನಿರ್ಮಾಣವಾಗಿದ್ದು, ಇಡೀ ಠಾಣೆ ತುಂಬೆಲ್ಲಾ 3 ರಿಂದ 4 ಅಡಿ ನೀರು ನಿಂತು ಅವಾಂತರ ಸೃಷ್ಟಿಸಿದೆ.
ಮೊಣಕಾಲುದ್ದ ನಿಂತಿರುವ ನೀರಿನಲ್ಲಿ ಪೊಲೀಸ್ ಕಾನ್ಸ್ಟೆಬಲ್ ಒಬ್ಬರು ಠಾಣೆಯಲ್ಲಿ ಫಜೀತಿ ಅನುಭವಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸೋಮವಾರ ಸಂಜೆ ಮಳೆ ಹಾನಿ ಪರಿಶೀಲನೆಗೆ ಹೋಗಿ ಅಧಿಕಾರಿಗಳು ಹಳ್ಳದ ನೀರಿನಲ್ಲಿ ಸಿಲುಕಿಕೊಂಡು ಕೊನೆಗೆ ಸ್ಥಳೀಯರಿಂದ ರಕ್ಷಿಸಲ್ಪಟ್ಟ ಘಟನೆ ಚಾಮರಾಜನಗರ ತಾಲೂಕಿನ ಕಣ್ಣೆಗಾಲ – ಆಲೂರು ನಡುವೆ ನಡೆದಿದೆ.ಮಳೆ ಹಾನಿ ಪರಿಶೀಲನೆ ನಡೆಸಿ ಅಧಿಕಾರಿಗಳು ಕಾರಿನಲ್ಲಿ ವಾಪಸ್ ಆಗುತ್ತಿದ್ದ ವೇಳೆ ಹಳ್ಳದ ನೀರಿನಲ್ಲಿ ಸಿಲುಕಿದ್ದಾರೆ. ಹಳ್ಳ ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ನೀರಿನ ಮಟ್ಟ ಹೆಚ್ಚಳವಾಗಿ ಹಳ್ಳದ ನೀರಿನಲ್ಲಿ ಅಧಿಕಾರಿಗಳು ಸಿಲುಕಿದ್ದಾರೆ. ನೀರು ರಭಸವಾಗಿ ಹರಿಯುತ್ತಿದ್ದ ಕಾರಣ ಕಾರಿನ ಮೇಲೆ ಹತ್ತಿ ನಿಂತುಕೊಂಡಿದ್ದಾರೆ.
ಸ್ಥಳೀಯರು ನೀರಿನಲ್ಲಿ ಮುಳುಗಿದ ಕಾರಿಗೆ ಹಗ್ಗ ಕಟ್ಟಿ ಎಳೆದು ಅಧಿಕಾರಿಗಳನ್ನು ರಕ್ಷಿಸಿದ್ದಾರೆ. ಎಇಇ ಕಾಂತರಾಜ್, ಎಇ ರಾಜು, ಚಾಲಕ ಮುರುಗೇಶ್ ಅವರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ. ಇದರೊಟ್ಟಿಗೆ ಸುರಿಯುತ್ತಿರುವ ನಿರಂತರ ಮಳೆಗೆ ಹನೂರು ತಾಲೂಕಿನ ಗುಂಡಾಲ್ ಜಲಾಶಯ ಕೋಡಿ ಬಿದ್ದಿದೆ. ಇಂದು ಮುಂಜಾನೆಯಿಂದಲೂ ವರುಣ ಬಿಡುವು ನೀಡದೇ ಜಿಲ್ಲೆಯ ಹಲವೆಡೆ ಸುರಿಯುತ್ತಿದ್ದಾನೆ.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…