ಹಲವು ಗ್ರಾಮಗಳಲ್ಲಿ ರಸ್ತೆಯಲ್ಲಿ ಹರಿಯುತ್ತಿರುವ ಮಳೆ ನೀರು.
ಚಾಮರಾಜನಗರ: ರಾತ್ರಿ ಇಡೀ ಬಿಟ್ಟುಬಿಡದೇ ಸುರಿದ ಮಳೆಯಿಂದಾಗಿ ಗಡಿಜಿಲ್ಲೆಯಲ್ಲಿ ಅವಾಂತರ ಸೃಷ್ಟಿಯಾಗಿದೆ. ಯಳಂದೂರು ತಾಲೂಕಿನಲ್ಲಿರುವ ಮಾಂಬಳ್ಳಿ ಪೊಲೀಸ್ ಠಾಣೆಗೆ ನೀರು ನುಗ್ಗಿ ಇಡೀ ಠಾಣೆಯೇ ಜಲಾವೃತವಾಗಿದೆ. ಎಲ್ಲರನ್ನೂ ರಕ್ಷಿಸಲು ತೆರಳುವ ಪೊಲೀಸರಿಗೇ ಮಳೆಯಿಂದ ರಕ್ಷಣೆ ಸಿಗದಂತಾದ ಸ್ಥಿತಿ ನಿರ್ಮಾಣವಾಗಿದ್ದು, ಇಡೀ ಠಾಣೆ ತುಂಬೆಲ್ಲಾ 3 ರಿಂದ 4 ಅಡಿ ನೀರು ನಿಂತು ಅವಾಂತರ ಸೃಷ್ಟಿಸಿದೆ.
ಮೊಣಕಾಲುದ್ದ ನಿಂತಿರುವ ನೀರಿನಲ್ಲಿ ಪೊಲೀಸ್ ಕಾನ್ಸ್ಟೆಬಲ್ ಒಬ್ಬರು ಠಾಣೆಯಲ್ಲಿ ಫಜೀತಿ ಅನುಭವಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸೋಮವಾರ ಸಂಜೆ ಮಳೆ ಹಾನಿ ಪರಿಶೀಲನೆಗೆ ಹೋಗಿ ಅಧಿಕಾರಿಗಳು ಹಳ್ಳದ ನೀರಿನಲ್ಲಿ ಸಿಲುಕಿಕೊಂಡು ಕೊನೆಗೆ ಸ್ಥಳೀಯರಿಂದ ರಕ್ಷಿಸಲ್ಪಟ್ಟ ಘಟನೆ ಚಾಮರಾಜನಗರ ತಾಲೂಕಿನ ಕಣ್ಣೆಗಾಲ – ಆಲೂರು ನಡುವೆ ನಡೆದಿದೆ.ಮಳೆ ಹಾನಿ ಪರಿಶೀಲನೆ ನಡೆಸಿ ಅಧಿಕಾರಿಗಳು ಕಾರಿನಲ್ಲಿ ವಾಪಸ್ ಆಗುತ್ತಿದ್ದ ವೇಳೆ ಹಳ್ಳದ ನೀರಿನಲ್ಲಿ ಸಿಲುಕಿದ್ದಾರೆ. ಹಳ್ಳ ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ನೀರಿನ ಮಟ್ಟ ಹೆಚ್ಚಳವಾಗಿ ಹಳ್ಳದ ನೀರಿನಲ್ಲಿ ಅಧಿಕಾರಿಗಳು ಸಿಲುಕಿದ್ದಾರೆ. ನೀರು ರಭಸವಾಗಿ ಹರಿಯುತ್ತಿದ್ದ ಕಾರಣ ಕಾರಿನ ಮೇಲೆ ಹತ್ತಿ ನಿಂತುಕೊಂಡಿದ್ದಾರೆ.
ಸ್ಥಳೀಯರು ನೀರಿನಲ್ಲಿ ಮುಳುಗಿದ ಕಾರಿಗೆ ಹಗ್ಗ ಕಟ್ಟಿ ಎಳೆದು ಅಧಿಕಾರಿಗಳನ್ನು ರಕ್ಷಿಸಿದ್ದಾರೆ. ಎಇಇ ಕಾಂತರಾಜ್, ಎಇ ರಾಜು, ಚಾಲಕ ಮುರುಗೇಶ್ ಅವರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ. ಇದರೊಟ್ಟಿಗೆ ಸುರಿಯುತ್ತಿರುವ ನಿರಂತರ ಮಳೆಗೆ ಹನೂರು ತಾಲೂಕಿನ ಗುಂಡಾಲ್ ಜಲಾಶಯ ಕೋಡಿ ಬಿದ್ದಿದೆ. ಇಂದು ಮುಂಜಾನೆಯಿಂದಲೂ ವರುಣ ಬಿಡುವು ನೀಡದೇ ಜಿಲ್ಲೆಯ ಹಲವೆಡೆ ಸುರಿಯುತ್ತಿದ್ದಾನೆ.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…