ಹಲವು ಗ್ರಾಮಗಳಲ್ಲಿ ರಸ್ತೆಯಲ್ಲಿ ಹರಿಯುತ್ತಿರುವ ಮಳೆ ನೀರು.
ಚಾಮರಾಜನಗರ: ರಾತ್ರಿ ಇಡೀ ಬಿಟ್ಟುಬಿಡದೇ ಸುರಿದ ಮಳೆಯಿಂದಾಗಿ ಗಡಿಜಿಲ್ಲೆಯಲ್ಲಿ ಅವಾಂತರ ಸೃಷ್ಟಿಯಾಗಿದೆ. ಯಳಂದೂರು ತಾಲೂಕಿನಲ್ಲಿರುವ ಮಾಂಬಳ್ಳಿ ಪೊಲೀಸ್ ಠಾಣೆಗೆ ನೀರು ನುಗ್ಗಿ ಇಡೀ ಠಾಣೆಯೇ ಜಲಾವೃತವಾಗಿದೆ. ಎಲ್ಲರನ್ನೂ ರಕ್ಷಿಸಲು ತೆರಳುವ ಪೊಲೀಸರಿಗೇ ಮಳೆಯಿಂದ ರಕ್ಷಣೆ ಸಿಗದಂತಾದ ಸ್ಥಿತಿ ನಿರ್ಮಾಣವಾಗಿದ್ದು, ಇಡೀ ಠಾಣೆ ತುಂಬೆಲ್ಲಾ 3 ರಿಂದ 4 ಅಡಿ ನೀರು ನಿಂತು ಅವಾಂತರ ಸೃಷ್ಟಿಸಿದೆ.
ಮೊಣಕಾಲುದ್ದ ನಿಂತಿರುವ ನೀರಿನಲ್ಲಿ ಪೊಲೀಸ್ ಕಾನ್ಸ್ಟೆಬಲ್ ಒಬ್ಬರು ಠಾಣೆಯಲ್ಲಿ ಫಜೀತಿ ಅನುಭವಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸೋಮವಾರ ಸಂಜೆ ಮಳೆ ಹಾನಿ ಪರಿಶೀಲನೆಗೆ ಹೋಗಿ ಅಧಿಕಾರಿಗಳು ಹಳ್ಳದ ನೀರಿನಲ್ಲಿ ಸಿಲುಕಿಕೊಂಡು ಕೊನೆಗೆ ಸ್ಥಳೀಯರಿಂದ ರಕ್ಷಿಸಲ್ಪಟ್ಟ ಘಟನೆ ಚಾಮರಾಜನಗರ ತಾಲೂಕಿನ ಕಣ್ಣೆಗಾಲ – ಆಲೂರು ನಡುವೆ ನಡೆದಿದೆ.ಮಳೆ ಹಾನಿ ಪರಿಶೀಲನೆ ನಡೆಸಿ ಅಧಿಕಾರಿಗಳು ಕಾರಿನಲ್ಲಿ ವಾಪಸ್ ಆಗುತ್ತಿದ್ದ ವೇಳೆ ಹಳ್ಳದ ನೀರಿನಲ್ಲಿ ಸಿಲುಕಿದ್ದಾರೆ. ಹಳ್ಳ ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ನೀರಿನ ಮಟ್ಟ ಹೆಚ್ಚಳವಾಗಿ ಹಳ್ಳದ ನೀರಿನಲ್ಲಿ ಅಧಿಕಾರಿಗಳು ಸಿಲುಕಿದ್ದಾರೆ. ನೀರು ರಭಸವಾಗಿ ಹರಿಯುತ್ತಿದ್ದ ಕಾರಣ ಕಾರಿನ ಮೇಲೆ ಹತ್ತಿ ನಿಂತುಕೊಂಡಿದ್ದಾರೆ.
ಸ್ಥಳೀಯರು ನೀರಿನಲ್ಲಿ ಮುಳುಗಿದ ಕಾರಿಗೆ ಹಗ್ಗ ಕಟ್ಟಿ ಎಳೆದು ಅಧಿಕಾರಿಗಳನ್ನು ರಕ್ಷಿಸಿದ್ದಾರೆ. ಎಇಇ ಕಾಂತರಾಜ್, ಎಇ ರಾಜು, ಚಾಲಕ ಮುರುಗೇಶ್ ಅವರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ. ಇದರೊಟ್ಟಿಗೆ ಸುರಿಯುತ್ತಿರುವ ನಿರಂತರ ಮಳೆಗೆ ಹನೂರು ತಾಲೂಕಿನ ಗುಂಡಾಲ್ ಜಲಾಶಯ ಕೋಡಿ ಬಿದ್ದಿದೆ. ಇಂದು ಮುಂಜಾನೆಯಿಂದಲೂ ವರುಣ ಬಿಡುವು ನೀಡದೇ ಜಿಲ್ಲೆಯ ಹಲವೆಡೆ ಸುರಿಯುತ್ತಿದ್ದಾನೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…