ಮೈಸೂರು : .(ಕರ್ನಾಟಕ ವಾರ್ತೆ):- ೨೦೨೨-೨೩ ಸಾಲಿಗೆ ಸಹಕಾರಿಗಳಿಗಾಗಿ yಶಸ್ವಿನಿ ಸಹಕಾರ ರೈತರ ಆರೋಗ್ಯ ರಕ್ಷಣ ಯೋಜನೆಯನ್ನು ರಾಜ್ಯದಲ್ಲಿ ಮರು ಜಾರಿಗೊಳಿಸಿ ಆದೇಶಿಸಿರುತ್ತದೆ. ಈ ಯೋಜನೆಯ ಬಗ್ಗೆ ಮಾರ್ಗಸೂಚಿಗಳನ್ನು ನೀಡಲಾಗಿದ್ದು, ಮಾರ್ಗಸೂಚಿಯಲ್ಲಿ ತಿಸಿರುವಂತೆ ಸದರಿ ಯೋಜನೆಯಡಿ ೧೬೫೦ ಖಾಯಿಲೆಗಳಿಗೆ ಶಸ್ತ್ರ ಚಿಕಿತ್ಸೆಗಳನ್ನು ಒಳಗೊಂಡಂತೆ ಚಿಕಿತ್ಸೆ ನೀಡಲಾಗುತ್ತದೆ. ಈ ಹಿಂದೆ ಯಶಸ್ವಿನಿ ಯೋಜನೆಯಲ್ಲಿ ನೊಂದಾಯಿಸಿದ ನೆಟ್ವರ್ಕ್ ಆಸ್ಪತ್ರೆಗಳನ್ನೇ ಮುಂದುವರೆಸಲಾಗಿರುತ್ತದೆ.
ಮೈಸೂರು ಜಿಲ್ಲೆಯ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ೦೪ ಸದಸ್ಯರ ಕುಟುಂಬದ ನಗರ ಪ್ರದೇಶಕ್ಕೆ ರೂ.೧೦೦೦/- ಗಳ ವಂತಿಗೆ ಮತ್ತು ಗ್ರಾಮೀಣ/ ಸ್ವಸಹಾಯ ಗುಂಪುಗಳಿಗೆ ರೂ.೫೦೦/- ಗಳ ವಂತಿಗೆಯನ್ನು ಪಾವತಿಸುವುದು, ಪ್ರತಿ ಹೆಚ್ಚುವರಿ ಸದಸ್ಯರಿಗೆ ಶೇ.೨೦ ಅಂದರೆ ರೂ.೧೦೦/- ಗಳನ್ನು ಪಾವತಿಸಿ ಯೋಜನೆಯ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಸಹಕಾರಿಗಳು ಸಂಘಕ್ಕೆ ಭೇಟಿ ನೀಡಿ ತಮ್ಮ ಕುಟುಂಬದ ಸದಸ್ಯರ ಆಧಾರ ಕಾರ್ಡ್, ಪಡಿತರ ಕಾರ್ಡು ಮತ್ತು ಭಾವಚಿತ್ರಗಳನ್ನು ಕಾರ್ಯದರ್ಶಿಗಳಿಗೆ ನೀಡಿ ನೊಂದಣಿ ಮಾಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೨೧-೨೫೨೧೯೫೬ ಮತ್ತು ೦೮೨೧-೨೪೪೩೩೨೧ ನ್ನು ಸಂಪರ್ಕಿಸಿ ಎಂದು ಮೈಸೂರು ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ಜಿ.ಆರ್.ವಿಜಯ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್ಎಸ್ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದಲ್ಲಿ…
ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.…
ನನ್ನ ಮನಸ್ಸಿನಲ್ಲಿ ಆಳವಾಗಿ ಇಳಿದ ಗಾಂಧಿಯವರ ಅಹಿಂಸಾ ಮಾರ್ಗ ಗಾಂಧಿಜಿ ಅವರ ಅಹಿಂಸಾ ಮಾರ್ಗ ಮತ್ತು ಸತ್ಯಾಗ್ರಹ ಚಳವಳಿಗಳು ನನ್ನ…
ಡಾ.ಎಂ.ಡಿ.ಉಮೇಶ ನೆಲ್ಸನ್ ಮಂಡೇಲಾರವರ ಮೇಲೆ ಗಾಂಧೀಜಿ ಅವರು ಆಳವಾದ ಪ್ರಭಾವವನ್ನು ಬೀರಿದ್ದರು. ಮುಖ್ಯವಾಗಿ ಅಹಿಂಸಾತ್ಮಕ ಪ್ರತಿರೋಧ ಮತ್ತು ಸತ್ಯಾಗ್ರಹದ ಮೂಲಕ…
ನಮ್ಮ ತಂದೆ ಪೋರ್ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ…