ಮೈಸೂರು : .(ಕರ್ನಾಟಕ ವಾರ್ತೆ):- ೨೦೨೨-೨೩ ಸಾಲಿಗೆ ಸಹಕಾರಿಗಳಿಗಾಗಿ yಶಸ್ವಿನಿ ಸಹಕಾರ ರೈತರ ಆರೋಗ್ಯ ರಕ್ಷಣ ಯೋಜನೆಯನ್ನು ರಾಜ್ಯದಲ್ಲಿ ಮರು ಜಾರಿಗೊಳಿಸಿ ಆದೇಶಿಸಿರುತ್ತದೆ. ಈ ಯೋಜನೆಯ ಬಗ್ಗೆ ಮಾರ್ಗಸೂಚಿಗಳನ್ನು ನೀಡಲಾಗಿದ್ದು, ಮಾರ್ಗಸೂಚಿಯಲ್ಲಿ ತಿಸಿರುವಂತೆ ಸದರಿ ಯೋಜನೆಯಡಿ ೧೬೫೦ ಖಾಯಿಲೆಗಳಿಗೆ ಶಸ್ತ್ರ ಚಿಕಿತ್ಸೆಗಳನ್ನು ಒಳಗೊಂಡಂತೆ ಚಿಕಿತ್ಸೆ ನೀಡಲಾಗುತ್ತದೆ. ಈ ಹಿಂದೆ ಯಶಸ್ವಿನಿ ಯೋಜನೆಯಲ್ಲಿ ನೊಂದಾಯಿಸಿದ ನೆಟ್ವರ್ಕ್ ಆಸ್ಪತ್ರೆಗಳನ್ನೇ ಮುಂದುವರೆಸಲಾಗಿರುತ್ತದೆ.
ಮೈಸೂರು ಜಿಲ್ಲೆಯ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ೦೪ ಸದಸ್ಯರ ಕುಟುಂಬದ ನಗರ ಪ್ರದೇಶಕ್ಕೆ ರೂ.೧೦೦೦/- ಗಳ ವಂತಿಗೆ ಮತ್ತು ಗ್ರಾಮೀಣ/ ಸ್ವಸಹಾಯ ಗುಂಪುಗಳಿಗೆ ರೂ.೫೦೦/- ಗಳ ವಂತಿಗೆಯನ್ನು ಪಾವತಿಸುವುದು, ಪ್ರತಿ ಹೆಚ್ಚುವರಿ ಸದಸ್ಯರಿಗೆ ಶೇ.೨೦ ಅಂದರೆ ರೂ.೧೦೦/- ಗಳನ್ನು ಪಾವತಿಸಿ ಯೋಜನೆಯ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಸಹಕಾರಿಗಳು ಸಂಘಕ್ಕೆ ಭೇಟಿ ನೀಡಿ ತಮ್ಮ ಕುಟುಂಬದ ಸದಸ್ಯರ ಆಧಾರ ಕಾರ್ಡ್, ಪಡಿತರ ಕಾರ್ಡು ಮತ್ತು ಭಾವಚಿತ್ರಗಳನ್ನು ಕಾರ್ಯದರ್ಶಿಗಳಿಗೆ ನೀಡಿ ನೊಂದಣಿ ಮಾಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೨೧-೨೫೨೧೯೫೬ ಮತ್ತು ೦೮೨೧-೨೪೪೩೩೨೧ ನ್ನು ಸಂಪರ್ಕಿಸಿ ಎಂದು ಮೈಸೂರು ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ಜಿ.ಆರ್.ವಿಜಯ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…