ಮೈಸೂರು : .(ಕರ್ನಾಟಕ ವಾರ್ತೆ):- ೨೦೨೨-೨೩ ಸಾಲಿಗೆ ಸಹಕಾರಿಗಳಿಗಾಗಿ yಶಸ್ವಿನಿ ಸಹಕಾರ ರೈತರ ಆರೋಗ್ಯ ರಕ್ಷಣ ಯೋಜನೆಯನ್ನು ರಾಜ್ಯದಲ್ಲಿ ಮರು ಜಾರಿಗೊಳಿಸಿ ಆದೇಶಿಸಿರುತ್ತದೆ. ಈ ಯೋಜನೆಯ ಬಗ್ಗೆ ಮಾರ್ಗಸೂಚಿಗಳನ್ನು ನೀಡಲಾಗಿದ್ದು, ಮಾರ್ಗಸೂಚಿಯಲ್ಲಿ ತಿಸಿರುವಂತೆ ಸದರಿ ಯೋಜನೆಯಡಿ ೧೬೫೦ ಖಾಯಿಲೆಗಳಿಗೆ ಶಸ್ತ್ರ ಚಿಕಿತ್ಸೆಗಳನ್ನು ಒಳಗೊಂಡಂತೆ ಚಿಕಿತ್ಸೆ ನೀಡಲಾಗುತ್ತದೆ. ಈ ಹಿಂದೆ ಯಶಸ್ವಿನಿ ಯೋಜನೆಯಲ್ಲಿ ನೊಂದಾಯಿಸಿದ ನೆಟ್ವರ್ಕ್ ಆಸ್ಪತ್ರೆಗಳನ್ನೇ ಮುಂದುವರೆಸಲಾಗಿರುತ್ತದೆ.
ಮೈಸೂರು ಜಿಲ್ಲೆಯ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ೦೪ ಸದಸ್ಯರ ಕುಟುಂಬದ ನಗರ ಪ್ರದೇಶಕ್ಕೆ ರೂ.೧೦೦೦/- ಗಳ ವಂತಿಗೆ ಮತ್ತು ಗ್ರಾಮೀಣ/ ಸ್ವಸಹಾಯ ಗುಂಪುಗಳಿಗೆ ರೂ.೫೦೦/- ಗಳ ವಂತಿಗೆಯನ್ನು ಪಾವತಿಸುವುದು, ಪ್ರತಿ ಹೆಚ್ಚುವರಿ ಸದಸ್ಯರಿಗೆ ಶೇ.೨೦ ಅಂದರೆ ರೂ.೧೦೦/- ಗಳನ್ನು ಪಾವತಿಸಿ ಯೋಜನೆಯ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಸಹಕಾರಿಗಳು ಸಂಘಕ್ಕೆ ಭೇಟಿ ನೀಡಿ ತಮ್ಮ ಕುಟುಂಬದ ಸದಸ್ಯರ ಆಧಾರ ಕಾರ್ಡ್, ಪಡಿತರ ಕಾರ್ಡು ಮತ್ತು ಭಾವಚಿತ್ರಗಳನ್ನು ಕಾರ್ಯದರ್ಶಿಗಳಿಗೆ ನೀಡಿ ನೊಂದಣಿ ಮಾಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೨೧-೨೫೨೧೯೫೬ ಮತ್ತು ೦೮೨೧-೨೪೪೩೩೨೧ ನ್ನು ಸಂಪರ್ಕಿಸಿ ಎಂದು ಮೈಸೂರು ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ಜಿ.ಆರ್.ವಿಜಯ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…