ಮೈಸೂರು : .(ಕರ್ನಾಟಕ ವಾರ್ತೆ):- ೨೦೨೨-೨೩ ಸಾಲಿಗೆ ಸಹಕಾರಿಗಳಿಗಾಗಿ yಶಸ್ವಿನಿ ಸಹಕಾರ ರೈತರ ಆರೋಗ್ಯ ರಕ್ಷಣ ಯೋಜನೆಯನ್ನು ರಾಜ್ಯದಲ್ಲಿ ಮರು ಜಾರಿಗೊಳಿಸಿ ಆದೇಶಿಸಿರುತ್ತದೆ. ಈ ಯೋಜನೆಯ ಬಗ್ಗೆ ಮಾರ್ಗಸೂಚಿಗಳನ್ನು ನೀಡಲಾಗಿದ್ದು, ಮಾರ್ಗಸೂಚಿಯಲ್ಲಿ ತಿಸಿರುವಂತೆ ಸದರಿ ಯೋಜನೆಯಡಿ ೧೬೫೦ ಖಾಯಿಲೆಗಳಿಗೆ ಶಸ್ತ್ರ ಚಿಕಿತ್ಸೆಗಳನ್ನು ಒಳಗೊಂಡಂತೆ ಚಿಕಿತ್ಸೆ ನೀಡಲಾಗುತ್ತದೆ. ಈ ಹಿಂದೆ ಯಶಸ್ವಿನಿ ಯೋಜನೆಯಲ್ಲಿ ನೊಂದಾಯಿಸಿದ ನೆಟ್ವರ್ಕ್ ಆಸ್ಪತ್ರೆಗಳನ್ನೇ ಮುಂದುವರೆಸಲಾಗಿರುತ್ತದೆ.
ಮೈಸೂರು ಜಿಲ್ಲೆಯ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ೦೪ ಸದಸ್ಯರ ಕುಟುಂಬದ ನಗರ ಪ್ರದೇಶಕ್ಕೆ ರೂ.೧೦೦೦/- ಗಳ ವಂತಿಗೆ ಮತ್ತು ಗ್ರಾಮೀಣ/ ಸ್ವಸಹಾಯ ಗುಂಪುಗಳಿಗೆ ರೂ.೫೦೦/- ಗಳ ವಂತಿಗೆಯನ್ನು ಪಾವತಿಸುವುದು, ಪ್ರತಿ ಹೆಚ್ಚುವರಿ ಸದಸ್ಯರಿಗೆ ಶೇ.೨೦ ಅಂದರೆ ರೂ.೧೦೦/- ಗಳನ್ನು ಪಾವತಿಸಿ ಯೋಜನೆಯ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಸಹಕಾರಿಗಳು ಸಂಘಕ್ಕೆ ಭೇಟಿ ನೀಡಿ ತಮ್ಮ ಕುಟುಂಬದ ಸದಸ್ಯರ ಆಧಾರ ಕಾರ್ಡ್, ಪಡಿತರ ಕಾರ್ಡು ಮತ್ತು ಭಾವಚಿತ್ರಗಳನ್ನು ಕಾರ್ಯದರ್ಶಿಗಳಿಗೆ ನೀಡಿ ನೊಂದಣಿ ಮಾಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೨೧-೨೫೨೧೯೫೬ ಮತ್ತು ೦೮೨೧-೨೪೪೩೩೨೧ ನ್ನು ಸಂಪರ್ಕಿಸಿ ಎಂದು ಮೈಸೂರು ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ಜಿ.ಆರ್.ವಿಜಯ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…