ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ಅವರ ಅಂತ್ಯಕ್ರಿಯೆಯು ಶನಿವಾರ ಸಿದ್ದರಾಮನಹುಂಡಿ ಪಕ್ಕದ ಹೊಸಹಳ್ಳಿ ಬಳಿ ಇರುವ ಜಮೀನಿನಲ್ಲಿ ನೆರವೇರಿತು. ಸಿದ್ದರಾಮಯ್ಯ ಅವರ ತಂದೆ, ತಾಯಿ, ಅಣ್ಣನ ಸಮಾಧಿ ಬಳಿಯೇ ಕಿರಿಯ ತಮ್ಮನ ಪಾರ್ಥೀವ ಶರೀರವನ್ನು ಮಣ್ಣು ಮಾಡಲಾಯಿತು.
ತೀವ್ರ ಅನಾರೋಗ್ಯದಿಂದ ರಾಮೇಗೌಡ ಶುಕ್ರವಾರ ರಾತ್ರಿ ಮೃತಪಟ್ಟಿದ್ದರು. ಬೆಳಿಗ್ಗೆಯೇ ಬೆಂಗಳೂರಿನಿಂದ ಹೊರಟು ಸಿದ್ದರಾಮನಹುಂಡಿಗೆ ಬಂದ ಮಾಜಿ ಸಿಎಂ ಸಿದ್ದರಾಮಯ್ಯ, ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಪಾರ್ಥೀವ ಶರೀರದ ದರ್ಶನ ಪಡೆದರು. ಬಳಿಕ ಚಿಕ್ಕಪ್ಪನ ಪಾರ್ಥೀವ ಶರೀರಕ್ಕೆ ಹೆಗಲು ಕೊಟ್ಟ ಶಾಸಕ ಡಾ. ಯತೀಂದ್ರ ಭಾವುಕರಾದರು. ಚಿಕ್ಕಪ್ಪನ ಪಾರ್ಥಿವ ಶರೀರಕ್ಕೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹೆಗಲು ನೀಡಿದರು.
ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ…
ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ.…
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ…
ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ…
ಕೆ.ಬಿ.ರಮೇಶನಾಯಕ ಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಮೈಸೂರು: ಬಡವರ ಕೈಗೆಟುಕುವ ದರದಲ್ಲಿ ಗುಣಮಟ್ಟದ ತಿಂಡಿ, ಊಟವನ್ನು…