ಜಿಲ್ಲೆಗಳು

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಯೋಧ ನಾಪಂಡ ಸಿ. ಮಹೇಶ್ ಅಂತ್ಯಕ್ರಿಯೆ

ಸೋಮವಾರಪೇಟೆ: ಕರ್ತವ್ಯದಲ್ಲಿದ್ದ ಸಂದರ್ಭವೇ ಉತ್ತರಾಖಂಡ್‌ನ ಜೋಷಿಮಟ್‌ನಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ತಾಕೇರಿ ಗ್ರಾಮದ ಯೋಧ ನಾಪಂಡ ಸಿ. ಮಹೇಶ್(೪೬) ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು.

ಕಿರಗಂದೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಟ್ಟು ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ನಂತರ ಮೆರವಣಿಗೆ ಮೂಲಕ ಸ್ವಗ್ರಾಮಕ್ಕೆ ಕೊಂಡೊಯ್ದು, ಅಂತ್ಯಕ್ರಿಯೆ ನೆರವೇರಿಸಲಾಯಿತು.

ಕುಟುಂಬಸ್ಥರು, ಸುತ್ತಮುತ್ತಲ ಗ್ರಾಮಸ್ಥರು, ಮಾಜೀ ಸೈನಿಕರು, ಹಿತೈಷಿಗಳು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಉತ್ತರಾಖಂಡ್‌ನ ಜೋಷಿಮಟ್‌ನಿಂದ ಆಗಮಿಸಿದ್ದ ಸುಬೇದಾರ್ ವಿ. ಮಣಿ, ಹವಾಲ್ದಾರ್ ಪ್ರಸಾದ್, ನಾಯಕ್ ಟಿ.ಆರ್. ರಾಹುಲ್ ಅವರುಗಳು ರಾಷ್ಟ್ರಧ್ವಜವನ್ನು ಶವಪೆಟ್ಟಿಗೆಯ ಮೇಲಿರಿಸಿ ನಮನ ಸಲ್ಲಿಸಿದರು.

ಕೊಡಗು ಪೊಲೀಸ್ ಇಲಾಖೆಯ ವತಿಯಿಂದ ಡಿವೈಎಸ್‌ಪಿ ಗಂಗಾಧರಪ್ಪ, ಪೊಲೀಸ್ ಇನ್ಸ್‌ಪೆಕ್ಟರ್ ರಾಮಚಂದ್ರ ನಾಯಕ್ ಅವರುಗಳು ಹೂಗುಚ್ಛ ಅರ್ಪಿಸಿ ಗೌರವ ವಂದನೆ ಸಲ್ಲಿಸಿದರು. ಮಡಿಕೇರಿ ಡಿಎಆರ್ ಘಟಕದ ಸಿಬ್ಬಂದಿಗಳು ಆರಕ್ಷಕ ಉಪನಿರೀಕ್ಷಕ ಡಿ. ಬಸವರಾಜ ಅವರ ನೇತೃತ್ವದಲ್ಲಿ ಕುಶಾಲತೋಪು ಸಿಡಿಸಿದರು. ಎಎಸ್‌ಐ ಸಿದ್ದೇಶ್ ಅವರ ನೇತೃತ್ವದಲ್ಲಿ ಪೊಲೀಸರ ತಂಡ ಬ್ಯಾಂಡ್ ಬಾರಿಸಿ ನಮನ ಸಲ್ಲಿಸಿತು.

ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ತಹಶೀಲ್ದಾರ್ ನರಗುಂದ್ ಸೇರಿದಂತೆ ಕಂದಾಯ ಇಲಾಖಾ ಅಧಿಕಾರಿಗಳು, ಕಿರಗಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಘು ಸೇರಿದಂತೆ ಸದಸ್ಯರುಗಳು, ಗ್ರಾಮಾಭಿವೃದ್ಧಿ ಸಮಿತಿ ಪ್ರಮುಖರು, ಗ್ರಾಮದ ಹಿರಿಯರು ಅಂತ್ಯಕ್ರಿಯೆ ಸಂದರ್ಭ ಭಾಗಿಯಾಗಿ ನಮನ ಸಲ್ಲಿಸಿದರು.

andolana

Recent Posts

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

54 mins ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

1 hour ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

1 hour ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

1 hour ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

3 hours ago