ಜಿಲ್ಲೆಗಳು

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಯೋಧ ನಾಪಂಡ ಸಿ. ಮಹೇಶ್ ಅಂತ್ಯಕ್ರಿಯೆ

ಸೋಮವಾರಪೇಟೆ: ಕರ್ತವ್ಯದಲ್ಲಿದ್ದ ಸಂದರ್ಭವೇ ಉತ್ತರಾಖಂಡ್‌ನ ಜೋಷಿಮಟ್‌ನಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ತಾಕೇರಿ ಗ್ರಾಮದ ಯೋಧ ನಾಪಂಡ ಸಿ. ಮಹೇಶ್(೪೬) ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು.

ಕಿರಗಂದೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಟ್ಟು ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ನಂತರ ಮೆರವಣಿಗೆ ಮೂಲಕ ಸ್ವಗ್ರಾಮಕ್ಕೆ ಕೊಂಡೊಯ್ದು, ಅಂತ್ಯಕ್ರಿಯೆ ನೆರವೇರಿಸಲಾಯಿತು.

ಕುಟುಂಬಸ್ಥರು, ಸುತ್ತಮುತ್ತಲ ಗ್ರಾಮಸ್ಥರು, ಮಾಜೀ ಸೈನಿಕರು, ಹಿತೈಷಿಗಳು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಉತ್ತರಾಖಂಡ್‌ನ ಜೋಷಿಮಟ್‌ನಿಂದ ಆಗಮಿಸಿದ್ದ ಸುಬೇದಾರ್ ವಿ. ಮಣಿ, ಹವಾಲ್ದಾರ್ ಪ್ರಸಾದ್, ನಾಯಕ್ ಟಿ.ಆರ್. ರಾಹುಲ್ ಅವರುಗಳು ರಾಷ್ಟ್ರಧ್ವಜವನ್ನು ಶವಪೆಟ್ಟಿಗೆಯ ಮೇಲಿರಿಸಿ ನಮನ ಸಲ್ಲಿಸಿದರು.

ಕೊಡಗು ಪೊಲೀಸ್ ಇಲಾಖೆಯ ವತಿಯಿಂದ ಡಿವೈಎಸ್‌ಪಿ ಗಂಗಾಧರಪ್ಪ, ಪೊಲೀಸ್ ಇನ್ಸ್‌ಪೆಕ್ಟರ್ ರಾಮಚಂದ್ರ ನಾಯಕ್ ಅವರುಗಳು ಹೂಗುಚ್ಛ ಅರ್ಪಿಸಿ ಗೌರವ ವಂದನೆ ಸಲ್ಲಿಸಿದರು. ಮಡಿಕೇರಿ ಡಿಎಆರ್ ಘಟಕದ ಸಿಬ್ಬಂದಿಗಳು ಆರಕ್ಷಕ ಉಪನಿರೀಕ್ಷಕ ಡಿ. ಬಸವರಾಜ ಅವರ ನೇತೃತ್ವದಲ್ಲಿ ಕುಶಾಲತೋಪು ಸಿಡಿಸಿದರು. ಎಎಸ್‌ಐ ಸಿದ್ದೇಶ್ ಅವರ ನೇತೃತ್ವದಲ್ಲಿ ಪೊಲೀಸರ ತಂಡ ಬ್ಯಾಂಡ್ ಬಾರಿಸಿ ನಮನ ಸಲ್ಲಿಸಿತು.

ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ತಹಶೀಲ್ದಾರ್ ನರಗುಂದ್ ಸೇರಿದಂತೆ ಕಂದಾಯ ಇಲಾಖಾ ಅಧಿಕಾರಿಗಳು, ಕಿರಗಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಘು ಸೇರಿದಂತೆ ಸದಸ್ಯರುಗಳು, ಗ್ರಾಮಾಭಿವೃದ್ಧಿ ಸಮಿತಿ ಪ್ರಮುಖರು, ಗ್ರಾಮದ ಹಿರಿಯರು ಅಂತ್ಯಕ್ರಿಯೆ ಸಂದರ್ಭ ಭಾಗಿಯಾಗಿ ನಮನ ಸಲ್ಲಿಸಿದರು.

andolana

Recent Posts

ನನ್ನ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳಿಗೆ ನೇಮಕಾತಿ: ಸಚಿವ ಪರಮೇಶ್ವರ್‌

ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್‌ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್‌…

53 mins ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…

1 hour ago

ಶಾಸಕರ ಪತ್ರಾಸ್ತ್ರ ; ಸಿಎಂಗೆ ಬಲ

ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…

1 hour ago

ಕಳವು ಪ್ರಕರಣ ಬೇಧಿಸುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿ: ಸೀಮಾ ಲಾಟ್ಕರ್‌ ಸಂತಸ

ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…

2 hours ago

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ ಅರಾಜಕತೆ ಗ್ಯಾರಂಟಿ: ಆರ್.‌ಅಶೋಕ್‌ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…

2 hours ago

ಮಡಿಕೇರಿ| 20 ಅಡಿ ಆಳದ ಗದ್ದೆಗೆ ಉರುಳಿದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…

2 hours ago