ಸೋಮವಾರಪೇಟೆ: ಕರ್ತವ್ಯದಲ್ಲಿದ್ದ ಸಂದರ್ಭವೇ ಉತ್ತರಾಖಂಡ್ನ ಜೋಷಿಮಟ್ನಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ತಾಕೇರಿ ಗ್ರಾಮದ ಯೋಧ ನಾಪಂಡ ಸಿ. ಮಹೇಶ್(೪೬) ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು.
ಕಿರಗಂದೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಟ್ಟು ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ನಂತರ ಮೆರವಣಿಗೆ ಮೂಲಕ ಸ್ವಗ್ರಾಮಕ್ಕೆ ಕೊಂಡೊಯ್ದು, ಅಂತ್ಯಕ್ರಿಯೆ ನೆರವೇರಿಸಲಾಯಿತು.
ಕುಟುಂಬಸ್ಥರು, ಸುತ್ತಮುತ್ತಲ ಗ್ರಾಮಸ್ಥರು, ಮಾಜೀ ಸೈನಿಕರು, ಹಿತೈಷಿಗಳು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಉತ್ತರಾಖಂಡ್ನ ಜೋಷಿಮಟ್ನಿಂದ ಆಗಮಿಸಿದ್ದ ಸುಬೇದಾರ್ ವಿ. ಮಣಿ, ಹವಾಲ್ದಾರ್ ಪ್ರಸಾದ್, ನಾಯಕ್ ಟಿ.ಆರ್. ರಾಹುಲ್ ಅವರುಗಳು ರಾಷ್ಟ್ರಧ್ವಜವನ್ನು ಶವಪೆಟ್ಟಿಗೆಯ ಮೇಲಿರಿಸಿ ನಮನ ಸಲ್ಲಿಸಿದರು.
ಕೊಡಗು ಪೊಲೀಸ್ ಇಲಾಖೆಯ ವತಿಯಿಂದ ಡಿವೈಎಸ್ಪಿ ಗಂಗಾಧರಪ್ಪ, ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್ ಅವರುಗಳು ಹೂಗುಚ್ಛ ಅರ್ಪಿಸಿ ಗೌರವ ವಂದನೆ ಸಲ್ಲಿಸಿದರು. ಮಡಿಕೇರಿ ಡಿಎಆರ್ ಘಟಕದ ಸಿಬ್ಬಂದಿಗಳು ಆರಕ್ಷಕ ಉಪನಿರೀಕ್ಷಕ ಡಿ. ಬಸವರಾಜ ಅವರ ನೇತೃತ್ವದಲ್ಲಿ ಕುಶಾಲತೋಪು ಸಿಡಿಸಿದರು. ಎಎಸ್ಐ ಸಿದ್ದೇಶ್ ಅವರ ನೇತೃತ್ವದಲ್ಲಿ ಪೊಲೀಸರ ತಂಡ ಬ್ಯಾಂಡ್ ಬಾರಿಸಿ ನಮನ ಸಲ್ಲಿಸಿತು.
ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ತಹಶೀಲ್ದಾರ್ ನರಗುಂದ್ ಸೇರಿದಂತೆ ಕಂದಾಯ ಇಲಾಖಾ ಅಧಿಕಾರಿಗಳು, ಕಿರಗಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಘು ಸೇರಿದಂತೆ ಸದಸ್ಯರುಗಳು, ಗ್ರಾಮಾಭಿವೃದ್ಧಿ ಸಮಿತಿ ಪ್ರಮುಖರು, ಗ್ರಾಮದ ಹಿರಿಯರು ಅಂತ್ಯಕ್ರಿಯೆ ಸಂದರ್ಭ ಭಾಗಿಯಾಗಿ ನಮನ ಸಲ್ಲಿಸಿದರು.
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…