ಜಿಲ್ಲೆಗಳು

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಯೋಧ ನಾಪಂಡ ಸಿ. ಮಹೇಶ್ ಅಂತ್ಯಕ್ರಿಯೆ

ಸೋಮವಾರಪೇಟೆ: ಕರ್ತವ್ಯದಲ್ಲಿದ್ದ ಸಂದರ್ಭವೇ ಉತ್ತರಾಖಂಡ್‌ನ ಜೋಷಿಮಟ್‌ನಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ತಾಕೇರಿ ಗ್ರಾಮದ ಯೋಧ ನಾಪಂಡ ಸಿ. ಮಹೇಶ್(೪೬) ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು.

ಕಿರಗಂದೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಟ್ಟು ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ನಂತರ ಮೆರವಣಿಗೆ ಮೂಲಕ ಸ್ವಗ್ರಾಮಕ್ಕೆ ಕೊಂಡೊಯ್ದು, ಅಂತ್ಯಕ್ರಿಯೆ ನೆರವೇರಿಸಲಾಯಿತು.

ಕುಟುಂಬಸ್ಥರು, ಸುತ್ತಮುತ್ತಲ ಗ್ರಾಮಸ್ಥರು, ಮಾಜೀ ಸೈನಿಕರು, ಹಿತೈಷಿಗಳು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಉತ್ತರಾಖಂಡ್‌ನ ಜೋಷಿಮಟ್‌ನಿಂದ ಆಗಮಿಸಿದ್ದ ಸುಬೇದಾರ್ ವಿ. ಮಣಿ, ಹವಾಲ್ದಾರ್ ಪ್ರಸಾದ್, ನಾಯಕ್ ಟಿ.ಆರ್. ರಾಹುಲ್ ಅವರುಗಳು ರಾಷ್ಟ್ರಧ್ವಜವನ್ನು ಶವಪೆಟ್ಟಿಗೆಯ ಮೇಲಿರಿಸಿ ನಮನ ಸಲ್ಲಿಸಿದರು.

ಕೊಡಗು ಪೊಲೀಸ್ ಇಲಾಖೆಯ ವತಿಯಿಂದ ಡಿವೈಎಸ್‌ಪಿ ಗಂಗಾಧರಪ್ಪ, ಪೊಲೀಸ್ ಇನ್ಸ್‌ಪೆಕ್ಟರ್ ರಾಮಚಂದ್ರ ನಾಯಕ್ ಅವರುಗಳು ಹೂಗುಚ್ಛ ಅರ್ಪಿಸಿ ಗೌರವ ವಂದನೆ ಸಲ್ಲಿಸಿದರು. ಮಡಿಕೇರಿ ಡಿಎಆರ್ ಘಟಕದ ಸಿಬ್ಬಂದಿಗಳು ಆರಕ್ಷಕ ಉಪನಿರೀಕ್ಷಕ ಡಿ. ಬಸವರಾಜ ಅವರ ನೇತೃತ್ವದಲ್ಲಿ ಕುಶಾಲತೋಪು ಸಿಡಿಸಿದರು. ಎಎಸ್‌ಐ ಸಿದ್ದೇಶ್ ಅವರ ನೇತೃತ್ವದಲ್ಲಿ ಪೊಲೀಸರ ತಂಡ ಬ್ಯಾಂಡ್ ಬಾರಿಸಿ ನಮನ ಸಲ್ಲಿಸಿತು.

ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ತಹಶೀಲ್ದಾರ್ ನರಗುಂದ್ ಸೇರಿದಂತೆ ಕಂದಾಯ ಇಲಾಖಾ ಅಧಿಕಾರಿಗಳು, ಕಿರಗಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಘು ಸೇರಿದಂತೆ ಸದಸ್ಯರುಗಳು, ಗ್ರಾಮಾಭಿವೃದ್ಧಿ ಸಮಿತಿ ಪ್ರಮುಖರು, ಗ್ರಾಮದ ಹಿರಿಯರು ಅಂತ್ಯಕ್ರಿಯೆ ಸಂದರ್ಭ ಭಾಗಿಯಾಗಿ ನಮನ ಸಲ್ಲಿಸಿದರು.

andolana

Recent Posts

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

44 mins ago

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಪೊಲೀಸರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…

52 mins ago

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಠಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

2 hours ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

2 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

5 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಪ್ರತೀ ವಾರಾಂತ್ಯ 100 ಜನರ ಹಸಿವು ತಣಿಸುವ ಸಂಡೇ ಬ್ರೇಕ್‌ಫಾಸ್ಟ್‌

2023ರಿಂದ "ಮಾತೋಶ್ರೀ ಫೌಂಡೇಶನ್‌"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…

5 hours ago