ಜಿಲ್ಲೆಗಳು

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಯೋಧ ನಾಪಂಡ ಸಿ. ಮಹೇಶ್ ಅಂತ್ಯಕ್ರಿಯೆ

ಸೋಮವಾರಪೇಟೆ: ಕರ್ತವ್ಯದಲ್ಲಿದ್ದ ಸಂದರ್ಭವೇ ಉತ್ತರಾಖಂಡ್‌ನ ಜೋಷಿಮಟ್‌ನಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ತಾಕೇರಿ ಗ್ರಾಮದ ಯೋಧ ನಾಪಂಡ ಸಿ. ಮಹೇಶ್(೪೬) ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು.

ಕಿರಗಂದೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಟ್ಟು ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ನಂತರ ಮೆರವಣಿಗೆ ಮೂಲಕ ಸ್ವಗ್ರಾಮಕ್ಕೆ ಕೊಂಡೊಯ್ದು, ಅಂತ್ಯಕ್ರಿಯೆ ನೆರವೇರಿಸಲಾಯಿತು.

ಕುಟುಂಬಸ್ಥರು, ಸುತ್ತಮುತ್ತಲ ಗ್ರಾಮಸ್ಥರು, ಮಾಜೀ ಸೈನಿಕರು, ಹಿತೈಷಿಗಳು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಉತ್ತರಾಖಂಡ್‌ನ ಜೋಷಿಮಟ್‌ನಿಂದ ಆಗಮಿಸಿದ್ದ ಸುಬೇದಾರ್ ವಿ. ಮಣಿ, ಹವಾಲ್ದಾರ್ ಪ್ರಸಾದ್, ನಾಯಕ್ ಟಿ.ಆರ್. ರಾಹುಲ್ ಅವರುಗಳು ರಾಷ್ಟ್ರಧ್ವಜವನ್ನು ಶವಪೆಟ್ಟಿಗೆಯ ಮೇಲಿರಿಸಿ ನಮನ ಸಲ್ಲಿಸಿದರು.

ಕೊಡಗು ಪೊಲೀಸ್ ಇಲಾಖೆಯ ವತಿಯಿಂದ ಡಿವೈಎಸ್‌ಪಿ ಗಂಗಾಧರಪ್ಪ, ಪೊಲೀಸ್ ಇನ್ಸ್‌ಪೆಕ್ಟರ್ ರಾಮಚಂದ್ರ ನಾಯಕ್ ಅವರುಗಳು ಹೂಗುಚ್ಛ ಅರ್ಪಿಸಿ ಗೌರವ ವಂದನೆ ಸಲ್ಲಿಸಿದರು. ಮಡಿಕೇರಿ ಡಿಎಆರ್ ಘಟಕದ ಸಿಬ್ಬಂದಿಗಳು ಆರಕ್ಷಕ ಉಪನಿರೀಕ್ಷಕ ಡಿ. ಬಸವರಾಜ ಅವರ ನೇತೃತ್ವದಲ್ಲಿ ಕುಶಾಲತೋಪು ಸಿಡಿಸಿದರು. ಎಎಸ್‌ಐ ಸಿದ್ದೇಶ್ ಅವರ ನೇತೃತ್ವದಲ್ಲಿ ಪೊಲೀಸರ ತಂಡ ಬ್ಯಾಂಡ್ ಬಾರಿಸಿ ನಮನ ಸಲ್ಲಿಸಿತು.

ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ತಹಶೀಲ್ದಾರ್ ನರಗುಂದ್ ಸೇರಿದಂತೆ ಕಂದಾಯ ಇಲಾಖಾ ಅಧಿಕಾರಿಗಳು, ಕಿರಗಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಘು ಸೇರಿದಂತೆ ಸದಸ್ಯರುಗಳು, ಗ್ರಾಮಾಭಿವೃದ್ಧಿ ಸಮಿತಿ ಪ್ರಮುಖರು, ಗ್ರಾಮದ ಹಿರಿಯರು ಅಂತ್ಯಕ್ರಿಯೆ ಸಂದರ್ಭ ಭಾಗಿಯಾಗಿ ನಮನ ಸಲ್ಲಿಸಿದರು.

andolana

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

10 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

10 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

11 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

12 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

12 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

13 hours ago