ಜಿಲ್ಲೆಗಳು

ಕುಸಿಯುವ ಸ್ಥಿತಿಯಲ್ಲಿ ಯೋಗಾ ನರಸಿಂಹ ದೇಗುಲ

ನಾಗಮಂಗಲ: ತಾಲ್ಲೂಕಿನ ಬೆಳ್ಳೂರು ಹೋಬಳಿಯ ದಡಿಗ ಗ್ರಾಮದಲ್ಲಿ ಹಲವು ಐತಿಹಾಸಿಕ ದೇವಾಲಯಗಳಿದ್ದು, ಅವುಗಳಲ್ಲಿ ಪ್ರಸಿದ್ಧವಾಗಿರುವ ಯೋಗಾನರಸಿಂಹ ದೇವಾಲಯವು ಸಂಪೂರ್ಣ ಶಿಥಿಲಗೊಂಡಿದೆ. ನಿರ್ವಹಣೆಯಿಲ್ಲದೆ ಗರ್ಭಗೃಹದ ಗೋಡೆಗಳು, ಕಂಬಗಳೂ ಸೇರಿದಂತೆ ಸಂಪೂರ್ಣ ದೇವಾಲಯವೇ ಕುಸಿಯುವ ಭೀತಿಯಲ್ಲಿದೆ.ತಾಲ್ಲೂಕಿನ ಬೆಳ್ಳೂರು ಕ್ರಾಸ್‌ನಿಂದ ಸುಮಾರು 7 ಕಿ.ಮೀ ದೂರದಲ್ಲಿರುವ ದಡಿಗನ ಕೆರೆಯ ಕೋಡಿಯ ಬಳಿ ಇದ್ದ ಕೋಡಿಹಳ್ಳಿಯು ಹಿಂದೆ ಅಗ್ರಹಾರವಾಗಿತ್ತು ಎನ್ನಲಾಗುತ್ತಿದೆ. ಕೆರೆಯ ಉತ್ತರ ದಿಕ್ಕಿಗೆ ದಡಿಗ ಗ್ರಾಮವಿದ್ದು, ಇದು ಗಂಗರ ಅರಸನಾದ ದಡಿಗನ ನೆನಪನ್ನು ತರುತ್ತದೆ.

ಗ್ರಾಮದಲ್ಲಿರುವ ಯೋಗಾನರಸಿಂಹ ದೇವಾಲಯ ಮತ್ತು ಕೋಡಿಹಳ್ಳಿಯ ದಡಿಗೇಶ್ವರ ದೇವಾಲಯಗಳು ಇಟ್ಟಿಗೆಗಳಿಂದ ನಿರ್ಮಾಣವಾಗಿದ್ದು, ಮೇಲ್ನೋಟಕ್ಕೆ ಇತ್ತೀಚೆಗೆ ನಿರ್ಮಾಣ ವಾದಂತೆ ಕಂಡುಬಂದರೂ ದೇವಾಲಯದ ಒಳಭಾಗದಲ್ಲಿರುವ ಕಂಬಗಳು, ಅವುಗಳ ನಡುವಿನ ಅಂಕಣದ ಚಾವಣಿಯಲ್ಲಿ ಉಬ್ಬು ಶಿಲ್ಪದ ಮಾದರಿಯಲ್ಲಿ ರಚಿತವಾಗಿರುವ ಪೂರ್ಣ ಅರಳಿದ ಕಮಲ ಸೇರಿದಂತೆ ಹಲವು ಬಗೆಯ ಕೆತ್ತನೆಗಳು ಈ ದೇವಾಲಯವು ಗಂಗರ ಕಾಲದ ವಾಸ್ತು ಶಿಲ್ಪದ ಮಾದರಿಯಲ್ಲಿ ಕಾಣುತ್ತದೆ. ಅಲ್ಲದೆ, ದೇವಾಲಯದ ಕಂಬಗಳು ಗಂಗರ ಕಾಲದ ಪ್ರಾರಂಭಿಕ ಘಟ್ಟದ ಸ್ವರೂಪವನ್ನು ಹೋಲುತ್ತವೆ. ದೇವಾಲಯದ ಗರ್ಭಗುಡಿಯಲ್ಲಿರುವ ಯೋಗಾನರಸಿಂಹ ಮೂರ್ತಿ ಸುಂದರ ವಾಗಿದ್ದು, ಭಕ್ತರನ್ನು ಸೆಳೆಯುತ್ತಿದೆ.

ನಿರ್ವಹಣೆ ಕೊರತೆ: ಗ್ರಾಮದ ಕೆರೆಯ ಸಮೀಪ ಪುಟ್ಟ ಗುಡ್ಡದ ಮೇಲಿರುವ ಯೋಗಾನರಸಿಂಹ ದೇವಾಲಯವು ಪುರಾತನ ಕಾಲದಲ್ಲಿ ಗ್ರಾಮದ ವೈಭವ ಸಾರುತ್ತಿತ್ತು. ಕಾಲ ಕಳೆದಂತೆ ಗ್ರಾಮಸ್ಥರು, ದೇವಾಲಯದ ಒಕ್ಕಲು ಮನೆತನ ಮತ್ತು ಸಾರ್ವಜನಿಕರ ನಿರ್ಲಕ್ಷ್ಯಕ್ಕೆ ಒಳಗಾಗಿ ಇದೀಗ ಕುಸಿಯುವ ಭೀತಿಯಲ್ಲಿದೆ. ದೇವಾಲಯದ ಮೇಲೆ ಆಲದ ಗಿಡ, ಬಸುರಿಗಿಡ ಸೇರಿದಂತೆ ವಿವಿಧ ಬಗೆಯ ಗಿಡಗಂಟಿಗಳ ಬೇರುಗಳು ದೇವಾಲಯದ ಗೋಡೆಗಳನ್ನು ಆವರಿಸಿವೆ. ಗೋಡೆಯ ಗಾರೆ ಕಿತ್ತು ಬಂದಿದ್ದು, ಇಟ್ಟಿಗೆಗಳೂ ಕುಸಿದಿವೆ.

ಗರ್ಭಗೃಹದ ಗೋಡೆಗಳು ಬಿರುಕು ಬಿಟ್ಟಿದ್ದು, ಮಳೆಯ ನೀರು ದೇವಾಲಯದ ಒಳಕ್ಕೆ ಬರುವಂತಾಗಿದೆ. ಗೋಡೆಗಳು ಬೀಳುವ ಆತಂಕದಿಂದ ಯಾರೋ ಕಲ್ಲಿನ ಕಂಬಗಳನ್ನು ದೇವಾ ಲಯದ ಗೋಡೆಗೆ ಆಸರೆಯಾಗಿ ನಿಲ್ಲಿಸಿ ದ್ದಾರೆ. ಸ್ಥಳೀಯರೊಬ್ಬರ ಆಸಕ್ತಿಯಿಂದ ದಿನಕ್ಕೊಮ್ಮೆ ಪೂಜೆ ನಡೆಯುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ‌. ಗರ್ಭಗೃಹದಲ್ಲಿರುವ ಯೋಗಾನರಸಿಂಹ ಮೂರ್ತಿ ದೈವಕಳೆಯನ್ನು ತುಂಬಿಕೊಂಡಿದೆ.

ಗ್ರಾಮದ ಪುರಾತನ ದೇವಾಲಯಗಳಲ್ಲಿ ಪ್ರಮುಖವಾಗಿರುವ ಯೋಗಾನರಸಿಂಹ ದೇವಾಲಯವು ಗ್ರಾಮದ ಇತಿಹಾಸದ ಕುರುಹಾಗಿದ್ದು, ನಿರ್ಲಕ್ಷ್ಯಕ್ಕೆ ಒಳಗಾಗಿ ಶಿಥಿಲಾವಸ್ಥೆ ತಲುಪಿದೆ. ಯೋಗಾನರಸಿಂಹ ಸ್ವಾಮಿಯು ಗ್ರಾಮದ ಶಕ್ತಿ ದೇವರಾಗಿದ್ದು, ಗ್ರಾಮದಲ್ಲಿ ಕ್ಷಾಮ ಬಂದಾಗ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹರಿಸೇವೆ ಮಾಡಿದರೆ ಮಳೆಯಾಗುತ್ತಿತ್ತು ಎಂಬ ಪ್ರತೀತಿಯಿದೆ‌. ದೇವಾಲಯವು ತಾಲ್ಲೂಕು ಆಡಳಿತ ಮತ್ತು ಪುರಾತತ್ವ ಇಲಾಖೆಗಳ ನಿರ್ಲಕ್ಷ್ಯದಿಂದ ಕಣ್ಮರೆಯಾಗುವತ್ತ ಸಾಗಿದೆ. ಸಂಬಂಧಿಸಿದ ಅಧಿಕಾರಿಗಳು ಮತ್ತು ಇಲಾಖೆ ಗಮನಹರಿಸಿ ದೇವಾಲಯವನ್ನು ರಕ್ಷಿಸಬೇಕಾಗಿದೆ ಎಂದು ಗ್ರಾಮದ ಮುಖಂಡ ದಡಿಗ ಸತೀಶ್ ಆಗ್ರಹಿಸುತ್ತಾರೆ.

lokesh

Recent Posts

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

27 mins ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

37 mins ago

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

45 mins ago

ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…

1 hour ago

ಫಲಿತಾಂಶ ಯಶಸ್ವಿಗೊಳಿಸಲು ಶಾಲೆಯಲ್ಲೇ ವಾಸ್ತವ್ಯ ಹೂಡಿದ ಬಿಇಓ

ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…

2 hours ago

ದೊಡ್ಡಕವಲಂದೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಗಳು: ಸಾಂಕ್ರಾಮಿಕ ರೋಗದ ಭೀತಿ

ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…

2 hours ago