ಮೈಸೂರು: ವಿವಾಹಿತ ವ್ಯಕ್ತಿಯ ಜೊತೆ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿ.ನರಸೀಪುರ ತಾಲ್ಲೂಕಿನ ಕಪಿಲಾ ನದಿಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗ್ರಾಮದ ಮಣಿ(30), ಮೈಸೂರಿನ ರಮಾಬಾಯಿ ನಗರ ನಿವಾಸಿ ವಸಂತ ಮೃತ ದುರ್ದೈವಿಗಳು. ಶುಕ್ರವಾರ ರಾತ್ರಿ 12ರ ವೇಳೆ ಬೈಕ್ನಲ್ಲಿ ಬಂದ ಮಣಿ ಹಾಗೂ ವಸಂತ, ಬೈಕ್ ಅನ್ನು ಕಪಿಲಾ ಸೇತುವೆ ರಸ್ತೆಯಲ್ಲಿಯೇ ನಿಲ್ಲಿಸಿ, ನದಿಗೆ ಹಾರಿದ್ದಾರೆ.ಬೆಳಗ್ಗೆ ಸೇತುವೆ ಮೇಲೆ ಬೈಕ್ ನಿಂತಿದ್ದನ್ನು ನೋಡಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬೈಕ್ ಬಳಿ ಬಂದಿದ್ದಾರೆ. ಆ ವೇಳೆ ಬೈಕ್ನಲ್ಲಿ ಇಟ್ಟಿದ್ದ ಮೊಬೈಲ್ ರಿಂಗ್ ಆಗಿದೆ. ಕರೆ ಸ್ವೀಕರಿಸಿದ ಪೊಲೀಸರು, ಮಣಿ ಸಂಬಂಧಿಕರಿಂದ ಮಾಹಿತಿ ಪಡೆದಿದ್ದಾರೆ. ಆಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಬೆಳಕಿಗೆ ಬಂದಿದೆ.
ಮಣಿ ಸಂಬಂಧಿಕರು ಸ್ಥಳಕ್ಕಾಗಮಿಸಿದ್ದು, ಮಣಿ ಆತ್ಮಹತ್ಯೆಯನ್ನು ಖಚಿತ ಪಡಿಸಿಕೊಂಡಿದ್ದಾರೆ. ಯುವತಿ ಕಡೆಯವರು ಇನ್ನು ಸ್ಥಳಕ್ಕೆ ಆಗಮಿಸಿಲ್ಲ. ಮೃತ ವಿವಾಹಿತನ ಪೋಷಕರು, ಯುವತಿ ಜೊತೆ ಸಂಬಂಧ ಇರಿಸಿಕೊಂಡಿದ್ದ ಎಂದು ಮಾಹಿತಿ ನೀಡಿದ್ದಾರೆ. ವಸಂತಳ ಮೃತದೇಹ ಇನ್ನೂ ಪತ್ತೆಯಾಗಿಲ್ಲ, ವಸಂತಳ ಕುಟುಂಬಸ್ಥರಿಂದ ಮಾಹಿತಿ ಕಲೆಹಾಕಿದ ನಂತರವಷ್ಟೇ ಪೊಲೀಸರಿಗೆ ಸತ್ಯಾಂಶ ತಿಳಿಯಲಿದೆ. ಈ ಸಂಬಂಧ ತಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…
ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…
ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್ಗೆ ನಾವು ನೋಟಿಸ್ ಕೊಡಲು…