ಜಿಲ್ಲೆಗಳು

ವಿವಾಹಿತನ ಜೊತೆ ಯುವತಿ ಸಾವಿಗೆ ಶರಣು

ಮೈಸೂರು: ವಿವಾಹಿತ ವ್ಯಕ್ತಿಯ ಜೊತೆ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿ.ನರಸೀಪುರ ತಾಲ್ಲೂಕಿನ ಕಪಿಲಾ ನದಿಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗ್ರಾಮದ ಮಣಿ(30), ಮೈಸೂರಿನ ರಮಾಬಾಯಿ ನಗರ ನಿವಾಸಿ ವಸಂತ ಮೃತ ದುರ್ದೈವಿಗಳು. ಶುಕ್ರವಾರ ರಾತ್ರಿ 12ರ ವೇಳೆ ಬೈಕ್​ನಲ್ಲಿ ಬಂದ ಮಣಿ ಹಾಗೂ ವಸಂತ, ಬೈಕ್ ಅನ್ನು ಕಪಿಲಾ ಸೇತುವೆ ರಸ್ತೆಯಲ್ಲಿಯೇ ನಿಲ್ಲಿಸಿ, ನದಿಗೆ ಹಾರಿದ್ದಾರೆ.ಬೆಳಗ್ಗೆ ಸೇತುವೆ ಮೇಲೆ ಬೈಕ್ ನಿಂತಿದ್ದನ್ನು ನೋಡಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬೈಕ್ ಬಳಿ ಬಂದಿದ್ದಾರೆ. ಆ ವೇಳೆ ಬೈಕ್​ನಲ್ಲಿ ಇಟ್ಟಿದ್ದ ಮೊಬೈಲ್ ರಿಂಗ್ ಆಗಿದೆ. ಕರೆ ಸ್ವೀಕರಿಸಿದ ಪೊಲೀಸರು, ಮಣಿ ಸಂಬಂಧಿಕರಿಂದ ಮಾಹಿತಿ ಪಡೆದಿದ್ದಾರೆ. ಆಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಬೆಳಕಿಗೆ ಬಂದಿದೆ.
ಮಣಿ ಸಂಬಂಧಿಕರು ಸ್ಥಳಕ್ಕಾಗಮಿಸಿದ್ದು, ಮಣಿ ಆತ್ಮಹತ್ಯೆಯನ್ನು ಖಚಿತ ಪಡಿಸಿಕೊಂಡಿದ್ದಾರೆ. ಯುವತಿ ಕಡೆಯವರು ಇನ್ನು ಸ್ಥಳಕ್ಕೆ ಆಗಮಿಸಿಲ್ಲ. ಮೃತ ವಿವಾಹಿತನ ಪೋಷಕರು, ಯುವತಿ ಜೊತೆ ಸಂಬಂಧ ಇರಿಸಿಕೊಂಡಿದ್ದ ಎಂದು ಮಾಹಿತಿ ನೀಡಿದ್ದಾರೆ. ವಸಂತಳ ಮೃತದೇಹ ಇನ್ನೂ ಪತ್ತೆಯಾಗಿಲ್ಲ, ವಸಂತಳ ಕುಟುಂಬಸ್ಥರಿಂದ ಮಾಹಿತಿ ಕಲೆಹಾಕಿದ ನಂತರವಷ್ಟೇ ಪೊಲೀಸರಿಗೆ ಸತ್ಯಾಂಶ ತಿಳಿಯಲಿದೆ. ಈ ಸಂಬಂಧ ತಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

2 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

2 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

3 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

5 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

8 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

8 hours ago