ಮೈಸೂರು: ವಿವಾಹಿತ ವ್ಯಕ್ತಿಯ ಜೊತೆ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿ.ನರಸೀಪುರ ತಾಲ್ಲೂಕಿನ ಕಪಿಲಾ ನದಿಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗ್ರಾಮದ ಮಣಿ(30), ಮೈಸೂರಿನ ರಮಾಬಾಯಿ ನಗರ ನಿವಾಸಿ ವಸಂತ ಮೃತ ದುರ್ದೈವಿಗಳು. ಶುಕ್ರವಾರ ರಾತ್ರಿ 12ರ ವೇಳೆ ಬೈಕ್ನಲ್ಲಿ ಬಂದ ಮಣಿ ಹಾಗೂ ವಸಂತ, ಬೈಕ್ ಅನ್ನು ಕಪಿಲಾ ಸೇತುವೆ ರಸ್ತೆಯಲ್ಲಿಯೇ ನಿಲ್ಲಿಸಿ, ನದಿಗೆ ಹಾರಿದ್ದಾರೆ.ಬೆಳಗ್ಗೆ ಸೇತುವೆ ಮೇಲೆ ಬೈಕ್ ನಿಂತಿದ್ದನ್ನು ನೋಡಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬೈಕ್ ಬಳಿ ಬಂದಿದ್ದಾರೆ. ಆ ವೇಳೆ ಬೈಕ್ನಲ್ಲಿ ಇಟ್ಟಿದ್ದ ಮೊಬೈಲ್ ರಿಂಗ್ ಆಗಿದೆ. ಕರೆ ಸ್ವೀಕರಿಸಿದ ಪೊಲೀಸರು, ಮಣಿ ಸಂಬಂಧಿಕರಿಂದ ಮಾಹಿತಿ ಪಡೆದಿದ್ದಾರೆ. ಆಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಬೆಳಕಿಗೆ ಬಂದಿದೆ.
ಮಣಿ ಸಂಬಂಧಿಕರು ಸ್ಥಳಕ್ಕಾಗಮಿಸಿದ್ದು, ಮಣಿ ಆತ್ಮಹತ್ಯೆಯನ್ನು ಖಚಿತ ಪಡಿಸಿಕೊಂಡಿದ್ದಾರೆ. ಯುವತಿ ಕಡೆಯವರು ಇನ್ನು ಸ್ಥಳಕ್ಕೆ ಆಗಮಿಸಿಲ್ಲ. ಮೃತ ವಿವಾಹಿತನ ಪೋಷಕರು, ಯುವತಿ ಜೊತೆ ಸಂಬಂಧ ಇರಿಸಿಕೊಂಡಿದ್ದ ಎಂದು ಮಾಹಿತಿ ನೀಡಿದ್ದಾರೆ. ವಸಂತಳ ಮೃತದೇಹ ಇನ್ನೂ ಪತ್ತೆಯಾಗಿಲ್ಲ, ವಸಂತಳ ಕುಟುಂಬಸ್ಥರಿಂದ ಮಾಹಿತಿ ಕಲೆಹಾಕಿದ ನಂತರವಷ್ಟೇ ಪೊಲೀಸರಿಗೆ ಸತ್ಯಾಂಶ ತಿಳಿಯಲಿದೆ. ಈ ಸಂಬಂಧ ತಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…