ಬುದ್ಧವಿಹಾರದಲ್ಲಿ ಎಸ್ಎಫ್ಐನ ೧೧ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ
* ಆಧುನಿಕ ಆಂಜನೇಯರನ್ನು ಸೃಷ್ಟಿಸಿ ಸಾಂಸ್ಕೃತಿಕ ಗುಲಾಮಗಿರಿಗೆ ಮತ್ತೆ ತಳ್ಳಲು ಯತ್ನ
* ಎಸ್ಎಫ್ಐನಿಂದ ನೂತನ ಶಿಕ್ಷಣ ನೀತಿಯ ವಿರುದ್ಧ ದೇಶಾದ್ಯಂತ ತೀವ್ರ ಹೋರಾಟದ ಎಚ್ಚರಿಕೆ
* ಎಸ್ಎಫ್ಐ ನೂತನ ಜಿಲ್ಲಾ ಪದಾಧಿಕಾರಿಗಳ ಆಯ್ಕೆ
ಮೈಸೂರು: ಪ್ರಸ್ತುತ ಆಡಳಿತದಲ್ಲಿರುವ ಸರ್ಕಾರ ಆಧುನಿಕ ಆಂಜನೇಯರನ್ನು ಸೃಷ್ಟಿಸಿ ಸಾಂಸ್ಕೃತಿಕ ಗುಲಾಮಗಿರಿಗೆ ಮತ್ತೆ ತಳ್ಳಲು ಯತ್ನಿಸುತ್ತಿದೆ ಎಂದು ರಂಗಾಯಣ ಮಾಜಿ ನಿರ್ದೇಶಕ ಎಚ್.ಜನಾರ್ಧನ್(ಜನ್ನಿ) ಬೇಸರಿಸಿದರು.
ನಗರದ ಬುದ್ಧವಿಹಾರದಲ್ಲಿ ನಡೆದ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ)ನ ೧೧ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನ ಇಂದು ಅಪಾಯದಲ್ಲಿದೆ. ಸಂವಿಧಾನದಡಿ ಆಯ್ಕೆಯಾದವರೇ ಇಂದು ಸಂವಿಧಾನದ ಆಶಯವನ್ನು ನಾಶ ಮಾಡಲು ನಿಂತಿದ್ದಾರೆ. ಇದನ್ನು ತಡೆಯಲು ವಿದ್ಯಾರ್ಥಿಗಳು ಸಂಘಟಿತರಾಗಬೇಕಿದೆ ಎಂದರು.
ಇಂದು ವಿದ್ಯಾರ್ಥಿಗಳಲ್ಲಿ ವೈಚಾರಿಕತೆ ಬೆಳೆಸಿ, ಬುದ್ಧಿವಂತರನ್ನಾಗಿಸಿ, ಬದುಕಿನ ಮೌಲ್ಯಗಳನ್ನು ಕಲಿಸಬೇಕಾದ ಶಿಕ್ಷಣ, ಇಂದು ಮಕ್ಕಳ ನಡುವೆ ಕಂದಕವನ್ನು ಸೃಷ್ಟಿಸಲು ಎಳೆಯ ಮನಸ್ಸಿನಲ್ಲಿ ಭೇದವನ್ನು ಸೃಷ್ಟಿಸುತ್ತಿದೆ. ಕುವೆಂಪುರವರು ಶತಮಾನಗಳ ಹಿಂದಿಯೇ ನಮಗೆಂತ ಶಿಕ್ಷಣ ಬೇಕು, ನಮಗೆಂತ ವ್ಯವಸ್ಥೆ ಬೇಕು ಎಂದು ಹೇಳಿದ್ದರು. ಆ ಮತದ ಈ ಮತದ ಹಳೆ ಮತದ ಸಹವಾಸ ಸಾಕಿನ್ನು ಸೇರಿರಿ ಮನುಜ ಮತಕ್ಕೆ ಎಂದು ಕರೆ ನೀಡಿದ್ದರು. ಆದರೆ, ಇಂದು ಯುವ ಜನರನ್ನು ಮತಗಳ ವ್ಯಾಮೋಹಕ್ಕೆ ಸಿಲುಕಿಸಲು ಆಳುವವರು ಪಠ್ಯ ಪುಸ್ತಕದ ಕೇಸರೀಕರಣಕ್ಕೆ ಹೊರಟಿದೆ ಎಂದು ಕಿಡಿಕಾರಿದರು.
ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ವಾಸುದೇವ ರೆಡ್ಡಿ ಮಾತನಾಡಿ, ನೂತನ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿಯೇ ಮೊದಲು ಜಾರಿ ಮಾಡುತ್ತೇವೆಂದು ರಾಜ್ಯದ ತುಂಬೆಲ್ಲಾ ಹೇಳಲಾಗುತ್ತಿದೆ. ಆದರೆ, ಈ ನೂತನ ಶಿಕ್ಷಣ ನೀತಿಯ ಉದ್ದೇಶ ಬಡವರು, ದಲಿತರು, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ದೂರ ಇಡುವುದೇ ಆಗಿದೆ. ಈ ನೀತಿ ಶಿಕ್ಷಣದ ಖಾಸಗೀಕರಣವನ್ನು ಪ್ರೋತ್ಸಾಹಿಸುತ್ತದೆ ಹಾಗೂ ಸರ್ಕಾರವನ್ನು ಶಿಕ್ಷಣದ ಹೊಣೆಗಾರಿಕೆಯಿಂದ ದೂರ ಇಡುವ ಹುನ್ನಾರವೂ ಇದೆ ಎಂದು ಹೇಳಿದರು.
ವಿಶ್ವವಿದ್ಯಾನಿಲಯಗಳನ್ನು ದುರ್ಬಲಗೊಳಿಸುವುದು, ಉಪ ಕುಲಪತಿಗಳನ್ನು ಕೇವಲ ಉತ್ಸವ ಮೂರ್ತಿಗಳಾಗಿಸಲು ಈ ನೂತನ ಶಿಕ್ಷಣ ನೀತಿ ಹೊರಟಿದೆ. ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಬೇಕಾದ ಶಿಕ್ಷಣ ಇಂದು ವಿದ್ಯಾರ್ಥಿಗಳನ್ನು, ಯುವಜನರನ್ನು ಶ್ರೀಮಂತ ಕಂಪೆನಿಗಳ ಸೆಕ್ಯೂರಿಟಿ ಗಾರ್ಡ್ಗಳನ್ನಾಗಿ ಮಾಡಲು ಹೊರಟಿದೆ. ಇದರ ವಿರುದ್ಧ ಭಾರತ ವಿದ್ಯಾರ್ಥಿ ಫೆಡರೇಷನ್ ನಿರಂತರವಾಗಿ ಹೋರಾಡುತ್ತಿದೆ. ಮುಂದಿನ ದಿನಗಳಲ್ಲಿ ಈ ನೂತನ ಶಿಕ್ಷಣ ನೀತಿಯ ವಿರುದ್ಧ ದೇಶಾದ್ಯಂತ ತೀವ್ರ ಹೋರಾಟ ನಡೆಸಲಿದೆ ಎಂದು ತಿಳಿಸಿದರು.
ನೂತನ ಪದಾಧಿಕಾರಿಗಳ ಆಯ್ಕೆ: ಜಿಲ್ಲಾಧ್ಯಕ್ಷರಾಗಿ ಟಿ.ಎಸ್.ವಿಜಯ್ ಕುಮಾರ್ , ಜಿಲ್ಲಾ ಕಾರ್ಯದರ್ಶಿಯಾಗಿ ಡಿ.ಅಭಿ, ಉಪಾಧ್ಯಕ್ಷರಾಗಿ ಸಂತೋಷ್, ಪ್ರೀತಮ್, ಮಹೇಂದ್ರ, ಭೂಮಿಕಾ, ಸಹ ಕಾರ್ಯದರ್ಶಿಯಾಗಿ ದರ್ಶನ್, ಸಚಿನ್ ದೇವ್, ಗೋಕುಲ್ ಸೇನ್, ರಕ್ಷಿತಾ ಅವಿರೋಧವಾಗಿ ಆಯ್ಕೆಯಾದರು.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ ಮಾತನಾಡಿದರು. ಎಸ್ಎಫ್ಐ ಜಿಲ್ಲಾ ಸಂಚಾಲಕ ಟಿ.ಎಸ್.ವಿಜಯ್ ಕುಮಾರ್, ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ನಗರ ವಿವಿಧ ಕಾಲೇಜುಗಳಿಂದ ವಿದ್ಯಾರ್ಥಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿ ಜಿಲ್ಲೆಯ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ಅಂಬೇಡ್ಕರ್, ಕುವೆಂಪು, ನಾರಾಯಣ ಗುರು ಮುಂತಾದವರ ಆಶಯಗಳನ್ನು ವಿದ್ಯಾರ್ಥಿಗಳಿಂದ ದೂರವಿಡುವ ಪ್ರಯತ್ನಗಳು ನಡೆಯುತ್ತಿವೆ. ಇದರ ಹಿಂದಿನ ಹುನ್ನಾರಗಳನ್ನು ವಿದ್ಯಾರ್ಥಿಗಳು ಅರ್ಥೈಸಿಕೊಂಡು ಸಂಘಟಿತರಾಗಬೇಕು.
-ಎಚ್.ಜನಾರ್ಧನ್(ಜನ್ನಿ), ರಂಗಕರ್ಮಿ.
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…