ಜಿಲ್ಲೆಗಳು

ಯುವಜನರನ್ನು ಸಾಂಸ್ಕೃತಿಕ ಗುಲಾಮಗಿರಿಗೆ ತಳ್ಳುತ್ತಿರುವ ಬಿಜೆಪಿ: ಜನ್ನಿ

ಬುದ್ಧವಿಹಾರದಲ್ಲಿ ಎಸ್‌ಎಫ್‌ಐನ ೧೧ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ
* ಆಧುನಿಕ ಆಂಜನೇಯರನ್ನು ಸೃಷ್ಟಿಸಿ ಸಾಂಸ್ಕೃತಿಕ ಗುಲಾಮಗಿರಿಗೆ ಮತ್ತೆ ತಳ್ಳಲು ಯತ್ನ
* ಎಸ್‌ಎಫ್‌ಐನಿಂದ ನೂತನ ಶಿಕ್ಷಣ ನೀತಿಯ ವಿರುದ್ಧ ದೇಶಾದ್ಯಂತ ತೀವ್ರ ಹೋರಾಟದ ಎಚ್ಚರಿಕೆ
* ಎಸ್‌ಎಫ್‌ಐ ನೂತನ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಮೈಸೂರು: ಪ್ರಸ್ತುತ ಆಡಳಿತದಲ್ಲಿರುವ ಸರ್ಕಾರ ಆಧುನಿಕ ಆಂಜನೇಯರನ್ನು ಸೃಷ್ಟಿಸಿ ಸಾಂಸ್ಕೃತಿಕ ಗುಲಾಮಗಿರಿಗೆ ಮತ್ತೆ ತಳ್ಳಲು ಯತ್ನಿಸುತ್ತಿದೆ ಎಂದು ರಂಗಾಯಣ ಮಾಜಿ ನಿರ್ದೇಶಕ ಎಚ್.ಜನಾರ್ಧನ್(ಜನ್ನಿ) ಬೇಸರಿಸಿದರು.
ನಗರದ ಬುದ್ಧವಿಹಾರದಲ್ಲಿ ನಡೆದ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ)ನ ೧೧ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನ ಇಂದು ಅಪಾಯದಲ್ಲಿದೆ. ಸಂವಿಧಾನದಡಿ ಆಯ್ಕೆಯಾದವರೇ ಇಂದು ಸಂವಿಧಾನದ ಆಶಯವನ್ನು ನಾಶ ಮಾಡಲು ನಿಂತಿದ್ದಾರೆ. ಇದನ್ನು ತಡೆಯಲು ವಿದ್ಯಾರ್ಥಿಗಳು ಸಂಘಟಿತರಾಗಬೇಕಿದೆ ಎಂದರು.
ಇಂದು ವಿದ್ಯಾರ್ಥಿಗಳಲ್ಲಿ ವೈಚಾರಿಕತೆ ಬೆಳೆಸಿ, ಬುದ್ಧಿವಂತರನ್ನಾಗಿಸಿ, ಬದುಕಿನ ಮೌಲ್ಯಗಳನ್ನು ಕಲಿಸಬೇಕಾದ ಶಿಕ್ಷಣ, ಇಂದು ಮಕ್ಕಳ ನಡುವೆ ಕಂದಕವನ್ನು ಸೃಷ್ಟಿಸಲು ಎಳೆಯ ಮನಸ್ಸಿನಲ್ಲಿ ಭೇದವನ್ನು ಸೃಷ್ಟಿಸುತ್ತಿದೆ. ಕುವೆಂಪುರವರು ಶತಮಾನಗಳ ಹಿಂದಿಯೇ ನಮಗೆಂತ ಶಿಕ್ಷಣ ಬೇಕು, ನಮಗೆಂತ ವ್ಯವಸ್ಥೆ ಬೇಕು ಎಂದು ಹೇಳಿದ್ದರು. ಆ ಮತದ ಈ ಮತದ ಹಳೆ ಮತದ ಸಹವಾಸ ಸಾಕಿನ್ನು ಸೇರಿರಿ ಮನುಜ ಮತಕ್ಕೆ ಎಂದು ಕರೆ ನೀಡಿದ್ದರು. ಆದರೆ, ಇಂದು ಯುವ ಜನರನ್ನು ಮತಗಳ ವ್ಯಾಮೋಹಕ್ಕೆ ಸಿಲುಕಿಸಲು ಆಳುವವರು ಪಠ್ಯ ಪುಸ್ತಕದ ಕೇಸರೀಕರಣಕ್ಕೆ ಹೊರಟಿದೆ ಎಂದು ಕಿಡಿಕಾರಿದರು.
ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಾಸುದೇವ ರೆಡ್ಡಿ ಮಾತನಾಡಿ, ನೂತನ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿಯೇ ಮೊದಲು ಜಾರಿ ಮಾಡುತ್ತೇವೆಂದು ರಾಜ್ಯದ ತುಂಬೆಲ್ಲಾ ಹೇಳಲಾಗುತ್ತಿದೆ. ಆದರೆ, ಈ ನೂತನ ಶಿಕ್ಷಣ ನೀತಿಯ ಉದ್ದೇಶ ಬಡವರು, ದಲಿತರು, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ದೂರ ಇಡುವುದೇ ಆಗಿದೆ. ಈ ನೀತಿ ಶಿಕ್ಷಣದ ಖಾಸಗೀಕರಣವನ್ನು ಪ್ರೋತ್ಸಾಹಿಸುತ್ತದೆ ಹಾಗೂ ಸರ್ಕಾರವನ್ನು ಶಿಕ್ಷಣದ ಹೊಣೆಗಾರಿಕೆಯಿಂದ ದೂರ ಇಡುವ ಹುನ್ನಾರವೂ ಇದೆ ಎಂದು ಹೇಳಿದರು.
ವಿಶ್ವವಿದ್ಯಾನಿಲಯಗಳನ್ನು ದುರ್ಬಲಗೊಳಿಸುವುದು, ಉಪ ಕುಲಪತಿಗಳನ್ನು ಕೇವಲ ಉತ್ಸವ ಮೂರ್ತಿಗಳಾಗಿಸಲು ಈ ನೂತನ ಶಿಕ್ಷಣ ನೀತಿ ಹೊರಟಿದೆ. ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಬೇಕಾದ ಶಿಕ್ಷಣ ಇಂದು ವಿದ್ಯಾರ್ಥಿಗಳನ್ನು, ಯುವಜನರನ್ನು ಶ್ರೀಮಂತ ಕಂಪೆನಿಗಳ ಸೆಕ್ಯೂರಿಟಿ ಗಾರ್ಡ್‌ಗಳನ್ನಾಗಿ ಮಾಡಲು ಹೊರಟಿದೆ. ಇದರ ವಿರುದ್ಧ ಭಾರತ ವಿದ್ಯಾರ್ಥಿ ಫೆಡರೇಷನ್ ನಿರಂತರವಾಗಿ ಹೋರಾಡುತ್ತಿದೆ. ಮುಂದಿನ ದಿನಗಳಲ್ಲಿ ಈ ನೂತನ ಶಿಕ್ಷಣ ನೀತಿಯ ವಿರುದ್ಧ ದೇಶಾದ್ಯಂತ ತೀವ್ರ ಹೋರಾಟ ನಡೆಸಲಿದೆ ಎಂದು ತಿಳಿಸಿದರು.

ನೂತನ ಪದಾಧಿಕಾರಿಗಳ ಆಯ್ಕೆ: ಜಿಲ್ಲಾಧ್ಯಕ್ಷರಾಗಿ ಟಿ.ಎಸ್.ವಿಜಯ್‌ ಕುಮಾರ್‌ , ಜಿಲ್ಲಾ ಕಾರ್ಯದರ್ಶಿಯಾಗಿ  ಡಿ.ಅಭಿ, ಉಪಾಧ್ಯಕ್ಷರಾಗಿ ಸಂತೋಷ್, ಪ್ರೀತಮ್, ಮಹೇಂದ್ರ, ಭೂಮಿಕಾ, ಸಹ  ಕಾರ್ಯದರ್ಶಿಯಾಗಿ ದರ್ಶನ್, ಸಚಿನ್ ದೇವ್, ಗೋಕುಲ್ ಸೇನ್, ರಕ್ಷಿತಾ ಅವಿರೋಧವಾಗಿ ಆಯ್ಕೆಯಾದರು.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ ಮಾತನಾಡಿದರು. ಎಸ್‌ಎಫ್‌ಐ ಜಿಲ್ಲಾ ಸಂಚಾಲಕ ಟಿ.ಎಸ್.ವಿಜಯ್‌ ಕುಮಾರ್‌, ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ನಗರ ವಿವಿಧ ಕಾಲೇಜುಗಳಿಂದ ವಿದ್ಯಾರ್ಥಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿ ಜಿಲ್ಲೆಯ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

ಅಂಬೇಡ್ಕರ್, ಕುವೆಂಪು, ನಾರಾಯಣ ಗುರು ಮುಂತಾದವರ ಆಶಯಗಳನ್ನು ವಿದ್ಯಾರ್ಥಿಗಳಿಂದ ದೂರವಿಡುವ ಪ್ರಯತ್ನಗಳು ನಡೆಯುತ್ತಿವೆ. ಇದರ ಹಿಂದಿನ ಹುನ್ನಾರಗಳನ್ನು ವಿದ್ಯಾರ್ಥಿಗಳು ಅರ್ಥೈಸಿಕೊಂಡು ಸಂಘಟಿತರಾಗಬೇಕು.
-ಎಚ್.ಜನಾರ್ಧನ್(ಜನ್ನಿ), ರಂಗಕರ್ಮಿ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago