ಜಿಲ್ಲೆಗಳು

ಕತ್ತು ಸೀಳಿ ಯುವಕನ ಕೊಲೆ: ದೊಡ್ಡಅರಸಿನಕೆರೆಯಲ್ಲಿ ಘಟನೆ

ಭಾರತೀನಗರ: ಯಾರೂ ಇಲ್ಲದ ಮನೆಯಲ್ಲಿ ಯುವಕನೊಬ್ಬನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ದೊಡ್ಡಅರಸಿನಕೆರೆ ಗ್ರಾಮದಲ್ಲಿ ನಡೆದಿದೆ.

ತಮ್ಮಯ್ಯ ಎಂಬುವವರ ಪುತ್ರ ನಾಗೇಶ್ ಅಲಿಯಾಸ್ ಸ್ಪಾಟ್ (35) ಎಂಬಾತ ಕೊಲೆಯಾದ ಯುವಕ. ಚೇತನ್ ಅಲಿಯಾಸ್ ಗಣೆಯಾರ ಚೇತ ಎಂಬುವವರ ಮನೆಯಲ್ಲಿ ಕೊಲೆ ನಡೆದಿದ್ದು, ಪೊಲೀಸರು ಚೇತನ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಕಳೆದ ಭಾನುವಾರ ಮಳವಳ್ಳಿ ತಾಲ್ಲೂಕಿನ ಕೊಂಡದ ಮಾರಮ್ಮನ ದೇವಾಲಯಕ್ಕೆ ತೆರಳಿದ್ದ ಸಂದರ್ಭ ನಾಗೇಶ್ ಮತ್ತು ಚೇತನ್ ನಡುವೆ ಜಗಳ ನಡೆದಿತ್ತು. ಅಭಿ ಅಲಿಯಾಸ್ ಕಟ್ಟಪ್ಪ, ಚಂದ್ರ ಅಲಿಯಾಸ್ ಹಿಟಾಚಿ ಮತ್ತಿತರ ಸ್ನೇಹಿತರೂ ಕೂಡ ಚೇತನ್ ಜೊತೆಗೆ ಸಾಥ್ ನೀಡಿದ್ದರು.

ಅಲ್ಲಿಂದ ಊರಿಗೆ ತೆರಳಿದ ನಂತರ ಗ್ರಾಮದ ಸೊಸೈಟಿ ಹಿಂಭಾಗ ಮತ್ತೆ ಇದೇ ಚೇತನ್ ನಾಗೇಶ್ ಮೇಲೆ ಜಗಳ ತೆಗೆದು ಹಲ್ಲೆಗೆ ಮುಂದಾಗಿದ್ದನೆಂದು ಹೇಳಲಾಗಿದೆ. ಈ ಸಂಬಂಧ ಗ್ರಾಮದ ಕೆಲವು ಮುಖಂಡರು ರಾಜಿ ಸಂಧಾನ ನಡೆಸಿ ಇಬ್ಬರನ್ನು ಮನೆಗೆ ಕಳುಹಿಸಿದ್ದರು. ಮತ್ತೆ ಸೋಮವಾರ ಹಳೇ ಘಟನೆ ಮರುಕಳಿಸಿದ್ದು, ನಾಗೇಶ್‌ನನ್ನು ಕರೆ ಮಾಡಿ ಗಣೆಯಾರ ಚೇತನ್ ತನ್ನ ಮನೆಗೆ ಕರೆಯಿಸಿದ್ದು, ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ತೀವ್ರ ರಕ್ತಸ್ರಾವವಾಗಿ ನಾಗೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ್ದರಿಂದ ನಾಗೇಶ್ ಚೀರಾಟ ಯಾರಿಗೂ ಕೇಳಿಸಿಲ್ಲ ಎಂಬುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಕೆ.ಎಂ.ದೊಡ್ಡಿ ಠಾಣಾ ಪೊಲೀಸರು ನಾಗೇಶ್ ಶವವನ್ನು ಮಂಡ್ಯ ಜಿಲ್ಲಾಸ್ಪತ್ರೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ದಿದ್ದಾರೆ. ಈ ಸಂಬಂಧ ಕೆ.ಎಂ.ದೊಡ್ಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

andolana

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

3 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

3 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

3 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

3 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

3 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

4 hours ago