ಜಿಲ್ಲೆಗಳು

ಕತ್ತು ಸೀಳಿ ಯುವಕನ ಕೊಲೆ: ದೊಡ್ಡಅರಸಿನಕೆರೆಯಲ್ಲಿ ಘಟನೆ

ಭಾರತೀನಗರ: ಯಾರೂ ಇಲ್ಲದ ಮನೆಯಲ್ಲಿ ಯುವಕನೊಬ್ಬನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ದೊಡ್ಡಅರಸಿನಕೆರೆ ಗ್ರಾಮದಲ್ಲಿ ನಡೆದಿದೆ.

ತಮ್ಮಯ್ಯ ಎಂಬುವವರ ಪುತ್ರ ನಾಗೇಶ್ ಅಲಿಯಾಸ್ ಸ್ಪಾಟ್ (35) ಎಂಬಾತ ಕೊಲೆಯಾದ ಯುವಕ. ಚೇತನ್ ಅಲಿಯಾಸ್ ಗಣೆಯಾರ ಚೇತ ಎಂಬುವವರ ಮನೆಯಲ್ಲಿ ಕೊಲೆ ನಡೆದಿದ್ದು, ಪೊಲೀಸರು ಚೇತನ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಕಳೆದ ಭಾನುವಾರ ಮಳವಳ್ಳಿ ತಾಲ್ಲೂಕಿನ ಕೊಂಡದ ಮಾರಮ್ಮನ ದೇವಾಲಯಕ್ಕೆ ತೆರಳಿದ್ದ ಸಂದರ್ಭ ನಾಗೇಶ್ ಮತ್ತು ಚೇತನ್ ನಡುವೆ ಜಗಳ ನಡೆದಿತ್ತು. ಅಭಿ ಅಲಿಯಾಸ್ ಕಟ್ಟಪ್ಪ, ಚಂದ್ರ ಅಲಿಯಾಸ್ ಹಿಟಾಚಿ ಮತ್ತಿತರ ಸ್ನೇಹಿತರೂ ಕೂಡ ಚೇತನ್ ಜೊತೆಗೆ ಸಾಥ್ ನೀಡಿದ್ದರು.

ಅಲ್ಲಿಂದ ಊರಿಗೆ ತೆರಳಿದ ನಂತರ ಗ್ರಾಮದ ಸೊಸೈಟಿ ಹಿಂಭಾಗ ಮತ್ತೆ ಇದೇ ಚೇತನ್ ನಾಗೇಶ್ ಮೇಲೆ ಜಗಳ ತೆಗೆದು ಹಲ್ಲೆಗೆ ಮುಂದಾಗಿದ್ದನೆಂದು ಹೇಳಲಾಗಿದೆ. ಈ ಸಂಬಂಧ ಗ್ರಾಮದ ಕೆಲವು ಮುಖಂಡರು ರಾಜಿ ಸಂಧಾನ ನಡೆಸಿ ಇಬ್ಬರನ್ನು ಮನೆಗೆ ಕಳುಹಿಸಿದ್ದರು. ಮತ್ತೆ ಸೋಮವಾರ ಹಳೇ ಘಟನೆ ಮರುಕಳಿಸಿದ್ದು, ನಾಗೇಶ್‌ನನ್ನು ಕರೆ ಮಾಡಿ ಗಣೆಯಾರ ಚೇತನ್ ತನ್ನ ಮನೆಗೆ ಕರೆಯಿಸಿದ್ದು, ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ತೀವ್ರ ರಕ್ತಸ್ರಾವವಾಗಿ ನಾಗೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ್ದರಿಂದ ನಾಗೇಶ್ ಚೀರಾಟ ಯಾರಿಗೂ ಕೇಳಿಸಿಲ್ಲ ಎಂಬುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಕೆ.ಎಂ.ದೊಡ್ಡಿ ಠಾಣಾ ಪೊಲೀಸರು ನಾಗೇಶ್ ಶವವನ್ನು ಮಂಡ್ಯ ಜಿಲ್ಲಾಸ್ಪತ್ರೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ದಿದ್ದಾರೆ. ಈ ಸಂಬಂಧ ಕೆ.ಎಂ.ದೊಡ್ಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

andolana

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

5 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

5 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

5 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

5 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

5 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

5 hours ago