ಭಾರತೀನಗರ: ಯಾರೂ ಇಲ್ಲದ ಮನೆಯಲ್ಲಿ ಯುವಕನೊಬ್ಬನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ದೊಡ್ಡಅರಸಿನಕೆರೆ ಗ್ರಾಮದಲ್ಲಿ ನಡೆದಿದೆ.
ತಮ್ಮಯ್ಯ ಎಂಬುವವರ ಪುತ್ರ ನಾಗೇಶ್ ಅಲಿಯಾಸ್ ಸ್ಪಾಟ್ (35) ಎಂಬಾತ ಕೊಲೆಯಾದ ಯುವಕ. ಚೇತನ್ ಅಲಿಯಾಸ್ ಗಣೆಯಾರ ಚೇತ ಎಂಬುವವರ ಮನೆಯಲ್ಲಿ ಕೊಲೆ ನಡೆದಿದ್ದು, ಪೊಲೀಸರು ಚೇತನ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಕಳೆದ ಭಾನುವಾರ ಮಳವಳ್ಳಿ ತಾಲ್ಲೂಕಿನ ಕೊಂಡದ ಮಾರಮ್ಮನ ದೇವಾಲಯಕ್ಕೆ ತೆರಳಿದ್ದ ಸಂದರ್ಭ ನಾಗೇಶ್ ಮತ್ತು ಚೇತನ್ ನಡುವೆ ಜಗಳ ನಡೆದಿತ್ತು. ಅಭಿ ಅಲಿಯಾಸ್ ಕಟ್ಟಪ್ಪ, ಚಂದ್ರ ಅಲಿಯಾಸ್ ಹಿಟಾಚಿ ಮತ್ತಿತರ ಸ್ನೇಹಿತರೂ ಕೂಡ ಚೇತನ್ ಜೊತೆಗೆ ಸಾಥ್ ನೀಡಿದ್ದರು.
ಅಲ್ಲಿಂದ ಊರಿಗೆ ತೆರಳಿದ ನಂತರ ಗ್ರಾಮದ ಸೊಸೈಟಿ ಹಿಂಭಾಗ ಮತ್ತೆ ಇದೇ ಚೇತನ್ ನಾಗೇಶ್ ಮೇಲೆ ಜಗಳ ತೆಗೆದು ಹಲ್ಲೆಗೆ ಮುಂದಾಗಿದ್ದನೆಂದು ಹೇಳಲಾಗಿದೆ. ಈ ಸಂಬಂಧ ಗ್ರಾಮದ ಕೆಲವು ಮುಖಂಡರು ರಾಜಿ ಸಂಧಾನ ನಡೆಸಿ ಇಬ್ಬರನ್ನು ಮನೆಗೆ ಕಳುಹಿಸಿದ್ದರು. ಮತ್ತೆ ಸೋಮವಾರ ಹಳೇ ಘಟನೆ ಮರುಕಳಿಸಿದ್ದು, ನಾಗೇಶ್ನನ್ನು ಕರೆ ಮಾಡಿ ಗಣೆಯಾರ ಚೇತನ್ ತನ್ನ ಮನೆಗೆ ಕರೆಯಿಸಿದ್ದು, ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ತೀವ್ರ ರಕ್ತಸ್ರಾವವಾಗಿ ನಾಗೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ್ದರಿಂದ ನಾಗೇಶ್ ಚೀರಾಟ ಯಾರಿಗೂ ಕೇಳಿಸಿಲ್ಲ ಎಂಬುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಕೆ.ಎಂ.ದೊಡ್ಡಿ ಠಾಣಾ ಪೊಲೀಸರು ನಾಗೇಶ್ ಶವವನ್ನು ಮಂಡ್ಯ ಜಿಲ್ಲಾಸ್ಪತ್ರೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ದಿದ್ದಾರೆ. ಈ ಸಂಬಂಧ ಕೆ.ಎಂ.ದೊಡ್ಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…