ಎಡಿಟೋರಿಯಲ್

ಚಾಮರಾಜನಗರದಲ್ಲೊಂದು ಚಿಕ್ಕತಿರುಪತಿ: ಹುಲಿಗಿನ ಮುರಡಿ ಎಂದೇ ಖ್ಯಾತಿ

ಪ್ರಕೃತಿಯ ಮಡಿಲಿನಲ್ಲಿ ಅತ್ಯಂತ ಪ್ರಶಾಂತವಾದ ವಾತಾವರಣದಲ್ಲಿ ಪುಟ್ಟ ಬೆಟ್ಟದ ಮೇಲೆ ಜನಾಕರ್ಷಣೆಯ ಕೇಂದ್ರವಾಗಿ ತಲೆಯತ್ತಿ ನಿಂತಿದೆ ಶ್ರೀ ಹುಲಿಗಿನ ಮುರಡಿ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯ.

ಚಿಕ್ಕ ತಿರುಪತಿ ಎಂದು ಕರೆಯಲ್ಪಡುವ ಹುಲಿಗಿನ ಮುರಡಿ ವೆಂಕಟರಮಣಸ್ವಾಮಿ ದೇವ ಸ್ಥಾನವು ಚಾಮರಾಜನಗರ ಜಿಲ್ಲೆಯ ಗುಂಡ್ಲು ಪೇಟೆ ತಾಲ್ಲೂಕಿನಲ್ಲಿದೆ. ಇದು ವ್ಯಾಘ್ರಾಚಲ ಎಂದೇ ಪ್ರಸಿದ್ಧವಾಗಿದೆ.

೩೦೦ ಅಡಿಗಳಷ್ಟು ಎತ್ತರದ ಬೆಟ್ಟದ ಮೇಲಿರುವ ದೇವಾಲಯದಲ್ಲಿ ಪೂರ್ವಾಭಿಮುಖ ವಾಗಿ ಪ್ರಸನ್ನ ವದನನಾಗಿರುವ ಶ್ರೀನಿವಾಸ ವಿಗ್ರಹದ ಕೈಯಲ್ಲಿ ಶಂಖ, ಚಕ್ರಗಳನ್ನು ಕೆತ್ತನೆ ಮಾಡಲಾಗಿದೆ. ಮೂರ್ತಿಯ ಎಡಪಾರ್ಶ್ವದಲ್ಲಿ ಆಂಡಾಳ್ ಅಥವಾ ನೀಳಾದೇವಿ, ಒಳಭಾಗದಲ್ಲಿ ಶ್ರೀ ವೈಕುಂಠನಾಥ ಸ್ವಾಮಿಯೂ ಶ್ರೀದೇವಿ ಮತ್ತು ಭೂದೇವಿ ಸಹಿತನಾಗಿದ್ದು, ಮೂರು ದ್ವಾರಗಳಲ್ಲೂ ದ್ವಾರಪಾಲಕರಿದ್ದಾರೆ.

ವರಾಹ ಪುರಾಣದ ಉತ್ತರಖಂಡದಲ್ಲಿ ಈ ಬೆಟ್ಟಕ್ಕೆ ಕೃತಯುಗದಲ್ಲಿ ಶೇಷಾದ್ರಿ, ತ್ರೇತಾಯುಗ ದಲ್ಲಿ ಕನಕಾದ್ರಿ, ದ್ವಾಪರಯುಗದಲ್ಲಿ ವೆಂಕಟಾದ್ರಿ ಹಾಗೂ ಕಲಿಯುಗದಲ್ಲಿ ವ್ಯಾಘ್ರಾದ್ರಿ (ಹುಲಿಗಿನ ಮುರಡಿ) ಅಂತಲೂ ಕರೆಯಲಾಗಿದೆ.

ಪೌರಾಣಿಕ ಹಿನ್ನೆಲೆ: ಹಿಂದೆ ವಾಯು ಹಾಗೂ ಆದಿಶೇಷ ಯಾರು ಶಕ್ತಿಶಾಲಿಗಳು ಎಂದು ಪರೀಕ್ಷಿಸುವ ಜಿದ್ದಿಗೆ ಬಿದ್ದು ಆದಿಶೇಷನು ಮೇರು ಪರ್ವತದ ಶಿಖರವನ್ನು ಸುತ್ತಿಕೊಂಡನು. ಜೋರಾಗಿ ಗಾಳಿ ಬೀಸಿ ಆದಿಶೇಷನ ಬಂಧನ ಬಿಡಿಸಲು ಪ್ರಯತ್ನಿಸಿದರೂ ಸಾಧ್ಯವಾಗದೆ ಮೇರು ಶಿಖರವೇ ಎರಡು ಭಾಗವಾಗಿ ಮುರಿದು ಬಿದ್ದಿತಂತೆ. ಇದರಲ್ಲಿ ಒಂದು ಹೋಳು ವೃಷ ಭಾದ್ರಿ, ಮತ್ತೊಂದು ಹೋಳು ದಕ್ಷಿಣ ಶೇಷಾದ್ರಿ (ಹುಲಿಗಿನ ಮುರಡಿ) ಎಂದು ಹೆಸರಾಯಿತು.

ಪುಣ್ಯತೀರ್ಥಗಳು: ದಕ್ಷಿಣ ಶೇಷಾದ್ರಿಗೆ ವ್ಯಾಘ್ರಾಚಲ, ಹುಲಿಗಿನ ಮುರಡಿ, ವೆಂಕಟಾಚಲಗಿರಿ ಎಂದು ಕರೆಯುತ್ತಾರೆ. ತನ್ನ ಹೆಸರಿನ ಬಗ್ಗೆ ವಿವಿಧ ಐತಿಹ್ಯವನ್ನು ಹೊಂದಿರುವ ಈ ದೇವಾಲಯದ ಆವರಣದಲ್ಲಿ ಪುರಾಣ ಪ್ರಸಿದ್ಧ ಧನುಷ್ಕೋಟಿ ತೀರ್ಥ, ವೇದ ಪುಷ್ಕರಣಿ ತೀರ್ಥ ಮತ್ತು ವೈಕುಂಠ ತೀರ್ಥಗಳೆಂಬ ಕೊಳಗಳಿವೆ. ಶ್ರೀರಾಮನು ಲಂಕೆಗೆ ಹೊರಟ ಸಂದರ್ಭದಲ್ಲಿ ದೇವರ ಅನುಗ್ರಹ ಪಡೆಯಲು ತನ್ನ ಸ್ನಾನಕ್ಕಾಗಿ ಧನುಸ್ಸಿನ ತುದಿಯಿಂದ ಚುಚ್ಚಿಕಲ್ಲು ಬಂಡೆಯಿಂದ ನೀರು ತೆಗೆದ ಸ್ಥಳವೇ ಧನುಷ್ಕೋಟಿ ತೀರ್ಥ ಎಂಬ ಪ್ರತೀತಿ ಇದೆ.

ರಾಕ್ಷಸರಿಂದ ವೇದಗಳನ್ನು ರಕ್ಷಿಸಿದ ಸಂದರ್ಭದಲ್ಲಿ ಪರಮ ಪುರುಷನ ಶರೀರದಿಂದ ತೊಟ್ಟಿಕ್ಕಿದ ಬೆವರು ಬಿದ್ದ ಸ್ಥಳವೇ ವೇದ ಪುಷ್ಕರಿಣಿ ತೀರ್ಥ ಎಂಬ ನಂಬಿಕೆ ಇದೆ. ವೈಕುಂಠದಿಂದ ಬಂದ ಪರಮ ಪುರುಷನಿಂದಲೇ ನಿರ್ಮಿತವಾದ ವೈಕುಂಠ ತೀರ್ಥ ಎಂಬುದು ಸ್ಥಳೀಯರ ವಿಶ್ಲೇಷಣೆಯಾಗಿದೆ.

ದೇಗುಲ ಎಲ್ಲಿದೆ?:  ಹುಲಿಗಿನ ಮುರಡಿ ವೆಂಕಟರಮಣ ದೇವಾಲಯವು ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಗ್ರಾಮದಿಂದ ೮ ಕಿ. ಮೀ. ದೂರ, ಗುಂಡ್ಲುಪೇಟೆಯಿಂದ ತೆರಕಣಾಂಬಿಗೆ ೨೦ ಕಿ.ಮೀ., ಚಾಮರಾಜನಗರ ದಿಂದ ೩೦ ಕಿ.ಮೀ. ದೂರದಲ್ಲಿದೆ. ದೇವಾಲಯಕ್ಕೆ ಬರುವವರು ಮೈಸೂರಿನಿಂದ ಗುಂಡ್ಲುಪೇಟೆ ಮಾರ್ಗವಾಗಿ ತೆರಕಣಾಂಬಿಗೆ ತೆರಳಿದರೆ ಅಲ್ಲಿಂದ ಶೇರ್ ಆಟೋ ಸೌಲಭ್ಯವಿದೆ.

‘ಪ್ರವಾಸಿ ತಾಣವಾಗಿ ಅಭಿವೃದ್ಧಿಯಾಗಲಿ’:  ಹುಲಿಗಿನ ಮುರಡಿ ದೇವಾಲಯ ಇರುವ ಬೆಟ್ಟವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿ ಪಡಿಸಬಹುದು. ಬಂಡೀಪುರ ಅರಣ್ಯ ವಲಯಕ್ಕೂ ಇದು ಹತ್ತಿರವಾಗಿದೆ. ಈಗಾಗಲೇ ಬಂಡೀಪುರಕ್ಕೆ ಪ್ರವಾಸಿಗರು ಆಗಮಿಸುತ್ತಿದ್ದಾರೆ. ರಾಜ್ಯ ಸರ್ಕಾರವು ಮೂಲ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಈ ಬೆಟ್ಟವನ್ನೂ ಅಭಿವೃದ್ಧಿಪಡಿಸಿದರೆ ಇನ್ನೂ ಹೆಚ್ಚಿನ ಜನರು ಇತ್ತ ಬರುವುದರಿಂದ ರಾಜ್ಯ ಸರ್ಕಾರದ ವರಮಾನ ಕೂಡ ಅಲ್ಪ ಪ್ರಮಾಣದಲ್ಲಿಯಾ ದರೂ ಹೆಚ್ಚಾಗಲಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ವಿಶೇಷ ಪೂಜೆ:  ಶನಿವಾರ ವಿಶೇಷ ಪೂಜೆ ನಡೆಯುವುದರಿಂದ ಆಟೋಗಳು ದೇಗುಲದ ವರೆಗೂ ಹೋಗುತ್ತವೆ. ಇತರೆ ದಿನಗಳಲ್ಲಿ ಆಟೋ ಅಥವಾ ಬಸ್‌ನಲ್ಲಿ ಕಿಲಗೆರೆ ಕ್ರಾಸ್‌ನಲ್ಲಿ ಇಳಿದು ದೇಗುಲಕ್ಕೆ ೩ ಕಿ.ಮೀ. ನಡೆದುಕೊಂಡು ಹೋಗಬಹುದು. ಸ್ವಂತ ವಾಹನ ಅಥವಾ ಬಾಡಿಗೆ ಪಡೆದಿದ್ದರೆ ಅನುಕೂಲವಾಗುತ್ತದೆ.

– ಎ.ಆರ್. ಗಿರಿಧರ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

2 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

2 hours ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

2 hours ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

2 hours ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

2 hours ago