ಎಡಿಟೋರಿಯಲ್

ಆಡಳಿತ ಮಾಡುವವರು ಕೃಷ್ಣನಂತಿರಬೇಕು, ಗಾಂಧಾರಿಯಂತಲ್ಲ !

-ಪ್ರಸನ್ನ

ರಾಷ್ಟ್ರಧ್ವಜದಿಂದ ಗ್ರಾಮೀಣ ಬಡವರ ಸಂಕೇತ ಮಾತ್ರವಾಗಿ ಉಳಿದಿದ್ದ ಖಾದಿಯನ್ನೇ ಕಿತ್ತು ಹಾಕಿ, ಪ್ಲಾಸ್ಟಿಕ್ಕಿನ ಬಾವುಟವನ್ನು ಕಲ್ಪಿತ ಶತೃಗಳ ವಿರುದ್ಧ ಬೀಸುತ್ತಿದ್ದೇವೆ. ಇಂದಿರಾಗಾಂಧಿಯವರು ಆನೆಯೇರಿ ದಲಿತರ ನರಮೇಧ ನಡೆದ ಬೆಲ್ಚಿಗೆ ತಲುಪಿದ ರೂಪಕವು ನನ್ನ ಕಣ್ಣ ಮುಂದೆ ಬರುತ್ತಿದೆ. ಇಂದಿರಾಗಾಂಧಿಯವರು, ಕನಿಷ್ಟಪಕ್ಷ ಬೆಲ್ಚಿಗೆ ಹೋದರು. ನಾವಿಂದು ಆನೆಯೇರಿ ವಿದೇಶಕ್ಕೆ ಹೊರಟ್ಟಿದ್ದೇವೆ, ಸೆಲ್ಫಿ ತೆಗೆಸಿಕೊಳ್ಳಲಿಕ್ಕೆಂದು.

ದೇವನೂರು ಮಹದೇವ ಅವರ ಕೃತಿ, ಆರೆಸ್ಸೆಸ್ಸಿನ ಆಳ ಅಗಲ ಓದಿದೆ. ಅವರ ಕೃತಿಯಿಂದಾಗಿಕನಲಿರುವ ಆರೆಸ್ಸೆಸ್ಸಿನ ಭಕ್ತರು, ಕೆಲವರು, ಮಹದೇವರಿಗೆ ಜೀವ ಬೆದರಿಕೆ ಒಡ್ಡಿರುವ ಸಂಗತಿಯನ್ನೂ ಓದಿದೆ. ತಪ್ಪು ಇದು.

ಗಾಂಧೀಜಿಯವರಿಗೆ ಬೆದರಿಕೆ ಹಾಕಿ ಕೊಂದ ಆರೆಸ್ಸೆಸ್ಸಿನ ಭಕ್ತ, ಗೋಡ್ಸೆ ಮಾಡಿದ ತಪ್ಪನ್ನೇ ಇಂದಿನ ಭಕ್ತನೂ ಮಾಡಿದ್ದಾನೆ. ಚರಿತ್ರೆಯಿಂದ ಪಾಠ ಕಲಿತಂತಿಲ್ಲ ಆರೆಸ್ಸೆಸ್ಸಿನ ಗೆಳೆಯರು. ಚರಿತ್ರೆ ಹಾಳಾಗಲಿ ಎಂದರೆ, ಅಧಿಕಾರದಿಂದಲೂ ಪಾಠ ಕಲಿತಂತಿಲ್ಲ ಅವರು.

ಮಹದೇವರ ಕೃತಿಯು ದಾಖಲೆಗಳನ್ನು ಆಧರಿಸಿದೆ. ಎರಡನೆಯ ಭಾಗದಲ್ಲಿ ಮಹದೇವರಂತಹ ಮಹದೇವರೇ ಕೊಂಚ ಭಾವಾವೇಶಕ್ಕೆ ಒಳಗಾಗಿದ್ದಾರೆ ನಿಜ. ಆದರೆ ಅಸತ್ಯ ನುಡಿದಿಲ್ಲ. ಸತ್ಯವನ್ನು ನಾವೆಲ್ಲರೂ ಎದುರಿಸೋಣ, ಆರೆಸ್ಸೆಸ್ಸಿನ ಗೆಳೆಯರೂ ಒಳಗೊಂಡಂತೆ, ಮಹದೇವರ ಕೃತಿಗೆ ವಿರುದ್ದವಾದ ಪ್ರತಿಪಾದನೆ ಮಾಡುವುದಾದರೆ ಮಹದೇವರಿಗೆ ಲಭ್ಯವಿರುವುದಕ್ಕಿಂತ ಹೆಚ್ಚಿನ ಛಾನಲ್ಲುಗಳು ಭಕ್ತರಿಗೆ ಲಭ್ಯವಿದೆ ತಾನೆ? ಹಿಂಸೆ, ರಕ್ತ, ಕೊಲ್ಲುವುದು ಇತ್ಯಾದಿಗಳು ಛಾನಲ್ಲುಗಳಲ್ಲಿ, ರಕ್ತದ ಕಾಲುವೆಗಳಷ್ಟೇ ಅವು!

ಆರೆಸ್ಸೆಸ್ಸಿನವರನ್ನು ಗೆಳೆಯರು ಎಂದು ನಾನು ಸಂಭೋಧಿಸುತ್ತಿರುವ ಬಗ್ಗೆ ನನ್ನ ಇತರೆ ಗೆಳೆಯರಿಗೆ ತಕರಾರಿದೆ.ಅದೂ ಕೂಡ ಕ್ರೋಧದ ಅಭಿವ್ಯಕ್ತಿಯೇ ಸರಿ. ಅನೇಕರಿಗೆ ಚರಿತ್ರೆ ತಿಳಿದಿಲ್ಲ. ಆರೆಸ್ಸೆಸ್ಸನ್ನು ವಿರೋಧಿಸುತ್ತಲೇ ಬಂದಿರುವ ಮಾರ್ಕ್ಸ್‌ವಾದಿಗಳು, ಸಮಾಜವಾದಿಗಳು ಹಾಗೂ ಗಾಂಧೀವಾದಿಗಳು ದೇಶದ ಒಟ್ಟಾರೆ ಒಳಿತಿಗಾಗಿ, ವಿವಿಧ ಸಂದರ್ಭಗಳಲ್ಲಿ ಅವರೊಂದಿಗೆ ಕೆಲಸ ಮಾಡಿದ್ದಿದೆ. ಉದಾಹರಣೆಗೆ ಹೇಳುವುದಾದರೆ, ಗೋಪಾಲಕೃಷ್ಣ ಅಡಿಗರು, ಕಾಂಗ್ರೆಸ್ಸಿನ ವಿರುದ್ಧ, ಜನಸಂಘದ ಉಮೇದುದಾರನಾಗಿ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ಎದುರಿಸಿದಾಗ ನಾವಿನ್ನೂ ಹುಡುಗರಷ್ಟೇ. ಆಗ, ಲಂಕೇಶರ ಮುಂದಾಳತ್ವದಲ್ಲಿ ಆರೆಸ್ಸೆಸ್ಸಿನವರ ಜೊತೆ ಕೆಲಸ ಮಾಡಿದ್ದಿದೆ ನಾನು.

ಅದಕ್ಕೂ ನಂತರದಲ್ಲಿ ಆರೆಸ್ಸೆಸ್ಸಿನ ಗೆಳೆಯರು ಒಳಿತಿನ ಭಾವಾವೇಷಕ್ಕೆ ಒಳಗಾಗಿ, ಗಾಂಧಿಪ್ರಣೀತ ಸಮಾಜವಾದವನ್ನು ಅಪ್ಪಲು ಮುಂದೆ ಬಂದಾಗ, ಅವರನ್ನು ನಾವೆಲ್ಲರೂ ಗೆಳೆಯರಂತೆ ಕಂಡದ್ದಿದೆ.

ಈಗ, ದೇಶವು ಅತ್ತ ವಿದೇಶಿಯಾಗುತ್ತಲೇ ಇತ್ತ ದಿವಾಳಿಯಾಗುತ್ತಿದೆ. ಬಡವರು ಮತ್ತೂ ಮತ್ತೂ ಬಡವರಾಗುತ್ತಿದ್ದಾರೆ. ಕುವೆಂಪು ಅವರು ಕಲ್ಕಿ ಪದ್ಯದಲ್ಲಿ ವಿವರಿಸುವಂತೆ ಭಗವಂತನು ಕನಲಿ, ನಮ್ಮನ್ನೆಲ್ಲ ಬೆಂಕಿಯ ಕೂಪಕ್ಕೆ ತಳ್ಳ ತೊಡಗಿದ್ದಾನೆ. ಆದರೂ ನಾವು ಪಾಠ ಕಲಿಯುತ್ತಿಲ್ಲ. ಅದಾನಿ ಸಾಹೇಬರನ್ನು ವಿಶ್ವದ ನಾಲ್ಕನೆಯ ಅತಿ ಶ್ರೀಮಂತ ವ್ಯಕ್ತಿಯನ್ನಾಗಿಸುವುದೇ ಮೇಡ್ ಇನ್ ಇಂಡಿಯಾ, ಯಾನೆ ಸ್ವದೇಶಿ ಎಂಬ ಭ್ರಮೆಯಲ್ಲಿ ತೇಲಾಡುತ್ತಿದ್ದೇವೆ.

ರಾಷ್ಟ್ರಧ್ವಜದಿಂದ ಗ್ರಾಮೀಣ ಬಡವರ ಸಂಕೇತ ಮಾತ್ರವಾಗಿ ಉಳಿದಿದ್ದ ಖಾದಿಯನ್ನೇ ಕಿತ್ತು ಹಾಕಿ, ಪ್ಲಾಸ್ಟಿಕ್ಕಿನ ಬಾವುಟವನ್ನು ಕಲ್ಪಿತ ಶತೃಗಳ ವಿರುದ್ಧ ಬೀಸುತ್ತಿದ್ದೇವೆ. ಇಂದಿರಾಗಾಂಧಿಯವರು ಆನೆಯೇರಿ ದಲಿತರ ನರಮೇಧ ನಡೆದ ಬೆಲ್ಚಿಗೆ ತಲುಪಿದ ರೂಪಕವು ನನ್ನ ಕಣ್ಣ ಮುಂದೆ ಬರುತ್ತಿದೆ. ಇಂದಿರಾಗಾಂಧಿಯವರು, ಕನಿಷ್ಟಪಕ್ಷ ಬೆಲ್ಚಿಗೆ ಹೋದರು. ನಾವಿಂದು ಆನೆಯೇರಿ ವಿದೇಶಕ್ಕೆ ಹೊರಟ್ಟಿದ್ದೇವೆ, ಸೆಲ್ಫಿ ತೆಗೆಸಿಕೊಳ್ಳಲಿಕ್ಕೆಂದು.

ಪ್ರಿಯ ಗೆಳೆಯರೇ, ಮಹದೇವನಿಗೆ ಜೀವದ ಭಯವಿಲ್ಲ. ನೀವೊಮ್ಮೆ ಆತನನ್ನು ಕೊಂದರೆ, ಜೀವ ಭಯದಿಂದ ಗಡಗಡನೆ ನಡುಗಬೇಕಾದವರು ನಿಮ್ಮ ಭಕ್ತರು. ನಿಮ್ಮ ಗೆಳೆಯನಾದ್ದರಿಂದ, ನಿಮ್ಮೊಂದಿಗೆ ಒಡನಾಡಿ ಅನುಭವವಿರುವ ವ್ಯಕ್ತಿಯಾದ್ದರಿಂದ, ಒಂದು ಮಾತು ಹೇಳುತ್ತೇನೆ ಕೇಳಿ. ಸಿಟ್ಟಿಗೆ ಬುದ್ಧಿಕೊಟ್ಟು ಅವಾಂತರ ಮಾಡಿ, ಆನಂತರ, ನಾನು ಮಾಡಲೇ ಇಲ್ಲ ಎಂದು ಕೈ ಎತ್ತುವ ಚಟವಿದೆ ನಿಮಗೆ.

ಆದರೆ, ನೀವೇ ಪ್ರಭುಗಳಾಗಿರುವಾಗ, ನೀವೇ ದೇಶದ ನಿಯಾಮಕರಾಗಿರುವಾಗ ನೀವು ಹೀಗಿರಬಾರದು, ಗಾಂಧಾರಿಯು ಕುರುಕ್ಷೇತ್ರದ ಕತೆಯಲ್ಲಿ, ತನ್ನ ನೂರೂ ಮಕ್ಕಳು ಸತ್ತಾಗ, ಕೃಷ್ಣನ ಮೇಲೆ ಸಿಟ್ಟಾದಳಂತೆ. ಆಗ ಕೃಷ್ಣನು ಮಾತೆ, ಶಾಂತಳಾಗು ಎಂದು ವಿನೀತನಾಗಿ ನಮಸ್ಕರಿಸಿದನಂತೆ. ಹಾಗೂ ಅವಳು ನೀಡಿದ ಶಾಪವನ್ನು ಸ್ವೀಕರಿಸಿದನಂತೆ. ಆಡಳಿತ ಮಾಡುವವರು ಕೃಷ್ಣನಂತಿರಬೇಕೇ ಹೊರತು ಗಾಂಧಾರಿಯಂತಲ್ಲ !

andolana

Recent Posts

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಚಿವ ಆರ್.‌ಬಿ.ತಿಮ್ಮಾಪುರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ಸದಸ್ಯರು ಆರ್.‌ಅಶೋಕ್‌ ನೇತೃತ್ವದಲ್ಲಿ…

32 mins ago

ಮಾರ್ಚ್.‌18ರಿಂದ ಏಪ್ರಿಲ್.‌2ರವರೆಗೆ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ…

36 mins ago

ಹನೂರು| 6 ಹಸುಗಳು ಅನುಮಾನಸ್ಪದ ಸಾವು: ವಿಷಪ್ರಾಶನ ಶಂಕೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ…

2 hours ago

ಸಿದ್ದಾಪುರ| ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಆನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ನವೀನ್‌ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು  ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ…

2 hours ago

ಓದುಗರ ಪತ್ರ: ಗಾಂಜಾ ಮಾರಾಟ ತಡೆಗಟ್ಟಿ

ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…

3 hours ago

ಓದುಗರ ಪತ್ರ: ಕೇರಳದಲ್ಲಿ ಉಚಿತ ಶಿಕ್ಷಣ ಶ್ಲಾಘನೀಯ

ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…

3 hours ago