ಎಡಿಟೋರಿಯಲ್

ಆಡಳಿತ ಮಾಡುವವರು ಕೃಷ್ಣನಂತಿರಬೇಕು, ಗಾಂಧಾರಿಯಂತಲ್ಲ !

-ಪ್ರಸನ್ನ

ರಾಷ್ಟ್ರಧ್ವಜದಿಂದ ಗ್ರಾಮೀಣ ಬಡವರ ಸಂಕೇತ ಮಾತ್ರವಾಗಿ ಉಳಿದಿದ್ದ ಖಾದಿಯನ್ನೇ ಕಿತ್ತು ಹಾಕಿ, ಪ್ಲಾಸ್ಟಿಕ್ಕಿನ ಬಾವುಟವನ್ನು ಕಲ್ಪಿತ ಶತೃಗಳ ವಿರುದ್ಧ ಬೀಸುತ್ತಿದ್ದೇವೆ. ಇಂದಿರಾಗಾಂಧಿಯವರು ಆನೆಯೇರಿ ದಲಿತರ ನರಮೇಧ ನಡೆದ ಬೆಲ್ಚಿಗೆ ತಲುಪಿದ ರೂಪಕವು ನನ್ನ ಕಣ್ಣ ಮುಂದೆ ಬರುತ್ತಿದೆ. ಇಂದಿರಾಗಾಂಧಿಯವರು, ಕನಿಷ್ಟಪಕ್ಷ ಬೆಲ್ಚಿಗೆ ಹೋದರು. ನಾವಿಂದು ಆನೆಯೇರಿ ವಿದೇಶಕ್ಕೆ ಹೊರಟ್ಟಿದ್ದೇವೆ, ಸೆಲ್ಫಿ ತೆಗೆಸಿಕೊಳ್ಳಲಿಕ್ಕೆಂದು.

ದೇವನೂರು ಮಹದೇವ ಅವರ ಕೃತಿ, ಆರೆಸ್ಸೆಸ್ಸಿನ ಆಳ ಅಗಲ ಓದಿದೆ. ಅವರ ಕೃತಿಯಿಂದಾಗಿಕನಲಿರುವ ಆರೆಸ್ಸೆಸ್ಸಿನ ಭಕ್ತರು, ಕೆಲವರು, ಮಹದೇವರಿಗೆ ಜೀವ ಬೆದರಿಕೆ ಒಡ್ಡಿರುವ ಸಂಗತಿಯನ್ನೂ ಓದಿದೆ. ತಪ್ಪು ಇದು.

ಗಾಂಧೀಜಿಯವರಿಗೆ ಬೆದರಿಕೆ ಹಾಕಿ ಕೊಂದ ಆರೆಸ್ಸೆಸ್ಸಿನ ಭಕ್ತ, ಗೋಡ್ಸೆ ಮಾಡಿದ ತಪ್ಪನ್ನೇ ಇಂದಿನ ಭಕ್ತನೂ ಮಾಡಿದ್ದಾನೆ. ಚರಿತ್ರೆಯಿಂದ ಪಾಠ ಕಲಿತಂತಿಲ್ಲ ಆರೆಸ್ಸೆಸ್ಸಿನ ಗೆಳೆಯರು. ಚರಿತ್ರೆ ಹಾಳಾಗಲಿ ಎಂದರೆ, ಅಧಿಕಾರದಿಂದಲೂ ಪಾಠ ಕಲಿತಂತಿಲ್ಲ ಅವರು.

ಮಹದೇವರ ಕೃತಿಯು ದಾಖಲೆಗಳನ್ನು ಆಧರಿಸಿದೆ. ಎರಡನೆಯ ಭಾಗದಲ್ಲಿ ಮಹದೇವರಂತಹ ಮಹದೇವರೇ ಕೊಂಚ ಭಾವಾವೇಶಕ್ಕೆ ಒಳಗಾಗಿದ್ದಾರೆ ನಿಜ. ಆದರೆ ಅಸತ್ಯ ನುಡಿದಿಲ್ಲ. ಸತ್ಯವನ್ನು ನಾವೆಲ್ಲರೂ ಎದುರಿಸೋಣ, ಆರೆಸ್ಸೆಸ್ಸಿನ ಗೆಳೆಯರೂ ಒಳಗೊಂಡಂತೆ, ಮಹದೇವರ ಕೃತಿಗೆ ವಿರುದ್ದವಾದ ಪ್ರತಿಪಾದನೆ ಮಾಡುವುದಾದರೆ ಮಹದೇವರಿಗೆ ಲಭ್ಯವಿರುವುದಕ್ಕಿಂತ ಹೆಚ್ಚಿನ ಛಾನಲ್ಲುಗಳು ಭಕ್ತರಿಗೆ ಲಭ್ಯವಿದೆ ತಾನೆ? ಹಿಂಸೆ, ರಕ್ತ, ಕೊಲ್ಲುವುದು ಇತ್ಯಾದಿಗಳು ಛಾನಲ್ಲುಗಳಲ್ಲಿ, ರಕ್ತದ ಕಾಲುವೆಗಳಷ್ಟೇ ಅವು!

ಆರೆಸ್ಸೆಸ್ಸಿನವರನ್ನು ಗೆಳೆಯರು ಎಂದು ನಾನು ಸಂಭೋಧಿಸುತ್ತಿರುವ ಬಗ್ಗೆ ನನ್ನ ಇತರೆ ಗೆಳೆಯರಿಗೆ ತಕರಾರಿದೆ.ಅದೂ ಕೂಡ ಕ್ರೋಧದ ಅಭಿವ್ಯಕ್ತಿಯೇ ಸರಿ. ಅನೇಕರಿಗೆ ಚರಿತ್ರೆ ತಿಳಿದಿಲ್ಲ. ಆರೆಸ್ಸೆಸ್ಸನ್ನು ವಿರೋಧಿಸುತ್ತಲೇ ಬಂದಿರುವ ಮಾರ್ಕ್ಸ್‌ವಾದಿಗಳು, ಸಮಾಜವಾದಿಗಳು ಹಾಗೂ ಗಾಂಧೀವಾದಿಗಳು ದೇಶದ ಒಟ್ಟಾರೆ ಒಳಿತಿಗಾಗಿ, ವಿವಿಧ ಸಂದರ್ಭಗಳಲ್ಲಿ ಅವರೊಂದಿಗೆ ಕೆಲಸ ಮಾಡಿದ್ದಿದೆ. ಉದಾಹರಣೆಗೆ ಹೇಳುವುದಾದರೆ, ಗೋಪಾಲಕೃಷ್ಣ ಅಡಿಗರು, ಕಾಂಗ್ರೆಸ್ಸಿನ ವಿರುದ್ಧ, ಜನಸಂಘದ ಉಮೇದುದಾರನಾಗಿ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ಎದುರಿಸಿದಾಗ ನಾವಿನ್ನೂ ಹುಡುಗರಷ್ಟೇ. ಆಗ, ಲಂಕೇಶರ ಮುಂದಾಳತ್ವದಲ್ಲಿ ಆರೆಸ್ಸೆಸ್ಸಿನವರ ಜೊತೆ ಕೆಲಸ ಮಾಡಿದ್ದಿದೆ ನಾನು.

ಅದಕ್ಕೂ ನಂತರದಲ್ಲಿ ಆರೆಸ್ಸೆಸ್ಸಿನ ಗೆಳೆಯರು ಒಳಿತಿನ ಭಾವಾವೇಷಕ್ಕೆ ಒಳಗಾಗಿ, ಗಾಂಧಿಪ್ರಣೀತ ಸಮಾಜವಾದವನ್ನು ಅಪ್ಪಲು ಮುಂದೆ ಬಂದಾಗ, ಅವರನ್ನು ನಾವೆಲ್ಲರೂ ಗೆಳೆಯರಂತೆ ಕಂಡದ್ದಿದೆ.

ಈಗ, ದೇಶವು ಅತ್ತ ವಿದೇಶಿಯಾಗುತ್ತಲೇ ಇತ್ತ ದಿವಾಳಿಯಾಗುತ್ತಿದೆ. ಬಡವರು ಮತ್ತೂ ಮತ್ತೂ ಬಡವರಾಗುತ್ತಿದ್ದಾರೆ. ಕುವೆಂಪು ಅವರು ಕಲ್ಕಿ ಪದ್ಯದಲ್ಲಿ ವಿವರಿಸುವಂತೆ ಭಗವಂತನು ಕನಲಿ, ನಮ್ಮನ್ನೆಲ್ಲ ಬೆಂಕಿಯ ಕೂಪಕ್ಕೆ ತಳ್ಳ ತೊಡಗಿದ್ದಾನೆ. ಆದರೂ ನಾವು ಪಾಠ ಕಲಿಯುತ್ತಿಲ್ಲ. ಅದಾನಿ ಸಾಹೇಬರನ್ನು ವಿಶ್ವದ ನಾಲ್ಕನೆಯ ಅತಿ ಶ್ರೀಮಂತ ವ್ಯಕ್ತಿಯನ್ನಾಗಿಸುವುದೇ ಮೇಡ್ ಇನ್ ಇಂಡಿಯಾ, ಯಾನೆ ಸ್ವದೇಶಿ ಎಂಬ ಭ್ರಮೆಯಲ್ಲಿ ತೇಲಾಡುತ್ತಿದ್ದೇವೆ.

ರಾಷ್ಟ್ರಧ್ವಜದಿಂದ ಗ್ರಾಮೀಣ ಬಡವರ ಸಂಕೇತ ಮಾತ್ರವಾಗಿ ಉಳಿದಿದ್ದ ಖಾದಿಯನ್ನೇ ಕಿತ್ತು ಹಾಕಿ, ಪ್ಲಾಸ್ಟಿಕ್ಕಿನ ಬಾವುಟವನ್ನು ಕಲ್ಪಿತ ಶತೃಗಳ ವಿರುದ್ಧ ಬೀಸುತ್ತಿದ್ದೇವೆ. ಇಂದಿರಾಗಾಂಧಿಯವರು ಆನೆಯೇರಿ ದಲಿತರ ನರಮೇಧ ನಡೆದ ಬೆಲ್ಚಿಗೆ ತಲುಪಿದ ರೂಪಕವು ನನ್ನ ಕಣ್ಣ ಮುಂದೆ ಬರುತ್ತಿದೆ. ಇಂದಿರಾಗಾಂಧಿಯವರು, ಕನಿಷ್ಟಪಕ್ಷ ಬೆಲ್ಚಿಗೆ ಹೋದರು. ನಾವಿಂದು ಆನೆಯೇರಿ ವಿದೇಶಕ್ಕೆ ಹೊರಟ್ಟಿದ್ದೇವೆ, ಸೆಲ್ಫಿ ತೆಗೆಸಿಕೊಳ್ಳಲಿಕ್ಕೆಂದು.

ಪ್ರಿಯ ಗೆಳೆಯರೇ, ಮಹದೇವನಿಗೆ ಜೀವದ ಭಯವಿಲ್ಲ. ನೀವೊಮ್ಮೆ ಆತನನ್ನು ಕೊಂದರೆ, ಜೀವ ಭಯದಿಂದ ಗಡಗಡನೆ ನಡುಗಬೇಕಾದವರು ನಿಮ್ಮ ಭಕ್ತರು. ನಿಮ್ಮ ಗೆಳೆಯನಾದ್ದರಿಂದ, ನಿಮ್ಮೊಂದಿಗೆ ಒಡನಾಡಿ ಅನುಭವವಿರುವ ವ್ಯಕ್ತಿಯಾದ್ದರಿಂದ, ಒಂದು ಮಾತು ಹೇಳುತ್ತೇನೆ ಕೇಳಿ. ಸಿಟ್ಟಿಗೆ ಬುದ್ಧಿಕೊಟ್ಟು ಅವಾಂತರ ಮಾಡಿ, ಆನಂತರ, ನಾನು ಮಾಡಲೇ ಇಲ್ಲ ಎಂದು ಕೈ ಎತ್ತುವ ಚಟವಿದೆ ನಿಮಗೆ.

ಆದರೆ, ನೀವೇ ಪ್ರಭುಗಳಾಗಿರುವಾಗ, ನೀವೇ ದೇಶದ ನಿಯಾಮಕರಾಗಿರುವಾಗ ನೀವು ಹೀಗಿರಬಾರದು, ಗಾಂಧಾರಿಯು ಕುರುಕ್ಷೇತ್ರದ ಕತೆಯಲ್ಲಿ, ತನ್ನ ನೂರೂ ಮಕ್ಕಳು ಸತ್ತಾಗ, ಕೃಷ್ಣನ ಮೇಲೆ ಸಿಟ್ಟಾದಳಂತೆ. ಆಗ ಕೃಷ್ಣನು ಮಾತೆ, ಶಾಂತಳಾಗು ಎಂದು ವಿನೀತನಾಗಿ ನಮಸ್ಕರಿಸಿದನಂತೆ. ಹಾಗೂ ಅವಳು ನೀಡಿದ ಶಾಪವನ್ನು ಸ್ವೀಕರಿಸಿದನಂತೆ. ಆಡಳಿತ ಮಾಡುವವರು ಕೃಷ್ಣನಂತಿರಬೇಕೇ ಹೊರತು ಗಾಂಧಾರಿಯಂತಲ್ಲ !

andolana

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

3 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

4 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

4 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

4 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

5 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

5 hours ago