ಎಡಿಟೋರಿಯಲ್

ಕವಲು ದಾರಿಯಲ್ಲಿ ತಂಬಾಕು ಬೆಳೆಗಾರ

ಹೊಗೆಸೊಪ್ಪಿನ ಪೂರೈಕೆ ಹೆಚ್ಚಳ; ಕುಸಿಯುತ್ತಿರುವ ಬೇಡಿಕೆ

– ಪ್ರಕಾಶ್ ರಾವಂದೂರು

ಮೈಸೂರು-ಹಾಸನ ಭಾಗದಲ್ಲಿ ತಂಬಾಕು ಬೆಳೆಯುವ ರೈತ ಇಂದು ಕವಲು ದಾರಿಯಲ್ಲಿ ನಿಂತಿದ್ದಾನೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಹುಣಸೂರು, ಕೆ.ಆರ್.ನಗರ ಮತ್ತು ಎಚ್.ಡಿ.ಕೋಟೆ, ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕುಗಳಲ್ಲಿ ವರ್ಜೀನಿಯಾ ಹೊಗೆಸೊಪ್ಪನ್ನು ಎಪ್ಪತ್ತರ ದಶಕಗಳಿಂದಲೂ ಬೆಳೆಯಲಾಗುತ್ತಿದೆ. ಇದಕ್ಕಿಂತ ಹಿಂದೆ ಈ ಪ್ರದೇಶಗಳಲ್ಲಿ ಬೀಡಿ ಹೊಗೆಸೊಪ್ಪನ್ನು ಬಿಸಿಲಿನಲ್ಲಿ ಒಣಗಿಸಿ ಹದಮಾಡಿ ಸಿದ್ಧಪಡಿಸುತ್ತಿದ್ದರೂ, ರೈತರಿಗೆ ಇದರಿಂದ ಬರುತ್ತಿದ್ದ ಆದಾಯ ಅಷ್ಟಕ್ಕಷ್ಟೇ. ಬಿಸಿಲಿನಲ್ಲಿ ಒಣಗಿದ್ದು, ಉಸಿರು ಬಗೆದದ್ದು, ಸಾಲದ ಶೂಲದಲ್ಲಿ ಸಿಲುಕಿದ್ದಷ್ಟೇ ಲಾಭ.
ರೈತರ ಬದುಕಿನಲ್ಲಿ ಒಂದು ಆಶಾಕಿರಣವಾಗಿ ಕಂಡದ್ದೇ ವರ್ಜೀನಿಯಾ ತಂಬಾಕು ಬೆಳೆ. 1970 ರ ದಶಕದಲ್ಲಿ ಐ.ಟಿ.ಸಿ. ಕಂಪೆನಿಯು ಈ ಬೆಳೆ ಬೆಳೆಯಲು ರೈತರನ್ನು ಪ್ರೋತ್ಸಾಹಿಸುತ್ತ, ಅದಕ್ಕೆ ಅಗತ್ಯವಾದ ಸೌಲಭ್ಯ, ಸಲಕರಣೆಗಳು, ತಂತ್ರಜ್ಞಾನಗಳನ್ನೂ ನೀಡುತ್ತಾ ಬಂದಿತು. ಉತ್ಪಾದನೆ ಹೆಚ್ಚಾದಂತೆ ಸೂಕ್ತ ಮಾರುಕಟ್ಟೆ ಒದಗಿಸುವ, ರಫ್ತು ಹೆಚ್ಚಿಸುವ, ಬೆಳೆ ನಿಯಂತ್ರಿಸುವ ಉದ್ದೇಶಗಳೊಂದಿಗೆ ಕೇಂದ್ರ ಸರ್ಕಾರದಿಂದ 1976ರಲ್ಲಿ ತಂಬಾಕು ಮಂಡಳಿ ಸ್ಥಾಪಿತವಾಯಿತು. 1984ರಲ್ಲಿ ತಂಬಾಕು ಮಂಡಳಿಯು ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿ ತಂಬಾಕು ಹರಾಜು ಮಾರುಕಟ್ಟೆಗಳನ್ನು ಪ್ರಾರಂಭಿಸಿತು.
ಮಾರಾಟದ ಹಣ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆಯಾಗುತ್ತಿತ್ತು. ರೈತರಿಗೆ ಅವಶ್ಯಕವಾದ ರಸಗೊಬ್ಬರ, ಕೀಟನಾಶಕ ಹಾಗೂ ಇನ್ನಿತರ ಸಾಮಗ್ರಿಗಳನ್ನೂ ಒದಗಿಸುತ್ತಿತ್ತು. ಬ್ಯಾಂಕ್‌ಗಳು ರೈತರಿಗೆ ಕಡಿಮೆ ಬಡ್ಡಿಯಲ್ಲಿ ಸಾಲ ಒದಗಿಸಲು ಪ್ರಾರಂಭಿಸಿದವು. ಐಟಿಸಿ ಕಂಪೆನಿ ಹಾಗು ತಂಬಾಕು ಮಂಡಳಿ ರೈತರ ಮನೆಬಾಗಿಲಿನಲ್ಲೇ ಸಂಬಂಧಪಟ್ಟಂತೆ ಸಲಹೆ ಸೂಚನೆ ನೀಡುತ್ತಿದ್ದವು. ರೈತರ ಮುಖದಲ್ಲಿ ನಗು ಅರಳಿತ್ತು.
ಈಗ ಪರಿಸ್ಥಿತಿ ಪೂರ್ಣ ಬದಲಾಗಿದೆ. ಬರುವ ಆದಾಯದಲ್ಲಿ ಬ್ಯಾಂಕ್ ಸಾಲ ಮಗಳ ಮದುವೆ, ಮಕ್ಕಳ ವಿದ್ಯಾಬ್ಯಾಸ, ಮನೆಯ ಖರ್ಚುಗಳು ಮುಂದಿವೆ. ಯಾವುದನ್ನು ಆಯ್ಕೆ ಮಾಡಬೇಕು? ಮತ್ತೆ ರೈತನಿಗೆ ಸಂಕಷ್ಟ ಎದುರಾಗುವಂತಾಗಿದೆ.
ಕುಸಿಯುತ್ತಿರುವ ಬೇಡಿಕೆ: ರಾಜ್ಯದ ವರ್ಜೀನಿಯಾ ತಂಬಾಕಿನ ಶೇ.80 ವಿದೇಶಗಳಿಗೆ ರಫ್ತಾಗುತ್ತಿದ್ದರೂ, ವಿಶ್ವದೆಲ್ಲೆಡೆ ಸಿಗರೇಟ್ ಬಳಕೆ ಕಡಿಮೆಯಾಗುತ್ತಿದೆ. ಜನರಲ್ಲಿ ಆರೋಗ್ಯದ ಕಾಳಜಿ ಹೆಚ್ಚುತ್ತಿದೆ. ಹೊಗೆಸೊಪ್ಪಿನ ಪೂರೈಕೆ ಹೆಚ್ಚುತ್ತಿದ್ದರೂ ಮತ್ತೊಂದೆಡೆ ಬೇಡಿಕೆ ಕಡಿಮೆಯಾಗುತ್ತಿದೆ. ವಿಶ್ವದೆಲ್ಲೆಡೆ ಸರ್ಕಾರಗಳು ತಂಬಾಕು ಉತ್ಪನ್ನಗಳ ಮಾರಾಟದ ಮೇಲೆ ಹಲವು ರೀತಿುಂ ನಿಯಂತ್ರಣಗಳನ್ನು ಹೇರುತ್ತಿರುವುದರ ಜೊತೆಗೆ ಅದರ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗೆಗೂ ಜನರಲ್ಲಿ ಅರಿವನ್ನು ಮೂಡಿಸುತ್ತಿವೆ.
ಮೈಸೂರು ಹೊಗೆಸೊಪ್ಪನ್ನು ಆಮದು ಮಾಡಿಕೊಳ್ಳುವ ಕಂಪೆನಿಗಳಲ್ಲಿ, ಬ್ರಿಟಿಷ್ ಅಮೆರಿಕನ್ ಟೊಬ್ಯಾಕೊ, ಫಿಲಿಪ್ ಮೋರಿಸ್, ಜಪಾನ್ ಟೊಬ್ಯಾಕೊ ಇಂಟರ್ನ್ಯಾಷನಲ್, ಇಂಪೀರಿಯಲ್ ಟೊಬ್ಯಾಕೊ ಮುಖ್ಯವಾದವು. ಈ ಕಂಪೆನಿಗಳೇ ಮೈಸೂರು ತಂಬಾಕಿನ ಸಿಂಹಪಾಲನ್ನು ಖರೀದಿ ಮಾಡುತ್ತಿದ್ದವು. ಇವು ಬಿಟ್ಟ ತಂಬಾಕನ್ನು ವಿದೇಶಗಳ ಸಣ್ಣಪುಟ್ಟ ಕಂಪೆನಿಗಳು ಕೊಂಡರೂ ಅವು ಉತ್ತಮ ಬೆಲೆ ನೀಡುವುದಿಲ್ಲ. ಪರಿಣಾಮ ಉತ್ಪನ್ನದ ಪ್ರಮಾಣ ಹೆಚ್ಚಿದ ವರ್ಷಗಳಲ್ಲಿ ಬೆಲೆ ಕುಸಿಯುತ್ತಿದೆ.
ಸಮಸ್ಯೆಗಳ ಸರಮಾಲೆ: ಇಲ್ಲಿನ ಮುಖ್ಯ ಖರ್ಚೆಂದರೆ, ಇಂಧನ, ರಸಗೊಬ್ಬರ, ಕೂಲಿ ಹಾಗೂ ಸಲಕರಣೆಗಳು. ಇಂಧನಗಳಾದ ಸೌದೆ ಹಾಗೂ ಕಾಫಿ ಬೂಸದ ಬೆಲೆ ಹೆಚ್ಚಿನ ವೈಪರೀತ್ಯಗಳಿಂದ ಕೂಡಿರುತ್ತದೆ. ಮೊದಲೇ ಶೇಖರಿಸಿಟ್ಟುಕೊಂಡಲ್ಲಿ ಕಡಿಮೆ ಬೆಲೆಗೆ ಸಿಗುವ ಇವು, ತಂಬಾಕು ಹದ ವಾಡುವ ಪ್ರಕ್ರಿಯೆ ಮುಂದುವರಿದಂತೆ ಎರಡರಿಂದ ಮೂರುಪಟ್ಟು ದುಬಾರಿಯಾಗುತ್ತವೆ. ತಂಬಾಕಿಗೆ ಉತ್ತಮ ಬೆಲೆ ದೊರೆಯುತ್ತಿದ್ದಾಗ ಹೆಚ್ಚಾದ ಕೂಲಿಯು, ಬೆಲೆ ಕಡಿಮೆಯಾದರೂ ಕಡಿಮೆಯಾಗಲಿಲ್ಲ. ಇದು ಒಂದು ಪ್ರಮುಖ ಸಮಸ್ಯೆ ಇವುಗಳ ಜೊತೆಗೆ ಇನ್ನಿತರ ಖರ್ಚುಗಳು ಹಾಗೂ ಒತ್ತಡಗಳು.
ತಂಬಾಕು ಸ್ವಲ್ಪ ಮಟ್ಟಿಗಿನ ಉತ್ತಮ ಜೀವನ ನೀಡಿದ್ದು ಸುಳ್ಳಲ್ಲ. ಸಿರಿವಂತರಲ್ಲದಿದ್ದರೂ, ಬೈಕ್, ಟ್ರಾಕ್ಟರ್, ಟಿವಿಗಳ ಮಾರಾಟ ಹೆಚ್ಚಿದ್ದೂ ಸತ್ಯ. ಇದು ಅವರ ಬೆವರಿಗೆ ಸಿಕ್ಕ ಪ್ರತಿಫಲ.
ಇನ್ನೂ ಹವಾಮಾನ ವೈಪರೀತ್ಯದಿಂದ ಅಕಾಲಿಕ ಮಳೆಯಿಂದಾಗಿ ಬೆಳೆಯ ಇಳುವರಿ ಕೆಲವೊಮ್ಮೆ ಅರ್ಧಕ್ಕಿಂತಲೂ ಕಡಿಮೆಯಾಗುತ್ತಿದೆ. ಪ್ರಪಂಚದೆಲ್ಲೆಡೆ ತಂಬಾಕಿನ ಬಗ್ಗೆ ಕಠಿಣ ಕ್ರಮ ಹಾಗೂ ನೀತಿ, ಆರೋಗ್ಯದ ಬಗೆಗಿನ ಕಾಳಜಿಗಳಿಂದ ದಿನೇ ದಿನೇ ಬೇಡಿಕೆ ಕುಸಿಯುತ್ತಿದೆ. ಇಂತಹ ಸಂದರ್ಭದಲ್ಲಿ ಆದಾಯ ಇಳಿಮುಖವಾಗುತ್ತದೆ.


ಮುಂದಿನ ದಾರಿ?
ರೈತರು ತಂಬಾಕು ಜೊತೆಗೆ ಪರ್ಯಾಯ ಬೆಳೆಗಳತ್ತ ಗಮನ ಹರಿಸಬೇಕಾಗುತ್ತದೆ. ಇದಕ್ಕೆ ಸರ್ಕಾರದ ಸಹಾಯ ಮತ್ತು ನೆರವನ್ನೂ ಪಡೆಯಬೇಕು. ತಂಬಾಕು ಕಂಪೆನಿಗಳು, ತಂಬಾಕು ಬೆಳೆಯ ವಿಜ್ಞಾನಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಮತ್ತೊಂದು ಅಂಶವೆಂದರೆ, ಉತ್ತಮ ಬೇಸಾಯ ಪದ್ಧತಿಗಳಿಂದ ಭೂಮಿಯು ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವುದು. ವೈಜ್ಞಾನಿಕ ಬೇಸಾಯ ಪದ್ಧತಿಗಳನ್ನು ಅನುಸರಿಸಬೇಕಿದೆ. ತಂಬಾಕು ಮಂಡಳಿಯು ತಂಬಾಕು ಬೆಳೆಯ ಅಗತ್ಯತೆಗಳಿಗೆ ಸಬ್ಸಿಡಿ ರೂಪದಲ್ಲಿ ನೆರವಾಗಬೇಕಾಗುತ್ತದೆ. ಯಂತ್ರೋಪಕರಣಗಳ ಬಳಕೆಯನ್ನೂ ಪ್ರೋತ್ಸಾಹಿಸಬೇಕಾಗುತ್ತದೆ. ಸೂಕ್ತ ಬೆಲೆ ನೀಡಬೇಕು.

andolanait

Recent Posts

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

37 mins ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

1 hour ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

2 hours ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

5 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

5 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

5 hours ago