ಎಡಿಟೋರಿಯಲ್

ಸಂಪಾದಕೀಯ: ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡಬೇಕು

ದಕ್ಷಿಣ ಕಾಶ್ಮೀರ ಎಂದು ಪ್ರಖ್ಯಾತವಾಗಿರುವ ಕೊಡಗಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಹಚ್ಚ ಹಸಿರಿನ ಪರಿಸರದ ಜೊತೆಗೆ ಇಲ್ಲಿನ ಸುಂದರ ತಾಣಗಳನ್ನು ಕಣ್ತುಂಬಿಕೊಳ್ಳುವ ಪ್ರವಾಸಿಗರು, ಹತ್ತಾರು ಸೊಗಸಾದ ನೆನಪುಗಳೊಂದಿಗೆ ಮರಳುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರಿಗೆ ಕೆಲವು ಅಹಿತಕರ ಘಟನೆಗಳಿಂದ ಕಹಿ ನೆನೆಪುಗಳೊಂದಿಗೆ ಮರಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.
ಜಿಲ್ಲೆಯ ಕೆಲವು ಪ್ರವಾಸಿ ತಾಣಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಆಗಾಗ್ಗೆ ಹಲ್ಲೆ, ಗಲಾಟೆ ಹಾಗೂ ಇನ್ನಿತರ ಕಾನೂನು ಭಂಗ ಚಟುವಟಿಕೆಗಳು ಹೆಚ್ಚಾಗುತ್ತಿವೆ.

ಪ್ರವಾಸಿಗರಿಗೆ ಸೂಕ್ತ ಭದ್ರತೆ ಇಲ್ಲದಂತಾಗಿದೆ ಎಂದು ಖುದ್ದು ಪ್ರವಾಸಿಗರೇ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಾರೆ. ಸೂಕ್ತವಾದ ರಕ್ಷಣೆ ಇಲ್ಲವಾದರೇ, ಯಾವ ಧೈರ್ಯದಿಂದ ಇಲ್ಲಿಗೆ ಭೇಟಿ ನೀಡುವುದು? ಅನಾಹುತಗಳು ಸಂಭವಿಸಿದರೇ ಹೊಣೆ ಯಾರು ಎಂದು ಪ್ರವಾಸಿಗರು ಪ್ರಶ್ನಿಸಲಾರಂಭಿಸಿದ್ದಾರೆ.
ಕಾವೇರಿ ನಿಸರ್ಗಧಾಮದ ವಾಹನ ನಿಲುಗಡೆ ಜಾಗದಲ್ಲಿ ಟ್ಯಾಕ್ಸಿ ಹಾಗೂ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಪ್ರವಾಸಿಗರನ್ನು ಒತ್ತಾಯ ಪೂರ್ವಕವಾಗಿ ಟ್ಯಾಕ್ಸಿ ಹತ್ತುವಂತೆ ಕಿರಿಕಿರಿ ಮಾಡುತ್ತಿದ್ದಾರೆ. ಇದೇ ವಿಷಯಕ್ಕೆ ಕಲಹ ಏರ್ಪಡುತ್ತಿದೆ. ಕೆಲವು ದಿನಗಳ ಹಿಂದೆ ಟ್ಯಾಕ್ಸಿ ಚಾಲಕ, ಪ್ರವಾಸಿಗನೋರ್ವ ಕಾರಿಗೆ ಒರಗಿ ನಿಂತ ಎಂದು ಥಳಿಸಿದ ಘಟನೆ ನಡೆದಿದೆ. ಘಟನೆ ಸಂಬಂಧ ಕುಶಾಲನಗರ ಪಟ್ಟಣ ಪೊಲೀಸರು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆಲವು ತಿಂಗಳ ಹಿಂದೆ ಒಬ್ಬರು ಮಹಿಳೆಯ ಮೇಲೆ ಕಾರು ಚಾಲಕ ಥಳಿಸಿದ ಹಿನ್ನಲೆ ವಿಷಯ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಕಾರು ಚಾಲಕ ಹಲ್ಲೆ ನಡೆಸಿದ ವೀಡಿಯೋ ನಿಸರ್ಗಧಾಮ ಟೂರಿಸ್ಟ್ ಸೆಂಟರ್‌ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

ಇನ್ನು ಅಪಘಾತದಂತಹ ಪ್ರಕರಣಗಳಲ್ಲಿ ಪ್ರವಾಸಿಗರ ವಾಹನವೆಂದು ತಿಳಿದರೆ ಹಲ್ಲೆ ನಡೆಸಿದ ಮೇಲೆಯೇ ಇತರ ವಿಚಾರದ ಮಾತುಕತೆ ಆರಂಭವಾಗುತ್ತದೆ.

ಪ್ರವಾಸಿ ತಾಣಗಳಲ್ಲಿ ಗಲಾಟೆ, ಹಲ್ಲೆಗಳು ಸಾಮಾನ್ಯವಾದಂತಿದೆ. ಇತ್ತೀಚಿನ ಕೆಲವು ತಿಂಗಳ ಬೆಳವಣಿಗೆಗಳನ್ನು ಗಮನಿಸಿದರೆ, ಕಾವೇರಿ ನಿಸರ್ಗಧಾಮದಲ್ಲಿ ಯುವಕನೋರ್ವ ಪ್ರೇಯಸಿಗೆ ಚೂರಿ ಹಾಕಿದ್ದು, ಪ್ರವಾಸಿ ಮಹಿಳೆಯ ಮೇಲೆ ಕಾರು ಚಾಲಕ ಹಲ್ಲೆ ನಡೆಸಿದ್ದು, ನಿಸರ್ಗಧಾಮ ಟೂರಿಸ್ಟ್ ಸೆಂಟರ್‌ಗೆ ಆಗಮಿಸಿದ ಕೇರಳದ ಪ್ರವಾಸಿಗರೊಂದಿಗೆ ಎನ್‌ಟಿಸಿ ಕಾರ್ಮಿಕರ ದುರ್ನಡತೆ, ಹಿಂದೆ ಮಾಂದಲ್‌ಪಟ್ಟಿಗೆ ಆಗಮಿಸಿದ ಪ್ರವಾಸಿಗರಿಗೆ ಸ್ಥಳೀಯರು ಹಲ್ಲೆ ನಡೆಸಿರುವುದು, ಕೆಲವು ದಿನಗಳ ಹಿಂದೆ ಕಾರು ಚಾಲಕ ಪ್ರವಾಸಿಗನ ಮೇಲೆ ನಡೆಸಿದ ಹಲ್ಲೆ, ಹೀಗೆ ಹಲವು ಅಹಿತಕರ ಘಟನೆ ನಡೆಯುತ್ತಲೇ ಇವೆ.

ಕಾವೇರಿ ನಿಸರ್ಗಧಾಮ, ನಿಸರ್ಗಧಾಮ ಟೂರಿಸ್ಟ್ ಸೆಂಟರ್, ದುಬಾರೆ, ಮಾಂದಲ್‌ಪಟ್ಟಿ ಹಾಗೂ ಇನ್ನಿತರ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಮೇಲೆ ನಡೆಯುವ ದೌರ್ಜನ್ಯಕ್ಕೆ ಸಂಬಂಧಪಟ್ಟಂತೆ ಪ್ರವಾಸಿಗರು ಪೊಲೀಸ್ ಮೆಟ್ಟಿಲೇರಿದ್ದಾರೆ. ಆದರೆ, ಹಲ್ಲೆ ನಡೆಸಿದವರು ಪ್ರಭಾವ ಬಳಸಿ, ರಾಜಿ ಸಂದಾನ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಘಟನೆಗಳು ಮರುಕಳಿಸುತ್ತಿದೆ.

ಕೊಡಗಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಸೂಕ್ತ ಭದ್ರತೆ ಒದಗಿಸುವ ಕೆಲಸ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಗಬೇಕಾಗಿದೆ. ಇಲ್ಲದಿದ್ದಲ್ಲಿ ಪ್ರವಾಸಿಗರು ಕೊಡಗಿಗೆ ಬರಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದರಿಂದ ಪ್ರವಾಸೋದ್ಯಮ ಅವಲಂಬಿತರು ಮತ್ತಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ.

ಕ್ಷುಲ್ಲಕ ಕಾರಣಕ್ಕೆ ನಡೆಯುವ ಗಲಾಟೆಗಳಿಂದ ಭಾರೀ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆಯೂ ಇದೆ. ಕೆಲವು ವರ್ಷಗಳ ಹಿಂದೆ ದುಬಾರೆಗೆ ಭೇಟಿ ನೀಡಿದ ಕೇರಳದ ೧೯ ವರ್ಷದ ಯುವಕನೋರ್ವ ಸ್ಥಳೀಯರಿಂದ ಹಲ್ಲೆಗೊಳಗಾದ ಆರೋಪದಲ್ಲಿ ಮರಣ ಹೊಂದಿದ ಘಟನೆ ಇದಕ್ಕೆ ಸೂಕ್ತ ಉದಾಹರಣೆ. ಪ್ರವಾಸಿಗರಿಗೆ ಅಗತ್ಯ ಭದ್ರತೆ ಒದಗಿಸುವ ಮೂಲಕ ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟವರು ಕಾರ್ಯೋನ್ಮುಖರಾಗಬೇಕಾಗಿದೆ.
ಪ್ರವಾಸಿಗರ ಮೇಲೆ ಆಗುವ ದೌರ್ಜನ್ಯಕ್ಕೆ ಸಂಬಂಧಪಟ್ಟಂತೆ ಪ್ರತಿಯೊಂದು ಘಟನೆಗಳ ಮೇಲೂ ಪ್ರಕರಣ ದಾಖಲಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆ ಮೂಲಕ ಅತಿಥಿ ಸತ್ಕಾರಕ್ಕೆ ಹೆಸರುವಾಸಿಯಾಗಿರುವ ಕೊಡಗಿನ ಹಿರಿಮೆ ಮತ್ತಷ್ಟು ಹೆಚ್ಚಿಸಬೇಕಿದೆ. ಪ್ರವಾಸೋದ್ಯಮ ಇಲಾಖೆ ಹಾಗೂ ಪೊಲೀಸ್ ಇಲಾಖೆ ಪ್ರವಾಸಿ ತಾಣಗಳಲ್ಲಿ ಸಿಬ್ಬಂದಿಗಳ ಮೂಲಕ ಸೂಕ್ತ ರಕ್ಷಣೆ ಒದಗಿಸುವ ಕೆಲಸ ಮಾಡಬೇಕಿದೆ. ಪ್ರವಾಸಿಗರು ಪೊಲೀಸ್ ಠಾಣೆ ಮೆಟ್ಟಿಲೇರಿದ ಸಂದರ್ಭದಲ್ಲಿ ತ್ವರಿತವಾಗಿ ಸೂಕ್ತ ನ್ಯಾಯ ಒದಗಿಸುವ ಕಾರ್ಯ ಪೊಲೀಸ್ ಇಲಾಖೆಯಿಂದ ಆಗಬೇಕಿದೆ.

andolana

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

2 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

2 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

2 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

2 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

2 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

2 hours ago