ಎಡಿಟೋರಿಯಲ್

ಆಂದೋಲನ ವಿ4 : ವಿತ್ತ ವಿಜ್ಞಾನ ವಿಶೇಷ ವಿಹಾರ

 ಹೊಸ ವರ್ಷಕ್ಕೆ ತೈಲ ಬೆಲೆ ಇಳಿಕೆ?

೨೦೨೩ಕ್ಕೆ ಮತ್ತಷ್ಟು ತೈಲ ಬೆಲೆ ಇಳಿಯುವ ಸೂಚನೆಗಳು ಜಾಗತಿಕ ತೈಲ ಮಾರುಕಟ್ಟೆಯ ವರ್ತಮಾನಗಳಿಂದ ಕಂಡು ಬರುತ್ತಿದೆ. ಅದರಲ್ಲೂ ಒಪೆಕ್ ರಾಷ್ಟ್ರಗಳ ನಿರ್ಧಾರವು ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಮೂಡಿಸುತ್ತಿದೆ. ಒಂದೆಡೆ, ಒಪೆಕ್ ರಾಷ್ಟ್ರಗಳು ಕಳೆದ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಪ್ರತಿ ದಿನಕ್ಕೆ ಕಚ್ಚಾ ತೈಲ ಉತ್ಪಾದನೆಯನ್ನು ೭,೧೦,೦೦೦ ಬ್ಯಾರೆಲ್‌ಗಳಷ್ಟು ಕಡಿತ ಮಾಡಿದ್ದವು. ಮತ್ತೊಂದೆಡೆ, ರಷ್ಯಾದ ತೈಲ ಬಾವಿಗಳಲ್ಲಿ ಉತ್ಪಾದನೆ ಹೆಚ್ಚಾ ಯಿತು. ಇದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಂಚ್ ಮಾರ್ಕ್ ಬೆಲೆಗಳ ಇಳಿಕೆಗೆ ಕಾರಣವಾಯಿತು. ಇದು ಹೊಸ ವರ್ಷದವರೆಗೂ ಮುಂದು ವರಿಯುವ ಲೆಕ್ಕಾಚಾರಗಳಿವೆ. ಆದರೆ, ಸತತ ೨೫೦ನೇ ದಿನವೂ ಭಾರತೀಯ ಮಾರು ಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.


ಮಹಿಳೆಯರ ಆರೋಗ್ಯಕ್ಕೆ ಸ್ಮಾರ್ಟ್ ವಾಚ್

ದೇಶದ ಜನಪ್ರಿಯ ಕಂಪೆನಿಗಳಲ್ಲಿ ಒಂದಾದ ‘ಸಿಸ್ಕಾ’ ತನ್ನ ಅಕ್ಸೆಸರೀಸ್ ಹೆಸರಿನಲ್ಲಿ ‘ಸಿಸ್ಕಾ ಡೊನ್ನಾ ಎಸ್‌ಎಸ್ ಡಬ್ಲ್ಯು ೧೦೬’ ಸ್ಮಾರ್ಟ್ ವಾಚ್ ಅನ್ನು ಕೆಲವು ದಿನಗಳ ಹಿಂದೆ ಮಾರುಕಟ್ಟೆಗೆ ತಂದಿದೆ.
ಈ ವಾಚ್ ದೀರ್ಘಾವಧಿಯ ಬ್ಯಾಟರಿ ಬಾಳಿಕೆ, ಆಕರ್ಷಕ ವಿನ್ಯಾಸ ಹಾಗೂ ಹಲವು ವೈಶಿಷ್ಟ್ಯಗಳೊಂದಿಗೆ ಗಮನ ಸೆಳೆಯುತ್ತಿದೆ. ಈ ವಾಚ್ ಅನ್ನು ವಿಶೇಷವಾಗಿ ಮಹಿಳೆಯರಿಗಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಕಂಪೆನಿ ಹೇಳಿದೆ.
ಸ್ಮಾರ್ಟ್‌ವಾಚ್‌ನಲ್ಲಿ ಮಹಿಳೆಯರಿಗಾಗಿ ಗರ್ಭಧಾರಣೆಯ ಟ್ರಾಕಿಂಗ್ ಅನ್ನು ಸಂಯೋಜಿಸಿದೆ. ಮಗುವಿನ ನಿರೀಕ್ಷೆಯಲ್ಲಿರುವ ಮಹಿಳೆಯರು ಆರೋಗ್ಯವನ್ನು ಹೇಗೆ ಸುಧಾರಿಸಿಕೊಳ್ಳಬಹುದು ಎಂಬುದರ ಕುರಿತು ಮಾಹಿತಿಗಳನ್ನು ನೀಡುತ್ತದೆ.


ಯುಕೆಯಲ್ಲೂ ವಿವೇಕ್ ಪ್ಲಾಗಿಂಗ್

ಪ್ಲಾಗಿಂಗ್ ಮೂಲಕ ಕಸ ಹೆಕ್ಕುವ ಹೊಸ ಸಂಪ್ರದಾಯ ಹುಟ್ಟು ಹಾಕಿ ಬಹು ಮಾನ ಪಡೆದಿರುವ ಭಾರತ ಮೂಲದ ವಿವೇಕ್ ಗುರವ್ ಅವರ ಪ್ರಯತ್ನಕ್ಕೆ ಯುಕೆಯಲ್ಲಿ ಉತ್ತಮ ಸ್ಪಂದನೆ ಕಂಡು ಬಂದಿದೆ. 2018ರಲ್ಲಿ ಪುಣೆಯಲ್ಲಿ ಜಾಗಿಂಗ್ ಜತೆ ಜತೆಗೆ ಪುಟ್ಟ ಕೋಲುಗಳನ್ನು ಬಳಸಿ ಕಸ ಹೆಕ್ಕುವ ಸಂಪ್ರದಾಯ ಹುಟ್ಟುಹಾಕಿದ್ದ ವಿವೇಕ್ ಅದಕ್ಕೆ ಪ್ಲಾಗಿಂಗ್ ಎಂದು ಹೆಸರಿಟ್ಟಿದ್ದರು. ಈಗ ಲಂಡನ್‌ನಲ್ಲಿ ವಿದ್ಯಾರ್ಥಿಯಾಗಿರುವ ಅವರು ಯುಕೆಯ ಡರ್ಬಿ, ಮ್ಯಾಂಚೆಸ್ಟರ್, ಲೀಡ್ಸ್ ಸಹಿತ ೩೦ ಪ್ರಮುಖ ನಗರಗಳಲ್ಲಿ ಇದನ್ನು ವಿಸ್ತರಿಸಲು ಮುಂದಾಗಿದ್ದಾರೆ. ಈಗಾಗಲೇ ಲಂಡನ್‌ನಲ್ಲಿ ಹಲವರು ವಿವೇಕ್ ಅವರ ಪ್ಲಾಗಿಂಗ್‌ಗೆ ಸಾಥ್  ನೀಡಿದ್ದಾರೆ.


ವಾಸ್ತುಶಿಲ್ಪದ ಹೊಸ ಹೊಳಲು

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಹೊಸ ಹೊಳಲು ಗ್ರಾಮದಲ್ಲಿರುವ ಲಕ್ಷ್ಮೀನಾರಾಯಣ ದೇಗುಲ ನಮ್ಮ ಐತಿಹಾಸಿಕ ಪರಂಪರೆಯ ಮಹತ್ವವನ್ನು ಸಾರುತ್ತದೆ. ಇಡೀ ದೇಗುಲದ ವಾಸ್ತುಶಿಲ್ಪವು ಮನೋಜ್ಞವಾಗಿದ್ದು, ಭಾರತೀಯ ವಾಸ್ತುಶಿಲ್ಪ ವನ್ನು ಜಗತ್ತಿಗೆ ಸಾರುವಂತಿದೆ. ಈ ದೇಗುಲವು ಹೊಯ್ಸಳ ಶೈಲಿಯಿಂದ ಕೂಡಿದ್ದು, ಸುಂದರ ಕೆತ್ತನೆಯಿಂದಲೇ ಪ್ರವಾಸಿಗರ ಗಮನ ಸೆಳಯುತ್ತಿದೆ. ದೇಗುಲದ ಹೊರ ಆವರಣ, ಒಳಾಂಗಣದ ಒಟ್ಟಾರೆ ವಿನ್ಯಾಸ ಕಲಾವಿದನ ಶ್ರೇಷ್ಠತೆಯನ್ನು ಸಾರುವುದಂತೂ ನಿಜ. ಮೂರು ಗೋಪುರಗಳು ಸೇರಿ ಒಂದು ಮಂದಿರವಾಗಿರುವುದು ವಿಶೇಷವಾಗಿ ಕಂಡು ಬರುತ್ತದೆ. ಕೆ.ಆರ್.ಪೇಟೆಯಿಂದ ೮. ಕಿ.ಮೀ.,ಮಂಡ್ಯದಿಂದ ೬೧ ಕಿ. ಮೀ .ಹಾಗೂ ಮೈಸೂರಿನಿಂದ ೬೧ ಕಿ.ಮೀ . ದೂರದಲ್ಲಿದೆ.

andolanait

Recent Posts

ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…

37 mins ago

ಮೈಸೂರು | ಸ್ವಚ್ಛ ಸರ್ವೇಕ್ಷಣೆ ; ಜಾಥಾ ನಡೆಸಿ ಜನರಿಗೆ ಜಾಗೃತಿ

ಮೈಸೂರು : ಸ್ವಚ್ಛ ಸರ್ವೇಕ್ಷಣೆ-2026ರ ಅಂಗವಾಗಿ ನಗರಪಾಲಿಕೆ ವತಿಯಿಂದ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಿಂದ ಜಾಥಾ ಹಾಗೂ…

42 mins ago

ಜ್ಞಾನದ ಜೊತೆ ಕೌಶಲವೂ ಮುಖ್ಯ : ಪರೀಕ್ಷಾಂಗ ಕುಲಸಚಿವ ನಾಗರಾಜು ಅಭಿಮತ

ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…

1 hour ago

ಡಿ.ಕೆ.ಶಿವಕುಮಾರ್‌ ನಿಯತ್ತಿನ ಸೈನಿಕ: ಶಾಸಕ ರವಿಕುಮಾರ್‌ ಗಣಿಗ ಬ್ಯಾಟಿಂಗ್‌

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ…

3 hours ago

ಸಾಗರದಲ್ಲಿ ಭಾರತದ ಸಾರ್ವಭೌಮತ್ವ: ವಿಶಾಖಪಟ್ಟಣಂನಲ್ಲಿ ರಾಷ್ಟ್ರಪತಿ ಮುರ್ಮುರಿಂದ ನೌಕಾಶಕ್ತಿ ಪ್ರದರ್ಶನ ವೀಕ್ಷಣೆ

ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…

4 hours ago

ಗುಂಡ್ಲುಪೇಟೆ| ಹುಲಿ ದಾಳಿಗೆ ಹಸು ಸಾವು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ‌ ದಾಳಿ ನಡೆಸಿ ಕೊಂದು…

4 hours ago