ಹೊಸ ವರ್ಷಕ್ಕೆ ತೈಲ ಬೆಲೆ ಇಳಿಕೆ?
೨೦೨೩ಕ್ಕೆ ಮತ್ತಷ್ಟು ತೈಲ ಬೆಲೆ ಇಳಿಯುವ ಸೂಚನೆಗಳು ಜಾಗತಿಕ ತೈಲ ಮಾರುಕಟ್ಟೆಯ ವರ್ತಮಾನಗಳಿಂದ ಕಂಡು ಬರುತ್ತಿದೆ. ಅದರಲ್ಲೂ ಒಪೆಕ್ ರಾಷ್ಟ್ರಗಳ ನಿರ್ಧಾರವು ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಮೂಡಿಸುತ್ತಿದೆ. ಒಂದೆಡೆ, ಒಪೆಕ್ ರಾಷ್ಟ್ರಗಳು ಕಳೆದ ಅಕ್ಟೋಬರ್ ಮತ್ತು ನವೆಂಬರ್ನಲ್ಲಿ ಪ್ರತಿ ದಿನಕ್ಕೆ ಕಚ್ಚಾ ತೈಲ ಉತ್ಪಾದನೆಯನ್ನು ೭,೧೦,೦೦೦ ಬ್ಯಾರೆಲ್ಗಳಷ್ಟು ಕಡಿತ ಮಾಡಿದ್ದವು. ಮತ್ತೊಂದೆಡೆ, ರಷ್ಯಾದ ತೈಲ ಬಾವಿಗಳಲ್ಲಿ ಉತ್ಪಾದನೆ ಹೆಚ್ಚಾ ಯಿತು. ಇದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಂಚ್ ಮಾರ್ಕ್ ಬೆಲೆಗಳ ಇಳಿಕೆಗೆ ಕಾರಣವಾಯಿತು. ಇದು ಹೊಸ ವರ್ಷದವರೆಗೂ ಮುಂದು ವರಿಯುವ ಲೆಕ್ಕಾಚಾರಗಳಿವೆ. ಆದರೆ, ಸತತ ೨೫೦ನೇ ದಿನವೂ ಭಾರತೀಯ ಮಾರು ಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಮಹಿಳೆಯರ ಆರೋಗ್ಯಕ್ಕೆ ಸ್ಮಾರ್ಟ್ ವಾಚ್
ದೇಶದ ಜನಪ್ರಿಯ ಕಂಪೆನಿಗಳಲ್ಲಿ ಒಂದಾದ ‘ಸಿಸ್ಕಾ’ ತನ್ನ ಅಕ್ಸೆಸರೀಸ್ ಹೆಸರಿನಲ್ಲಿ ‘ಸಿಸ್ಕಾ ಡೊನ್ನಾ ಎಸ್ಎಸ್ ಡಬ್ಲ್ಯು ೧೦೬’ ಸ್ಮಾರ್ಟ್ ವಾಚ್ ಅನ್ನು ಕೆಲವು ದಿನಗಳ ಹಿಂದೆ ಮಾರುಕಟ್ಟೆಗೆ ತಂದಿದೆ.
ಈ ವಾಚ್ ದೀರ್ಘಾವಧಿಯ ಬ್ಯಾಟರಿ ಬಾಳಿಕೆ, ಆಕರ್ಷಕ ವಿನ್ಯಾಸ ಹಾಗೂ ಹಲವು ವೈಶಿಷ್ಟ್ಯಗಳೊಂದಿಗೆ ಗಮನ ಸೆಳೆಯುತ್ತಿದೆ. ಈ ವಾಚ್ ಅನ್ನು ವಿಶೇಷವಾಗಿ ಮಹಿಳೆಯರಿಗಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಕಂಪೆನಿ ಹೇಳಿದೆ.
ಸ್ಮಾರ್ಟ್ವಾಚ್ನಲ್ಲಿ ಮಹಿಳೆಯರಿಗಾಗಿ ಗರ್ಭಧಾರಣೆಯ ಟ್ರಾಕಿಂಗ್ ಅನ್ನು ಸಂಯೋಜಿಸಿದೆ. ಮಗುವಿನ ನಿರೀಕ್ಷೆಯಲ್ಲಿರುವ ಮಹಿಳೆಯರು ಆರೋಗ್ಯವನ್ನು ಹೇಗೆ ಸುಧಾರಿಸಿಕೊಳ್ಳಬಹುದು ಎಂಬುದರ ಕುರಿತು ಮಾಹಿತಿಗಳನ್ನು ನೀಡುತ್ತದೆ.
ಯುಕೆಯಲ್ಲೂ ವಿವೇಕ್ ಪ್ಲಾಗಿಂಗ್
ಪ್ಲಾಗಿಂಗ್ ಮೂಲಕ ಕಸ ಹೆಕ್ಕುವ ಹೊಸ ಸಂಪ್ರದಾಯ ಹುಟ್ಟು ಹಾಕಿ ಬಹು ಮಾನ ಪಡೆದಿರುವ ಭಾರತ ಮೂಲದ ವಿವೇಕ್ ಗುರವ್ ಅವರ ಪ್ರಯತ್ನಕ್ಕೆ ಯುಕೆಯಲ್ಲಿ ಉತ್ತಮ ಸ್ಪಂದನೆ ಕಂಡು ಬಂದಿದೆ. 2018ರಲ್ಲಿ ಪುಣೆಯಲ್ಲಿ ಜಾಗಿಂಗ್ ಜತೆ ಜತೆಗೆ ಪುಟ್ಟ ಕೋಲುಗಳನ್ನು ಬಳಸಿ ಕಸ ಹೆಕ್ಕುವ ಸಂಪ್ರದಾಯ ಹುಟ್ಟುಹಾಕಿದ್ದ ವಿವೇಕ್ ಅದಕ್ಕೆ ಪ್ಲಾಗಿಂಗ್ ಎಂದು ಹೆಸರಿಟ್ಟಿದ್ದರು. ಈಗ ಲಂಡನ್ನಲ್ಲಿ ವಿದ್ಯಾರ್ಥಿಯಾಗಿರುವ ಅವರು ಯುಕೆಯ ಡರ್ಬಿ, ಮ್ಯಾಂಚೆಸ್ಟರ್, ಲೀಡ್ಸ್ ಸಹಿತ ೩೦ ಪ್ರಮುಖ ನಗರಗಳಲ್ಲಿ ಇದನ್ನು ವಿಸ್ತರಿಸಲು ಮುಂದಾಗಿದ್ದಾರೆ. ಈಗಾಗಲೇ ಲಂಡನ್ನಲ್ಲಿ ಹಲವರು ವಿವೇಕ್ ಅವರ ಪ್ಲಾಗಿಂಗ್ಗೆ ಸಾಥ್ ನೀಡಿದ್ದಾರೆ.
ವಾಸ್ತುಶಿಲ್ಪದ ಹೊಸ ಹೊಳಲು
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಹೊಸ ಹೊಳಲು ಗ್ರಾಮದಲ್ಲಿರುವ ಲಕ್ಷ್ಮೀನಾರಾಯಣ ದೇಗುಲ ನಮ್ಮ ಐತಿಹಾಸಿಕ ಪರಂಪರೆಯ ಮಹತ್ವವನ್ನು ಸಾರುತ್ತದೆ. ಇಡೀ ದೇಗುಲದ ವಾಸ್ತುಶಿಲ್ಪವು ಮನೋಜ್ಞವಾಗಿದ್ದು, ಭಾರತೀಯ ವಾಸ್ತುಶಿಲ್ಪ ವನ್ನು ಜಗತ್ತಿಗೆ ಸಾರುವಂತಿದೆ. ಈ ದೇಗುಲವು ಹೊಯ್ಸಳ ಶೈಲಿಯಿಂದ ಕೂಡಿದ್ದು, ಸುಂದರ ಕೆತ್ತನೆಯಿಂದಲೇ ಪ್ರವಾಸಿಗರ ಗಮನ ಸೆಳಯುತ್ತಿದೆ. ದೇಗುಲದ ಹೊರ ಆವರಣ, ಒಳಾಂಗಣದ ಒಟ್ಟಾರೆ ವಿನ್ಯಾಸ ಕಲಾವಿದನ ಶ್ರೇಷ್ಠತೆಯನ್ನು ಸಾರುವುದಂತೂ ನಿಜ. ಮೂರು ಗೋಪುರಗಳು ಸೇರಿ ಒಂದು ಮಂದಿರವಾಗಿರುವುದು ವಿಶೇಷವಾಗಿ ಕಂಡು ಬರುತ್ತದೆ. ಕೆ.ಆರ್.ಪೇಟೆಯಿಂದ ೮. ಕಿ.ಮೀ.,ಮಂಡ್ಯದಿಂದ ೬೧ ಕಿ. ಮೀ .ಹಾಗೂ ಮೈಸೂರಿನಿಂದ ೬೧ ಕಿ.ಮೀ . ದೂರದಲ್ಲಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…