ಹೊಸ ವರ್ಷಕ್ಕೆ ತೈಲ ಬೆಲೆ ಇಳಿಕೆ?
೨೦೨೩ಕ್ಕೆ ಮತ್ತಷ್ಟು ತೈಲ ಬೆಲೆ ಇಳಿಯುವ ಸೂಚನೆಗಳು ಜಾಗತಿಕ ತೈಲ ಮಾರುಕಟ್ಟೆಯ ವರ್ತಮಾನಗಳಿಂದ ಕಂಡು ಬರುತ್ತಿದೆ. ಅದರಲ್ಲೂ ಒಪೆಕ್ ರಾಷ್ಟ್ರಗಳ ನಿರ್ಧಾರವು ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಮೂಡಿಸುತ್ತಿದೆ. ಒಂದೆಡೆ, ಒಪೆಕ್ ರಾಷ್ಟ್ರಗಳು ಕಳೆದ ಅಕ್ಟೋಬರ್ ಮತ್ತು ನವೆಂಬರ್ನಲ್ಲಿ ಪ್ರತಿ ದಿನಕ್ಕೆ ಕಚ್ಚಾ ತೈಲ ಉತ್ಪಾದನೆಯನ್ನು ೭,೧೦,೦೦೦ ಬ್ಯಾರೆಲ್ಗಳಷ್ಟು ಕಡಿತ ಮಾಡಿದ್ದವು. ಮತ್ತೊಂದೆಡೆ, ರಷ್ಯಾದ ತೈಲ ಬಾವಿಗಳಲ್ಲಿ ಉತ್ಪಾದನೆ ಹೆಚ್ಚಾ ಯಿತು. ಇದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಂಚ್ ಮಾರ್ಕ್ ಬೆಲೆಗಳ ಇಳಿಕೆಗೆ ಕಾರಣವಾಯಿತು. ಇದು ಹೊಸ ವರ್ಷದವರೆಗೂ ಮುಂದು ವರಿಯುವ ಲೆಕ್ಕಾಚಾರಗಳಿವೆ. ಆದರೆ, ಸತತ ೨೫೦ನೇ ದಿನವೂ ಭಾರತೀಯ ಮಾರು ಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಮಹಿಳೆಯರ ಆರೋಗ್ಯಕ್ಕೆ ಸ್ಮಾರ್ಟ್ ವಾಚ್
ದೇಶದ ಜನಪ್ರಿಯ ಕಂಪೆನಿಗಳಲ್ಲಿ ಒಂದಾದ ‘ಸಿಸ್ಕಾ’ ತನ್ನ ಅಕ್ಸೆಸರೀಸ್ ಹೆಸರಿನಲ್ಲಿ ‘ಸಿಸ್ಕಾ ಡೊನ್ನಾ ಎಸ್ಎಸ್ ಡಬ್ಲ್ಯು ೧೦೬’ ಸ್ಮಾರ್ಟ್ ವಾಚ್ ಅನ್ನು ಕೆಲವು ದಿನಗಳ ಹಿಂದೆ ಮಾರುಕಟ್ಟೆಗೆ ತಂದಿದೆ.
ಈ ವಾಚ್ ದೀರ್ಘಾವಧಿಯ ಬ್ಯಾಟರಿ ಬಾಳಿಕೆ, ಆಕರ್ಷಕ ವಿನ್ಯಾಸ ಹಾಗೂ ಹಲವು ವೈಶಿಷ್ಟ್ಯಗಳೊಂದಿಗೆ ಗಮನ ಸೆಳೆಯುತ್ತಿದೆ. ಈ ವಾಚ್ ಅನ್ನು ವಿಶೇಷವಾಗಿ ಮಹಿಳೆಯರಿಗಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಕಂಪೆನಿ ಹೇಳಿದೆ.
ಸ್ಮಾರ್ಟ್ವಾಚ್ನಲ್ಲಿ ಮಹಿಳೆಯರಿಗಾಗಿ ಗರ್ಭಧಾರಣೆಯ ಟ್ರಾಕಿಂಗ್ ಅನ್ನು ಸಂಯೋಜಿಸಿದೆ. ಮಗುವಿನ ನಿರೀಕ್ಷೆಯಲ್ಲಿರುವ ಮಹಿಳೆಯರು ಆರೋಗ್ಯವನ್ನು ಹೇಗೆ ಸುಧಾರಿಸಿಕೊಳ್ಳಬಹುದು ಎಂಬುದರ ಕುರಿತು ಮಾಹಿತಿಗಳನ್ನು ನೀಡುತ್ತದೆ.
ಯುಕೆಯಲ್ಲೂ ವಿವೇಕ್ ಪ್ಲಾಗಿಂಗ್
ಪ್ಲಾಗಿಂಗ್ ಮೂಲಕ ಕಸ ಹೆಕ್ಕುವ ಹೊಸ ಸಂಪ್ರದಾಯ ಹುಟ್ಟು ಹಾಕಿ ಬಹು ಮಾನ ಪಡೆದಿರುವ ಭಾರತ ಮೂಲದ ವಿವೇಕ್ ಗುರವ್ ಅವರ ಪ್ರಯತ್ನಕ್ಕೆ ಯುಕೆಯಲ್ಲಿ ಉತ್ತಮ ಸ್ಪಂದನೆ ಕಂಡು ಬಂದಿದೆ. 2018ರಲ್ಲಿ ಪುಣೆಯಲ್ಲಿ ಜಾಗಿಂಗ್ ಜತೆ ಜತೆಗೆ ಪುಟ್ಟ ಕೋಲುಗಳನ್ನು ಬಳಸಿ ಕಸ ಹೆಕ್ಕುವ ಸಂಪ್ರದಾಯ ಹುಟ್ಟುಹಾಕಿದ್ದ ವಿವೇಕ್ ಅದಕ್ಕೆ ಪ್ಲಾಗಿಂಗ್ ಎಂದು ಹೆಸರಿಟ್ಟಿದ್ದರು. ಈಗ ಲಂಡನ್ನಲ್ಲಿ ವಿದ್ಯಾರ್ಥಿಯಾಗಿರುವ ಅವರು ಯುಕೆಯ ಡರ್ಬಿ, ಮ್ಯಾಂಚೆಸ್ಟರ್, ಲೀಡ್ಸ್ ಸಹಿತ ೩೦ ಪ್ರಮುಖ ನಗರಗಳಲ್ಲಿ ಇದನ್ನು ವಿಸ್ತರಿಸಲು ಮುಂದಾಗಿದ್ದಾರೆ. ಈಗಾಗಲೇ ಲಂಡನ್ನಲ್ಲಿ ಹಲವರು ವಿವೇಕ್ ಅವರ ಪ್ಲಾಗಿಂಗ್ಗೆ ಸಾಥ್ ನೀಡಿದ್ದಾರೆ.
ವಾಸ್ತುಶಿಲ್ಪದ ಹೊಸ ಹೊಳಲು
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಹೊಸ ಹೊಳಲು ಗ್ರಾಮದಲ್ಲಿರುವ ಲಕ್ಷ್ಮೀನಾರಾಯಣ ದೇಗುಲ ನಮ್ಮ ಐತಿಹಾಸಿಕ ಪರಂಪರೆಯ ಮಹತ್ವವನ್ನು ಸಾರುತ್ತದೆ. ಇಡೀ ದೇಗುಲದ ವಾಸ್ತುಶಿಲ್ಪವು ಮನೋಜ್ಞವಾಗಿದ್ದು, ಭಾರತೀಯ ವಾಸ್ತುಶಿಲ್ಪ ವನ್ನು ಜಗತ್ತಿಗೆ ಸಾರುವಂತಿದೆ. ಈ ದೇಗುಲವು ಹೊಯ್ಸಳ ಶೈಲಿಯಿಂದ ಕೂಡಿದ್ದು, ಸುಂದರ ಕೆತ್ತನೆಯಿಂದಲೇ ಪ್ರವಾಸಿಗರ ಗಮನ ಸೆಳಯುತ್ತಿದೆ. ದೇಗುಲದ ಹೊರ ಆವರಣ, ಒಳಾಂಗಣದ ಒಟ್ಟಾರೆ ವಿನ್ಯಾಸ ಕಲಾವಿದನ ಶ್ರೇಷ್ಠತೆಯನ್ನು ಸಾರುವುದಂತೂ ನಿಜ. ಮೂರು ಗೋಪುರಗಳು ಸೇರಿ ಒಂದು ಮಂದಿರವಾಗಿರುವುದು ವಿಶೇಷವಾಗಿ ಕಂಡು ಬರುತ್ತದೆ. ಕೆ.ಆರ್.ಪೇಟೆಯಿಂದ ೮. ಕಿ.ಮೀ.,ಮಂಡ್ಯದಿಂದ ೬೧ ಕಿ. ಮೀ .ಹಾಗೂ ಮೈಸೂರಿನಿಂದ ೬೧ ಕಿ.ಮೀ . ದೂರದಲ್ಲಿದೆ.
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…