ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 28 ಬುಧವಾರ 2022

1 ವರ್ಷದಲ್ಲಿ ೪೯೩ ಮಕ್ಕಳು ನಾಪತ್ತೆ !

ರಾಜ್ಯದಲ್ಲಿರುವ ಸಾಕಷ್ಟು ಬಾಲಮಂದಿರಗಳಲ್ಲಿ ೧ ವರ್ಷದ ಅವಧಿಯಲ್ಲಿ ಸುಮಾರು ೪೯೩ ಮಕ್ಕಳು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು, ಅದರಲ್ಲಿ ೧೯೯ ಮಕ್ಕಳ ಮಾಹಿತಿ ಈವರೆಗೂ ದೊರೆತಿಲ್ಲ ಎಂಬುದು ಆತಂಕಕಾರಿಯಾಗಿದೆ. ನಾಪತ್ತೆಯಾದ ಮಕ್ಕಳ ಪೈಕಿ ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚಾಗಿದ್ದು, ಮಕ್ಕಳಿಗೆ ನಮ್ಮ ರಾಜ್ಯದಲ್ಲಿ ಎಷ್ಟರ ಮಟ್ಟಿಗೆ ರಕ್ಷಣೆ ಇದೆ ಎಂಬುದಕ್ಕೆ ಸಾಕಷ್ಟು ಅನುಮಾನಗಳು ಉಂಟಾಗುವಂತೆ ಮಾಡಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವಂತಹ ಸಾಕಷ್ಟು ಬಾಲಮಂದಿರಗಳಿಂದ ಮಕ್ಕಳು ಕಾಂಪೌಂಡ್‌ಗಳನ್ನು ಜಿಗಿದು ಹೊರಗೆ ಓಡಿಹೋಗಿ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ದೊರೆತಿದ್ದು ಇದಕ್ಕೆ ಬಾಲಮಂದಿರದ ಅವ್ಯವಸ್ಥೆಯೇ ಪ್ರಮುಖ ಕಾರಣ ಎನ್ನಬಹುದಾಗಿದೆ. ಆದ್ದರಿಂದ ಈ ಕೂಡಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಎಚ್ಚೆತ್ತು ತನ್ನ ವ್ಯಾಪ್ತಿಯಲ್ಲಿರುವ ಎಲ್ಲ್ಲ ಬಾಲಮಂದಿರಗಳನ್ನೂ ಕೂಡಲೇ ಪರಿಶೀಲಿಸಿ ಅಭಿವೃದ್ಧಿಪಡಿಸಬೇಕು. ಹಾಗೂ ಮಕ್ಕಳಿಗೆ ಅಲ್ಲಿ ಪೂರಕವಾದ ವಾತಾವರಣವನ್ನು ಕಲ್ಪಿಸಬೇಕು. ಪೊಲೀಸ್ ಇಲಾಖೆಯೂ ಎಚ್ಚೆತ್ತು ಕಾಣೆಯಾಗಿರುವ ಮಕ್ಕಳನ್ನು ಪತ್ತೆ ಹಚ್ಚಿ ಅವರಿಗೆ ರಕ್ಷಣೆ ನೀಡಬೇಕು. ಈ ಬಗ್ಗೆ ಸರ್ಕಾರ ಕೂಡಲೇ ಕ್ರಮವಹಿಸಿ ಮಕ್ಕಳ ಹಿತಕಾಯಬೇಕು.

-ಬಿ.ಎಂ.ಜಗದೀಶ, ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು.


ಬೋಗಾದಿ ರೈಲ್ವೆ ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಿ

ಬೋಗಾದಿಯ ರೈಲ್ವೆ ಬಡಾವಣೆಯು ಸುಮಾರು ೪೦ ಎಕರೆಗಳಿಗಿಂತ ಹೆಚ್ಚಿನ ಪ್ರದೇಶದಲ್ಲಿ ವ್ಯಾಪಿಸಿಕೊಂಡಿದ್ದ್ದು, ಹಳೆಯ ಬಡಾವಣೆಗಳಲ್ಲಿ ಒಂದಾಗಿದೆ. ಆದರೆ ಈ ಬಡಾವಣೆಯಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟು ಹೋಗಿದ್ದು, ಸಾರ್ವಜನಿಕರು ಸಂಚರಿಸಲು ಪರದಾಡಬೇಕಾಗಿದೆ. ಅಲ್ಲದೆ ರಸ್ತೆಯ ಅಂಚಿನಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆಯೂ ಇಲ್ಲ. ಇದರಿಂದಾಗಿ ಚರಂಡಿಯಲ್ಲಿ ಹರಿಯಬೇಕಿದ್ದ ಕೊಳಚೆ ನೀರೆಲ್ಲ ರಸ್ತೆಯಲ್ಲಿ ಹರಿಯುತ್ತಿದೆ. ಪಾದಚಾರಿಗಳಿಗೂ ತೀರಾ ಸಮಸ್ಯೆಯಾಗಿದೆ. ಆದ್ದರಿಂದ ಈ ಭಾಗದ ರಸ್ತೆಗಳಿಗೆ ಕೂಡಲೇ ಡಾಂಬರೀಕರಣ ಮಾಡಿ ಉತ್ತಮ ಚರಂಡಿ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೆ, ಸಾರ್ವಜನಿಕರಿಗೆ ಕುಳಿತುಕೊಳ್ಳಲು ಹಾಗೂ ವಾಯು ವಿಹಾರಕ್ಕಾಗಿ ಈ ಬಡಾವಣೆಯಲ್ಲಿ ಒಂದು ಪಾರ್ಕ್ ನಿರ್ಮಾಣವಾಗಬೇಕು. ಈ ಬಡಾವಣೆಯಿಂದ ಮೈಸೂರು ನಗರ ಅಭಿವೃದ್ಧಿ ಪ್ರಾಽಕಾರಕ್ಕೆ ಲಕ್ಷಾಂತರ ರೂ. ಕಂದಾಯ ರೂಪದಲ್ಲಿ ಪ್ರತಿವರ್ಷ ಪಾವತಿಯಾಗುತ್ತಿದ್ದರೂ ಕೂಡ ಪ್ರಾಧಿಕಾರದಿಂದ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ಈ ಬಡಾವಣೆಯಲ್ಲಿ ನಡೆಯುತ್ತಿಲ್ಲ. ಈ ಸಂಬಂಧ ನಗರಾಭಿವೃದ್ಧಿ ಪ್ರಾಽಕಾರದ ನೂತನ ಅಧ್ಯಕ್ಷರು ಈ ಭಾಗದ ನಾಗರಿಕರ ಅನುಕೂಲಕ್ಕಾಗಿ ತಮ್ಮ ಆಡಳಿತಾವಽಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮುಂದಾಗಲಿ.

-ಡಾ.ಬಿ.ಕೃಷ್ಣರಾಜ್, ರೈಲ್ವೆ ಬಡಾವಣೆ, ಬೋಗಾದಿ, ಮೈಸೂರು.


ಕೊರೊನಾದಿಂದ ದೇಶವನ್ನು ರಕ್ಷಿಸೋಣ

ಕೊರೊನಾ ಸಂಕಷ್ಟದ ದಿನಗಳು ಮತ್ತೇ ಆರಂಭಗೊಳ್ಳುವ ಸೂಚನೆ ತಿಳಿದು ಎಲ್ಲರಿಗೂ ಆತಂಕ ಹೆಚ್ಚಾಗಿದೆ. ಕೊರೊನಾ ನಿಯಮಗಳ ಬಗ್ಗೆ ನಮಗೆ ಈಗಾಗಲೇ ಅರಿವಿದೆ. ಜಾರಿಯಾಗುವ ನಿಯಮಗಳನ್ನು ಪಾಲಿಸುವ ಮೂಲಕ ನಾವು ಕೊರೊನಾದಿಂದ ದೇಶವನ್ನು ರಕ್ಷಿಸಿಕೊಳ್ಳಬೇಕಾಗಿದೆ. ಸದ್ಯ ಲಸಿಕೆ ಬಗ್ಗೆ ಆರಂಭದಿಂದಲೂ ಜನರಿಗೆ ಸಾಕಷ್ಟು ಆತಂಕಗಳಿವೆ. ಅದರಲ್ಲಿಯೂ ಗ್ರಾಮಾಂತರ ಜನರೂ ಕೂಡ ಲಸಿಕೆಯೆಂದರೆ ಹಿಂದೆ ಸರಿಯುವುದುಂಟು. ಆದ್ದರಿಂದ ಆರೋಗ್ಯ ಇಲಾಖೆಯು ಲಸಿಕೆಯ ಬಗ್ಗೆ ಜನರಿಗೆ ನಂಬಿಕೆ ಬರುವಂತೆ ಮನದಟ್ಟು ಮಾಡಿಕೊಡಬೇಕು. ಪ್ರತಿಯೊಬ್ಬರಿಗೂ ಬೂಸ್ಟರ್ ಡೋಸ್ ಬಗ್ಗೆ ಮಾಹಿತಿ ನೀಡಬೇಕು ಜೊತೆಗೆ ಲಸಿಕೆ ತೆಗೆದುಕೊಳ್ಳುವಂತೆ ಪ್ರೇರೇಪಿಸಬೇಕು. ೬೦ ವರ್ಷ ಮೇಲ್ಟಟ್ಟ ಹಿರಿಯರು ಬೂಸ್ಟರ್ ಡೋಸ್ ಪಡೆಯದೇ ಹೋದರೆ ಈಗಾಗಲೇ ನಿಶ್ಯಕ್ತಿಯಿಂದ ಕೂಡಿದ ದೇಹವನ್ನು ಕೊರೊನಾ ಆಕ್ರಮಿಸಿಕೊಳ್ಳುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಬೂಸ್ಟರ್ ಡೋಸ್ ಪಡೆಯುವತ್ತ ಗಮನ ನೀಡಬೇಕು. ಈಗ ಲಸಿಕೆಯನ್ನು ಮೂಗಿನ ಮೂಲಕವು ನೀಡುತ್ತಿದ್ದು, ಇದರ ಬಗ್ಗೆ ಸರಿಯಾದ ಅರಿವು ಮೂಡಿಸಿದರೆ ಇದು ಸಫಲತೆ ಕಾಣಲಿದೆ.

ಕೊರೊನಾ ಎಂಬುದು ಒಂದು ಸಾಂಕ್ರಾಮಿಕ ರೋಗವಾದ್ದರಿಂದ ಕುಟುಂಬದ ರಕ್ಷಣೆ ಬಗ್ಗೆ ಎಚ್ಚರಿಕೆ ಅಗತ್ಯ. ಚುನಾಯಿತ ಪ್ರತಿನಿಽಗಳು ಕೊರೊನಾ ವಿಷಯದ ಬಗ್ಗೆ ರಾಜಕೀಯ ಮಾಡದೆ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ನಿರ್ಬಂಧಿಸುವ ಮೂಲಕ ದೇಶದ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕು.

-ಎಂ.ಎಸ್.ಉಷಾ ಪ್ರಕಾಶ್, ಬಿ.ಎಂ.ಕಾಲೋನಿ, ಮೈಸೂರು.

andolanait

Share
Published by
andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

32 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

38 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

47 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago