ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 31 ಡಿಸೆಂಬರ್‌ 2022

ಶಾಲಾ ಆವರಣದ ಸ್ವಚ್ಛತೆ ಯಾವಾಗ?

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣವು ಸತತ ಮಳೆ ಹಾಗೂ ಸಮೀಪದ ಎರಡು ಬೋರ್‌ವೆಲ್‌ಗಳ ಮೂಲಕ ಅಂತರ್ಜಲ ಉಕ್ಕಿ ಹರಿದ ಪರಿಣಾಮ ಮೈದಾನವೆಲ್ಲ ಕೆಸರು ಗದ್ದೆಯಂತಾಗಿದ್ದು, ಮಕ್ಕಳು ಓಡಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೆ ನೀರು ನಿಂತಲ್ಲೆ ನಿಂತು ದುರ್ವಾಸನೆ ಬರಲಾರಂಭಿಸಿ, ಸೊಳ್ಳೆಗಳ ಕಾಟ ಹೆಚ್ಚಾಗಿ ಮಕ್ಕಳಿಗೆ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿತ್ತು. ಗ್ರಾಮ ಪಂಚಾಯಿತಿಯವರು ಶಾಲಾ ಮೈದಾನವನ್ನು ಸ್ವಚ್ಛಗೊಳಿಸಿ ಸಮತಟ್ಟು ಮಾಡುವುದರ ಬಗ್ಗೆ ಯೋಜನೆ ಸಿದ್ಧವಾಗಿದೆ. ಮಳೆ ನಿಂತ ಕೂಡಲೇ ಕೆಲಸ ಆರಂಭಿಸುವ ಬಗ್ಗೆ ತಿಳಿಸಿದ್ದರು. ಆದರೆ ಈವರೆಗೂ ಅದು ಸಾಧ್ಯವಾಗಿಲ್ಲ. ಸದ್ಯ ಮೈದಾನ ಕೆರೆಯಂತಾಗಿರುವ ಪರಿಣಾಮ, ಶಾಲಾ ಕಟ್ಟಡದಲ್ಲಿಯೂ ನೀರು ಜಿನುಗುವಂತಾಗಿ ಕಟ್ಟಡದಲ್ಲಿ ಮಕ್ಕಳು ಆತಂಕದಲ್ಲಿ ಪಾಠ ಕೇಳಬೇಕಾದ ಅನಿವಾರ್ಯತೆ ಎದುರಾಗಿತ್ತು. ಈಗ ಮಳೆ ನಿಂತಿದ್ದು, ಮೈದಾನದ ದುರಸ್ತಿ ಕಾರ್ಯ ನಡೆಸುವುದಾಗಿ ಗ್ರಾಮ ಪಂಚಾಯಿತಿಯವರು ತಿಳಿಸಿದ್ದಾರೆ. ಅದಕ್ಕೂ ಮುಂಚೆ ಶಾಲೆಯ ಆವರಣದಲ್ಲಿ ಸ್ವಚ್ಛತೆ ಕಾಪಾಡಲು ಆದ್ಯತೆ ನೀಡಬೇಕಿದೆ. ಈಗ ರಾಜ್ಯದಲ್ಲಿ ಮತ್ತೆ ಕೊರೊನಾದ ಆತಂಕ ಎದುರಾಗಿದ್ದು, ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸರ್ಕಾರ ಆದೇಶಿಸಿದೆ. ಹಾಗಾಗಿ ಸಂಬಂಧಪಟ್ಟ ಅಽಕಾರಿಗಳು ಪ್ರೌಢಶಾಲೆಯ ಆವರಣವನ್ನು ಸ್ವಚ್ಛಗೊಳಿಸಿ, ಸಮತಟ್ಟು ಮಾಡಿ ಮೈದಾನ ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು.

-ರಾಜೇಶ್, ಅಂತರಸಂತೆ, ಎಚ್.ಡಿ.ಕೋಟೆ ತಾ.


ಸರ್ಕಾರ, ಜನಪ್ರತಿನಿಧಿಗಳ ಕಾರ್ಯಕ್ರಮಕ್ಕೂ ಮಾಸ್ಕ್‌ ಕಡ್ಡಾಯವಾಗಲಿ 

ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಹೊಸ ಅಧಿಸೂಚನೆಯನ್ನು 2022ರ ಕೊನೆ ದಿನಗಳಲ್ಲಿ ಜಾರಿಗೆ ತಂದಿದ್ದು, ಅದರಂತೆ ಸಾರ್ವಜನಿಕರ ಮನರಂಜನೆಯ ಸ್ಥಳ, ಚಿತ್ರಮಂದಿರ, ಮದುವೆಯ ಸಮಾರಂಭ, ಹೋಟೆಲ್ ಹಾಗೂ ಶಾಲಾ ಕಾಲೇಜುಗಳು ಸೇರಿದಂತೆ ಹೆಚ್ಚಿನ ಜನರು ಸೇರುವಂತಹ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಿದೆ. ಆದರೆ ಈ ನಿರ್ಬಂಧಗಳು ಕೇವಲ ಸಾರ್ವಜನಿಕರಿಗೆ ಮಾತ್ರ ಸೀಮಿತವೇ ಎಂಬ ಪ್ರಶ್ನೆ ಮೂಡುತ್ತಿದೆ. ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆ ಹತ್ತಿರವಾಗುತ್ತಿದೆ. ಆದ್ದರಿಂದ ಚುನಾವಣೆಯಲ್ಲಿ ಸ್ಪಧಿಸಲಿರುವ ಪ್ರತಿನಿಧಿಗಳು ಈಗಾಗಲೇ ತಯಾರಿ ಕಾರ್ಯ ಆರಂಭಿಸಿದ್ದು, ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು ಸಹಿತ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುವ ಜೊತೆಗೆ ಬೆಂಬಲಿಗರೊಂದಿಗೆ ಸಾಕಷ್ಟು ಸಭೆ, ಸಮಾರಂಭಗಳು, ಜನವಸತಿ ಸ್ಥಳಕ್ಕೆ ಭೇಟಿ ಮಾಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಆಯಾ ಕ್ಷೇತ್ರಗಳಲ್ಲಿ ಓಡಾಡುತ್ತಿದ್ದಾರೆ. ಈ ವೇಳೆ ಹೆಚ್ಚಿನ ಜನರು ಅವರನ್ನು ಭೇಟಿಯಾಗುತ್ತಿದ್ದು, ಮಾಸ್ಕ್ ಧರಿಸುತ್ತಿಲ್ಲ. ಹಾಗಾಗಿ ಸರ್ಕಾರ, ಜನಪ್ರತಿನಿಧಿಗಳು ಕಡ್ಡಾಯವಾಗಿ ಮಾಸ್ಕ್ ಬಳಸುವಂತೆ ಸಾರ್ವಜನಿಕರಿಗೆ ಮನವರಿಕೆ ಮಾಡಬೇಕಿದೆ. ತಪ್ಪಿದರೆ ಅಂತಹ ರಾಜಕೀಯ ಪ್ರೇರಿತ ಸಭೆಗಳಿಂದ ಕೊರೊನಾ ಹರಡುವ ಸಾಧ್ಯತೆ ಇದೆ. ಈ ಬಗ್ಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಂಡು ಎಲ್ಲರಿಗೂ ಮಾಸ್ಕ್ ಕಡ್ಡಾಯಗೊಳಿಸಲು ಗಮನಹರಿಸಬೇಕು.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago