ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 31 ಡಿಸೆಂಬರ್‌ 2022

ಶಾಲಾ ಆವರಣದ ಸ್ವಚ್ಛತೆ ಯಾವಾಗ?

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣವು ಸತತ ಮಳೆ ಹಾಗೂ ಸಮೀಪದ ಎರಡು ಬೋರ್‌ವೆಲ್‌ಗಳ ಮೂಲಕ ಅಂತರ್ಜಲ ಉಕ್ಕಿ ಹರಿದ ಪರಿಣಾಮ ಮೈದಾನವೆಲ್ಲ ಕೆಸರು ಗದ್ದೆಯಂತಾಗಿದ್ದು, ಮಕ್ಕಳು ಓಡಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೆ ನೀರು ನಿಂತಲ್ಲೆ ನಿಂತು ದುರ್ವಾಸನೆ ಬರಲಾರಂಭಿಸಿ, ಸೊಳ್ಳೆಗಳ ಕಾಟ ಹೆಚ್ಚಾಗಿ ಮಕ್ಕಳಿಗೆ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿತ್ತು. ಗ್ರಾಮ ಪಂಚಾಯಿತಿಯವರು ಶಾಲಾ ಮೈದಾನವನ್ನು ಸ್ವಚ್ಛಗೊಳಿಸಿ ಸಮತಟ್ಟು ಮಾಡುವುದರ ಬಗ್ಗೆ ಯೋಜನೆ ಸಿದ್ಧವಾಗಿದೆ. ಮಳೆ ನಿಂತ ಕೂಡಲೇ ಕೆಲಸ ಆರಂಭಿಸುವ ಬಗ್ಗೆ ತಿಳಿಸಿದ್ದರು. ಆದರೆ ಈವರೆಗೂ ಅದು ಸಾಧ್ಯವಾಗಿಲ್ಲ. ಸದ್ಯ ಮೈದಾನ ಕೆರೆಯಂತಾಗಿರುವ ಪರಿಣಾಮ, ಶಾಲಾ ಕಟ್ಟಡದಲ್ಲಿಯೂ ನೀರು ಜಿನುಗುವಂತಾಗಿ ಕಟ್ಟಡದಲ್ಲಿ ಮಕ್ಕಳು ಆತಂಕದಲ್ಲಿ ಪಾಠ ಕೇಳಬೇಕಾದ ಅನಿವಾರ್ಯತೆ ಎದುರಾಗಿತ್ತು. ಈಗ ಮಳೆ ನಿಂತಿದ್ದು, ಮೈದಾನದ ದುರಸ್ತಿ ಕಾರ್ಯ ನಡೆಸುವುದಾಗಿ ಗ್ರಾಮ ಪಂಚಾಯಿತಿಯವರು ತಿಳಿಸಿದ್ದಾರೆ. ಅದಕ್ಕೂ ಮುಂಚೆ ಶಾಲೆಯ ಆವರಣದಲ್ಲಿ ಸ್ವಚ್ಛತೆ ಕಾಪಾಡಲು ಆದ್ಯತೆ ನೀಡಬೇಕಿದೆ. ಈಗ ರಾಜ್ಯದಲ್ಲಿ ಮತ್ತೆ ಕೊರೊನಾದ ಆತಂಕ ಎದುರಾಗಿದ್ದು, ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸರ್ಕಾರ ಆದೇಶಿಸಿದೆ. ಹಾಗಾಗಿ ಸಂಬಂಧಪಟ್ಟ ಅಽಕಾರಿಗಳು ಪ್ರೌಢಶಾಲೆಯ ಆವರಣವನ್ನು ಸ್ವಚ್ಛಗೊಳಿಸಿ, ಸಮತಟ್ಟು ಮಾಡಿ ಮೈದಾನ ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು.

-ರಾಜೇಶ್, ಅಂತರಸಂತೆ, ಎಚ್.ಡಿ.ಕೋಟೆ ತಾ.


ಸರ್ಕಾರ, ಜನಪ್ರತಿನಿಧಿಗಳ ಕಾರ್ಯಕ್ರಮಕ್ಕೂ ಮಾಸ್ಕ್‌ ಕಡ್ಡಾಯವಾಗಲಿ 

ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಹೊಸ ಅಧಿಸೂಚನೆಯನ್ನು 2022ರ ಕೊನೆ ದಿನಗಳಲ್ಲಿ ಜಾರಿಗೆ ತಂದಿದ್ದು, ಅದರಂತೆ ಸಾರ್ವಜನಿಕರ ಮನರಂಜನೆಯ ಸ್ಥಳ, ಚಿತ್ರಮಂದಿರ, ಮದುವೆಯ ಸಮಾರಂಭ, ಹೋಟೆಲ್ ಹಾಗೂ ಶಾಲಾ ಕಾಲೇಜುಗಳು ಸೇರಿದಂತೆ ಹೆಚ್ಚಿನ ಜನರು ಸೇರುವಂತಹ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಿದೆ. ಆದರೆ ಈ ನಿರ್ಬಂಧಗಳು ಕೇವಲ ಸಾರ್ವಜನಿಕರಿಗೆ ಮಾತ್ರ ಸೀಮಿತವೇ ಎಂಬ ಪ್ರಶ್ನೆ ಮೂಡುತ್ತಿದೆ. ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆ ಹತ್ತಿರವಾಗುತ್ತಿದೆ. ಆದ್ದರಿಂದ ಚುನಾವಣೆಯಲ್ಲಿ ಸ್ಪಧಿಸಲಿರುವ ಪ್ರತಿನಿಧಿಗಳು ಈಗಾಗಲೇ ತಯಾರಿ ಕಾರ್ಯ ಆರಂಭಿಸಿದ್ದು, ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು ಸಹಿತ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುವ ಜೊತೆಗೆ ಬೆಂಬಲಿಗರೊಂದಿಗೆ ಸಾಕಷ್ಟು ಸಭೆ, ಸಮಾರಂಭಗಳು, ಜನವಸತಿ ಸ್ಥಳಕ್ಕೆ ಭೇಟಿ ಮಾಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಆಯಾ ಕ್ಷೇತ್ರಗಳಲ್ಲಿ ಓಡಾಡುತ್ತಿದ್ದಾರೆ. ಈ ವೇಳೆ ಹೆಚ್ಚಿನ ಜನರು ಅವರನ್ನು ಭೇಟಿಯಾಗುತ್ತಿದ್ದು, ಮಾಸ್ಕ್ ಧರಿಸುತ್ತಿಲ್ಲ. ಹಾಗಾಗಿ ಸರ್ಕಾರ, ಜನಪ್ರತಿನಿಧಿಗಳು ಕಡ್ಡಾಯವಾಗಿ ಮಾಸ್ಕ್ ಬಳಸುವಂತೆ ಸಾರ್ವಜನಿಕರಿಗೆ ಮನವರಿಕೆ ಮಾಡಬೇಕಿದೆ. ತಪ್ಪಿದರೆ ಅಂತಹ ರಾಜಕೀಯ ಪ್ರೇರಿತ ಸಭೆಗಳಿಂದ ಕೊರೊನಾ ಹರಡುವ ಸಾಧ್ಯತೆ ಇದೆ. ಈ ಬಗ್ಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಂಡು ಎಲ್ಲರಿಗೂ ಮಾಸ್ಕ್ ಕಡ್ಡಾಯಗೊಳಿಸಲು ಗಮನಹರಿಸಬೇಕು.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

andolanait

Recent Posts

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

2 hours ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

2 hours ago

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

2 hours ago

ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣ

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ:…

2 hours ago

ಸಂಪುಟ ವಿಸ್ತರಣೆ: ಮೈಸೂರು ಭಾಗದ ‘ಕೈ’ಶಾಸಕರ ಕಸರತ್ತು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…

2 hours ago

‘ಪ್ರಾಮಾಣಿಕ ಸೇವೆ; ಪಾರದರ್ಶಕ ಆಡಳಿತಕ್ಕೆ ಬದ್ಧʼ

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…

2 hours ago