ಎಡಿಟೋರಿಯಲ್

ಆಂದೋಲನ ವಿ4 : ವಿತ್ತ ವಿಜ್ಞಾನ ವಿಶೇಷ ವಿಹಾರ

ಇಂಧನ ಬೆಲೆ ಇಳಿಕೆ ಇಲ್ಲ

ಕಳೆದ ವರ್ಷ ಜೂನ್ ತಿಂಗಳಲ್ಲಿ ೧೧೬ ಡಾಲರ್ ಗಳಷ್ಟಿದ್ದ ಕಚ್ಚಾ ತೈಲ ದರವು ಈಗ ಪ್ರತಿ ಬ್ಯಾರೆಲ್‌ಗೆ ೭೮ ರಿಂದ ೮೫ ಡಾಲರ್‌ಗೆ ಇಳಿದಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಈಗ ಪ್ರತಿ ಲೀಟರ್ ಪೆಟ್ರೋಲ್ ನಿಂದ ೧೦ ರೂಪಾಯಿಗಳಷ್ಟು ಲಾಭ ಪಡೆಯುತ್ತಿವೆ. ಇಷ್ಟಾದರೂ ಇಂಧನ ಬೆಲೆ ಇಳಿಕೆಯಾಗಿಲ್ಲ. ಲಭ್ಯ ಮಾಹಿತಿ ಪ್ರಕಾರ ತೈಲ ಸಂಸ್ಥೆಗಳಿಗೆ ಹಿಂದಿನ ನಷ್ಟವನ್ನು ತುಂಬಿಕೊಳ್ಳಲು ಸರಕಾರ ಅವಕಾಶ ನೀಡಿದೆ. ಕಳೆದ ಏಪ್ರಿಲ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಮೂರು ಸರಕಾರಿ ತೈಲ ಸಂಸ್ಥೆಗಳು ೨೧,೨೦೧ ಕೋಟಿ ರೂಪಾಯಿ ನಷ್ಟ ಅನುಭವಿಸಿವೆ. ಈ ಕಾರಣದಿಂದ ಸದ್ಯಕ್ಕೆ ಇಂಧನ ಬೆಲೆ ಇಳಿಕೆ ಸಾಧ್ಯತೆ ಇಲ್ಲ ಎನ್ನಲಾಗಿದೆ.


ಪ್ರೀಮಿಯಂ ಸ್ಮಾರ್ಟ್-ನ್ ಬಿಡುಗಡೆ

ಹೊಸ ಮಾದರಿ ಸ್ಮಾರ್ಟ್‌ಫೋನ್ ತಯಾರಿಕೆಯಲ್ಲಿ ಭರವಸೆ ಮೂಡಿಸಿರುವ ‘ಟೆಕ್ನೋ’ ಕಂಪೆನಿಯು ಭಾರತದಲ್ಲಿ ತನ್ನ ಮೊತ್ತ ಮೊದಲ ಪ್ರೀಮಿಯಂ PHANTOM X2 ಸ್ಮಾರ್ಟ್‌ಪೋನ್ ಬಿಡು ಗಡೆಗೊಳಿಸಿ ೩೯,೯೯೯ ರೂ. ದರ ನಿಗದಿ ಮಾಡಿದೆ. ಜ.೨ರಿಂದ ಪ್ರಿ ಬುಕಿಂಗ್ ಆರಂಭವಾಗಿದ್ದು, ಜ.೯ರಿಂದ ಮಾರಾಟಕ್ಕೆ ಲಭ್ಯವಾಗ ಲಿದೆ ಎಂದು ಕಂಪೆನಿ ತಿಳಿಸಿದೆ. ೫ಜಿ ಫೋನ್ ಇದಾಗಿದ್ದು, ಡ್ಯುಯಲ್ ಸಿಮ್, 4nm Dimensity ೯೦೦೦ ಪ್ರೊಸೆಸರ್, ೬೪ ಎಂಪಿ ಕ್ಯಾಮೆರಾ, ಅಲ್ಟ್ರಾ ಕ್ಲಿಯರ್ ನೈಟ್ ಕ್ಯಾಮೆರಾ, ಇಮೇಜ್ ಸ್ಟೆಬಿಲೈಸೇಷನ್, ಡ್ಯುಯಲ್ ವಿಡಿಯೋ, ೪ಕೆ ವಿಡಿಯೋ, ೬.೮ ಇಂಚಿನ ಸ್ಕ್ರೀನ್, ಉತ್ತಮ ಬ್ಯಾಟರಿ ಸಾಮರ್ಥ್ಯ ಹೊಂದಿದೆ.


ಸೂರ್ಯ, ಚಂದ್ರನತ್ತ ನೌಕೆ ರವಾನೆ ಯೋಜನೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು(ಇಸ್ರೊ) ೨೦೨೩ರಲ್ಲಿ ಹಲವು ವೈಜ್ಞಾನಿಕ ಆವಿಷ್ಕಾರಗಳನ್ನು ನಡೆಸುವ ಬಗ್ಗೆ ಗಮನ ಹರಿಸಲಿದೆ. ಪರೀಕ್ಷಾರ್ಥವಾಗಿ ಹಲವು ಗಗನಯಾನ ಸಂಬಂಽಸಿದ ಯೋಜನೆ ಸಂಬಂಧ ಕಾರ್ಯಾಚರಣೆಗಳನ್ನು ನಡೆಸಲು ಇಸ್ರೊ ಸಂಸ್ಥೆಯು ನಿರ್ಧರಿಸಿದ್ದು, ಪೂರಕವಾಗಿ ೨೦೨೩ರಲ್ಲಿ ಸೂರ್ಯನಲ್ಲಿಗೆ ಒಂದು ಉಪಗ್ರಹ ಹಾಗೂ ಚಂದ್ರನಲ್ಲಿಗೆ ನೌಕೆ ರವಾನಿಸುವ ಯೋಜನೆಯನ್ನು ಸಂಸ್ಥೆ ಹೊಂದಿದೆ. ಭಾರತದ ಹಲವು ನವೋದ್ಯಮಗಳೂ ಬಾಹ್ಯಾಕಾಶದಲ್ಲಿ ಅನೇಕ ಹೊಸ ಆವಿಷ್ಕಾರಗಳನ್ನು ನಡೆಸುವ ಬಗ್ಗೆ ಚಿಂತನೆಯನ್ನು ನಡೆಸುತ್ತಿದ್ದು, ೨೦೨೩ಕ್ಕೆ ಕಾರ್ಯರೂಪಕ್ಕೆ ತರಲು ಚಿಂತಿಸುತ್ತಿವೆ.


ಕಾವೇರಿ ನದಿ ದಂಡೆಯ ಮೇಲಿನ ಜಪದ ಕಟ್ಟೆ

ಕಾವೇರಿ ನದಿಯ ದಂಡೆಯ ಮೇಲಿನ ನಿಶ್ಶಬ್ದದ ಪರಿಸರದ ನಡುವೆ ರಮಣೀಯವಾಗಿರುವ ಒಂದು ಸುಂದರ ತಾಣ ಜಪದಕಟ್ಟೆ ಎಂಬ ಸ್ಥಳದಲ್ಲಿ ಜಪೇಶ್ವರ ಎಂಬ ಹೆಸರಿನಲ್ಲಿ ಶಿವನು ನೆಲೆಸಿದ್ದಾನೆ ಎಂಬ ನಂಬಿಕೆ ಇದೆ. ಅನೇಕ ಋಷಿ ಮುನಿಗಳು ಇಲ್ಲಿ ತಪಸ್ಸನ್ನು ಆಚರಿಸುತ್ತಿದ್ದರಿಂದ ಈ ಕ್ಷೇತ್ರಕ್ಕೆ ಜಪದಕಟ್ಟೆ ಎಂಬ ಹೆಸರು ಬಂದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನಲ್ಲಿರುವ ಕ್ಷೇತ್ರವು ಮೈಸೂರಿನಿಂದ ೭೪ ಕಿ.ಮೀ., ಕೆ.ಆರ್.ನಗರದಿಂದ ೩೫ ಕಿ.ಮೀ. ಮತ್ತು ಸಾಲಿಗ್ರಾಮದಿಂದ ೧೦ ಕಿ.ಮೀ. ದೂರದಲ್ಲಿದೆ. ಹೆಸರೇ ಸೂಚಿಸುವಂತೆ ಶಾಂತಿ ಮತ್ತು ಮನಸ್ಸಿಗೆ ನೆಮ್ಮದಿಯ ವಾತಾವರಣವನ್ನು ನೀಡುವ ಕ್ಷೇತ್ರವಾಗಿ ಪ್ರಕೃತಿಯ ಮಡಿಲಲ್ಲಿ ಅರಳಿ ನಿಂತಿದೆ.

andolanait

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

7 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

7 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

7 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

7 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

7 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

8 hours ago