ಇಂಧನ ಬೆಲೆ ಇಳಿಕೆ ಇಲ್ಲ
ಕಳೆದ ವರ್ಷ ಜೂನ್ ತಿಂಗಳಲ್ಲಿ ೧೧೬ ಡಾಲರ್ ಗಳಷ್ಟಿದ್ದ ಕಚ್ಚಾ ತೈಲ ದರವು ಈಗ ಪ್ರತಿ ಬ್ಯಾರೆಲ್ಗೆ ೭೮ ರಿಂದ ೮೫ ಡಾಲರ್ಗೆ ಇಳಿದಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಈಗ ಪ್ರತಿ ಲೀಟರ್ ಪೆಟ್ರೋಲ್ ನಿಂದ ೧೦ ರೂಪಾಯಿಗಳಷ್ಟು ಲಾಭ ಪಡೆಯುತ್ತಿವೆ. ಇಷ್ಟಾದರೂ ಇಂಧನ ಬೆಲೆ ಇಳಿಕೆಯಾಗಿಲ್ಲ. ಲಭ್ಯ ಮಾಹಿತಿ ಪ್ರಕಾರ ತೈಲ ಸಂಸ್ಥೆಗಳಿಗೆ ಹಿಂದಿನ ನಷ್ಟವನ್ನು ತುಂಬಿಕೊಳ್ಳಲು ಸರಕಾರ ಅವಕಾಶ ನೀಡಿದೆ. ಕಳೆದ ಏಪ್ರಿಲ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಮೂರು ಸರಕಾರಿ ತೈಲ ಸಂಸ್ಥೆಗಳು ೨೧,೨೦೧ ಕೋಟಿ ರೂಪಾಯಿ ನಷ್ಟ ಅನುಭವಿಸಿವೆ. ಈ ಕಾರಣದಿಂದ ಸದ್ಯಕ್ಕೆ ಇಂಧನ ಬೆಲೆ ಇಳಿಕೆ ಸಾಧ್ಯತೆ ಇಲ್ಲ ಎನ್ನಲಾಗಿದೆ.
ಪ್ರೀಮಿಯಂ ಸ್ಮಾರ್ಟ್-ನ್ ಬಿಡುಗಡೆ
ಹೊಸ ಮಾದರಿ ಸ್ಮಾರ್ಟ್ಫೋನ್ ತಯಾರಿಕೆಯಲ್ಲಿ ಭರವಸೆ ಮೂಡಿಸಿರುವ ‘ಟೆಕ್ನೋ’ ಕಂಪೆನಿಯು ಭಾರತದಲ್ಲಿ ತನ್ನ ಮೊತ್ತ ಮೊದಲ ಪ್ರೀಮಿಯಂ PHANTOM X2 ಸ್ಮಾರ್ಟ್ಪೋನ್ ಬಿಡು ಗಡೆಗೊಳಿಸಿ ೩೯,೯೯೯ ರೂ. ದರ ನಿಗದಿ ಮಾಡಿದೆ. ಜ.೨ರಿಂದ ಪ್ರಿ ಬುಕಿಂಗ್ ಆರಂಭವಾಗಿದ್ದು, ಜ.೯ರಿಂದ ಮಾರಾಟಕ್ಕೆ ಲಭ್ಯವಾಗ ಲಿದೆ ಎಂದು ಕಂಪೆನಿ ತಿಳಿಸಿದೆ. ೫ಜಿ ಫೋನ್ ಇದಾಗಿದ್ದು, ಡ್ಯುಯಲ್ ಸಿಮ್, 4nm Dimensity ೯೦೦೦ ಪ್ರೊಸೆಸರ್, ೬೪ ಎಂಪಿ ಕ್ಯಾಮೆರಾ, ಅಲ್ಟ್ರಾ ಕ್ಲಿಯರ್ ನೈಟ್ ಕ್ಯಾಮೆರಾ, ಇಮೇಜ್ ಸ್ಟೆಬಿಲೈಸೇಷನ್, ಡ್ಯುಯಲ್ ವಿಡಿಯೋ, ೪ಕೆ ವಿಡಿಯೋ, ೬.೮ ಇಂಚಿನ ಸ್ಕ್ರೀನ್, ಉತ್ತಮ ಬ್ಯಾಟರಿ ಸಾಮರ್ಥ್ಯ ಹೊಂದಿದೆ.
ಸೂರ್ಯ, ಚಂದ್ರನತ್ತ ನೌಕೆ ರವಾನೆ ಯೋಜನೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು(ಇಸ್ರೊ) ೨೦೨೩ರಲ್ಲಿ ಹಲವು ವೈಜ್ಞಾನಿಕ ಆವಿಷ್ಕಾರಗಳನ್ನು ನಡೆಸುವ ಬಗ್ಗೆ ಗಮನ ಹರಿಸಲಿದೆ. ಪರೀಕ್ಷಾರ್ಥವಾಗಿ ಹಲವು ಗಗನಯಾನ ಸಂಬಂಽಸಿದ ಯೋಜನೆ ಸಂಬಂಧ ಕಾರ್ಯಾಚರಣೆಗಳನ್ನು ನಡೆಸಲು ಇಸ್ರೊ ಸಂಸ್ಥೆಯು ನಿರ್ಧರಿಸಿದ್ದು, ಪೂರಕವಾಗಿ ೨೦೨೩ರಲ್ಲಿ ಸೂರ್ಯನಲ್ಲಿಗೆ ಒಂದು ಉಪಗ್ರಹ ಹಾಗೂ ಚಂದ್ರನಲ್ಲಿಗೆ ನೌಕೆ ರವಾನಿಸುವ ಯೋಜನೆಯನ್ನು ಸಂಸ್ಥೆ ಹೊಂದಿದೆ. ಭಾರತದ ಹಲವು ನವೋದ್ಯಮಗಳೂ ಬಾಹ್ಯಾಕಾಶದಲ್ಲಿ ಅನೇಕ ಹೊಸ ಆವಿಷ್ಕಾರಗಳನ್ನು ನಡೆಸುವ ಬಗ್ಗೆ ಚಿಂತನೆಯನ್ನು ನಡೆಸುತ್ತಿದ್ದು, ೨೦೨೩ಕ್ಕೆ ಕಾರ್ಯರೂಪಕ್ಕೆ ತರಲು ಚಿಂತಿಸುತ್ತಿವೆ.
ಕಾವೇರಿ ನದಿ ದಂಡೆಯ ಮೇಲಿನ ಜಪದ ಕಟ್ಟೆ
ಕಾವೇರಿ ನದಿಯ ದಂಡೆಯ ಮೇಲಿನ ನಿಶ್ಶಬ್ದದ ಪರಿಸರದ ನಡುವೆ ರಮಣೀಯವಾಗಿರುವ ಒಂದು ಸುಂದರ ತಾಣ ಜಪದಕಟ್ಟೆ ಎಂಬ ಸ್ಥಳದಲ್ಲಿ ಜಪೇಶ್ವರ ಎಂಬ ಹೆಸರಿನಲ್ಲಿ ಶಿವನು ನೆಲೆಸಿದ್ದಾನೆ ಎಂಬ ನಂಬಿಕೆ ಇದೆ. ಅನೇಕ ಋಷಿ ಮುನಿಗಳು ಇಲ್ಲಿ ತಪಸ್ಸನ್ನು ಆಚರಿಸುತ್ತಿದ್ದರಿಂದ ಈ ಕ್ಷೇತ್ರಕ್ಕೆ ಜಪದಕಟ್ಟೆ ಎಂಬ ಹೆಸರು ಬಂದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನಲ್ಲಿರುವ ಕ್ಷೇತ್ರವು ಮೈಸೂರಿನಿಂದ ೭೪ ಕಿ.ಮೀ., ಕೆ.ಆರ್.ನಗರದಿಂದ ೩೫ ಕಿ.ಮೀ. ಮತ್ತು ಸಾಲಿಗ್ರಾಮದಿಂದ ೧೦ ಕಿ.ಮೀ. ದೂರದಲ್ಲಿದೆ. ಹೆಸರೇ ಸೂಚಿಸುವಂತೆ ಶಾಂತಿ ಮತ್ತು ಮನಸ್ಸಿಗೆ ನೆಮ್ಮದಿಯ ವಾತಾವರಣವನ್ನು ನೀಡುವ ಕ್ಷೇತ್ರವಾಗಿ ಪ್ರಕೃತಿಯ ಮಡಿಲಲ್ಲಿ ಅರಳಿ ನಿಂತಿದೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…