ಎಡಿಟೋರಿಯಲ್

ಆಂದೋಲನ ವಿ4 : ವಿತ್ತ ವಿಜ್ಞಾನ ವಿಶೇಷ ವಿಹಾರ

ಇಂಧನ ಬೆಲೆ ಇಳಿಕೆ ಇಲ್ಲ

ಕಳೆದ ವರ್ಷ ಜೂನ್ ತಿಂಗಳಲ್ಲಿ ೧೧೬ ಡಾಲರ್ ಗಳಷ್ಟಿದ್ದ ಕಚ್ಚಾ ತೈಲ ದರವು ಈಗ ಪ್ರತಿ ಬ್ಯಾರೆಲ್‌ಗೆ ೭೮ ರಿಂದ ೮೫ ಡಾಲರ್‌ಗೆ ಇಳಿದಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಈಗ ಪ್ರತಿ ಲೀಟರ್ ಪೆಟ್ರೋಲ್ ನಿಂದ ೧೦ ರೂಪಾಯಿಗಳಷ್ಟು ಲಾಭ ಪಡೆಯುತ್ತಿವೆ. ಇಷ್ಟಾದರೂ ಇಂಧನ ಬೆಲೆ ಇಳಿಕೆಯಾಗಿಲ್ಲ. ಲಭ್ಯ ಮಾಹಿತಿ ಪ್ರಕಾರ ತೈಲ ಸಂಸ್ಥೆಗಳಿಗೆ ಹಿಂದಿನ ನಷ್ಟವನ್ನು ತುಂಬಿಕೊಳ್ಳಲು ಸರಕಾರ ಅವಕಾಶ ನೀಡಿದೆ. ಕಳೆದ ಏಪ್ರಿಲ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಮೂರು ಸರಕಾರಿ ತೈಲ ಸಂಸ್ಥೆಗಳು ೨೧,೨೦೧ ಕೋಟಿ ರೂಪಾಯಿ ನಷ್ಟ ಅನುಭವಿಸಿವೆ. ಈ ಕಾರಣದಿಂದ ಸದ್ಯಕ್ಕೆ ಇಂಧನ ಬೆಲೆ ಇಳಿಕೆ ಸಾಧ್ಯತೆ ಇಲ್ಲ ಎನ್ನಲಾಗಿದೆ.


ಪ್ರೀಮಿಯಂ ಸ್ಮಾರ್ಟ್-ನ್ ಬಿಡುಗಡೆ

ಹೊಸ ಮಾದರಿ ಸ್ಮಾರ್ಟ್‌ಫೋನ್ ತಯಾರಿಕೆಯಲ್ಲಿ ಭರವಸೆ ಮೂಡಿಸಿರುವ ‘ಟೆಕ್ನೋ’ ಕಂಪೆನಿಯು ಭಾರತದಲ್ಲಿ ತನ್ನ ಮೊತ್ತ ಮೊದಲ ಪ್ರೀಮಿಯಂ PHANTOM X2 ಸ್ಮಾರ್ಟ್‌ಪೋನ್ ಬಿಡು ಗಡೆಗೊಳಿಸಿ ೩೯,೯೯೯ ರೂ. ದರ ನಿಗದಿ ಮಾಡಿದೆ. ಜ.೨ರಿಂದ ಪ್ರಿ ಬುಕಿಂಗ್ ಆರಂಭವಾಗಿದ್ದು, ಜ.೯ರಿಂದ ಮಾರಾಟಕ್ಕೆ ಲಭ್ಯವಾಗ ಲಿದೆ ಎಂದು ಕಂಪೆನಿ ತಿಳಿಸಿದೆ. ೫ಜಿ ಫೋನ್ ಇದಾಗಿದ್ದು, ಡ್ಯುಯಲ್ ಸಿಮ್, 4nm Dimensity ೯೦೦೦ ಪ್ರೊಸೆಸರ್, ೬೪ ಎಂಪಿ ಕ್ಯಾಮೆರಾ, ಅಲ್ಟ್ರಾ ಕ್ಲಿಯರ್ ನೈಟ್ ಕ್ಯಾಮೆರಾ, ಇಮೇಜ್ ಸ್ಟೆಬಿಲೈಸೇಷನ್, ಡ್ಯುಯಲ್ ವಿಡಿಯೋ, ೪ಕೆ ವಿಡಿಯೋ, ೬.೮ ಇಂಚಿನ ಸ್ಕ್ರೀನ್, ಉತ್ತಮ ಬ್ಯಾಟರಿ ಸಾಮರ್ಥ್ಯ ಹೊಂದಿದೆ.


ಸೂರ್ಯ, ಚಂದ್ರನತ್ತ ನೌಕೆ ರವಾನೆ ಯೋಜನೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು(ಇಸ್ರೊ) ೨೦೨೩ರಲ್ಲಿ ಹಲವು ವೈಜ್ಞಾನಿಕ ಆವಿಷ್ಕಾರಗಳನ್ನು ನಡೆಸುವ ಬಗ್ಗೆ ಗಮನ ಹರಿಸಲಿದೆ. ಪರೀಕ್ಷಾರ್ಥವಾಗಿ ಹಲವು ಗಗನಯಾನ ಸಂಬಂಽಸಿದ ಯೋಜನೆ ಸಂಬಂಧ ಕಾರ್ಯಾಚರಣೆಗಳನ್ನು ನಡೆಸಲು ಇಸ್ರೊ ಸಂಸ್ಥೆಯು ನಿರ್ಧರಿಸಿದ್ದು, ಪೂರಕವಾಗಿ ೨೦೨೩ರಲ್ಲಿ ಸೂರ್ಯನಲ್ಲಿಗೆ ಒಂದು ಉಪಗ್ರಹ ಹಾಗೂ ಚಂದ್ರನಲ್ಲಿಗೆ ನೌಕೆ ರವಾನಿಸುವ ಯೋಜನೆಯನ್ನು ಸಂಸ್ಥೆ ಹೊಂದಿದೆ. ಭಾರತದ ಹಲವು ನವೋದ್ಯಮಗಳೂ ಬಾಹ್ಯಾಕಾಶದಲ್ಲಿ ಅನೇಕ ಹೊಸ ಆವಿಷ್ಕಾರಗಳನ್ನು ನಡೆಸುವ ಬಗ್ಗೆ ಚಿಂತನೆಯನ್ನು ನಡೆಸುತ್ತಿದ್ದು, ೨೦೨೩ಕ್ಕೆ ಕಾರ್ಯರೂಪಕ್ಕೆ ತರಲು ಚಿಂತಿಸುತ್ತಿವೆ.


ಕಾವೇರಿ ನದಿ ದಂಡೆಯ ಮೇಲಿನ ಜಪದ ಕಟ್ಟೆ

ಕಾವೇರಿ ನದಿಯ ದಂಡೆಯ ಮೇಲಿನ ನಿಶ್ಶಬ್ದದ ಪರಿಸರದ ನಡುವೆ ರಮಣೀಯವಾಗಿರುವ ಒಂದು ಸುಂದರ ತಾಣ ಜಪದಕಟ್ಟೆ ಎಂಬ ಸ್ಥಳದಲ್ಲಿ ಜಪೇಶ್ವರ ಎಂಬ ಹೆಸರಿನಲ್ಲಿ ಶಿವನು ನೆಲೆಸಿದ್ದಾನೆ ಎಂಬ ನಂಬಿಕೆ ಇದೆ. ಅನೇಕ ಋಷಿ ಮುನಿಗಳು ಇಲ್ಲಿ ತಪಸ್ಸನ್ನು ಆಚರಿಸುತ್ತಿದ್ದರಿಂದ ಈ ಕ್ಷೇತ್ರಕ್ಕೆ ಜಪದಕಟ್ಟೆ ಎಂಬ ಹೆಸರು ಬಂದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನಲ್ಲಿರುವ ಕ್ಷೇತ್ರವು ಮೈಸೂರಿನಿಂದ ೭೪ ಕಿ.ಮೀ., ಕೆ.ಆರ್.ನಗರದಿಂದ ೩೫ ಕಿ.ಮೀ. ಮತ್ತು ಸಾಲಿಗ್ರಾಮದಿಂದ ೧೦ ಕಿ.ಮೀ. ದೂರದಲ್ಲಿದೆ. ಹೆಸರೇ ಸೂಚಿಸುವಂತೆ ಶಾಂತಿ ಮತ್ತು ಮನಸ್ಸಿಗೆ ನೆಮ್ಮದಿಯ ವಾತಾವರಣವನ್ನು ನೀಡುವ ಕ್ಷೇತ್ರವಾಗಿ ಪ್ರಕೃತಿಯ ಮಡಿಲಲ್ಲಿ ಅರಳಿ ನಿಂತಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

27 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

28 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

30 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

31 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

36 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

42 mins ago