ಎಡಿಟೋರಿಯಲ್

ಆಂದೋಲನ ವಿ4 : ವಿತ್ತ ವಿಜ್ಞಾನ ವಿಶೇಷ ವಿಹಾರ

ಇಂಧನ ಬೆಲೆ ಇಳಿಕೆ ಇಲ್ಲ

ಕಳೆದ ವರ್ಷ ಜೂನ್ ತಿಂಗಳಲ್ಲಿ ೧೧೬ ಡಾಲರ್ ಗಳಷ್ಟಿದ್ದ ಕಚ್ಚಾ ತೈಲ ದರವು ಈಗ ಪ್ರತಿ ಬ್ಯಾರೆಲ್‌ಗೆ ೭೮ ರಿಂದ ೮೫ ಡಾಲರ್‌ಗೆ ಇಳಿದಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಈಗ ಪ್ರತಿ ಲೀಟರ್ ಪೆಟ್ರೋಲ್ ನಿಂದ ೧೦ ರೂಪಾಯಿಗಳಷ್ಟು ಲಾಭ ಪಡೆಯುತ್ತಿವೆ. ಇಷ್ಟಾದರೂ ಇಂಧನ ಬೆಲೆ ಇಳಿಕೆಯಾಗಿಲ್ಲ. ಲಭ್ಯ ಮಾಹಿತಿ ಪ್ರಕಾರ ತೈಲ ಸಂಸ್ಥೆಗಳಿಗೆ ಹಿಂದಿನ ನಷ್ಟವನ್ನು ತುಂಬಿಕೊಳ್ಳಲು ಸರಕಾರ ಅವಕಾಶ ನೀಡಿದೆ. ಕಳೆದ ಏಪ್ರಿಲ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಮೂರು ಸರಕಾರಿ ತೈಲ ಸಂಸ್ಥೆಗಳು ೨೧,೨೦೧ ಕೋಟಿ ರೂಪಾಯಿ ನಷ್ಟ ಅನುಭವಿಸಿವೆ. ಈ ಕಾರಣದಿಂದ ಸದ್ಯಕ್ಕೆ ಇಂಧನ ಬೆಲೆ ಇಳಿಕೆ ಸಾಧ್ಯತೆ ಇಲ್ಲ ಎನ್ನಲಾಗಿದೆ.


ಪ್ರೀಮಿಯಂ ಸ್ಮಾರ್ಟ್-ನ್ ಬಿಡುಗಡೆ

ಹೊಸ ಮಾದರಿ ಸ್ಮಾರ್ಟ್‌ಫೋನ್ ತಯಾರಿಕೆಯಲ್ಲಿ ಭರವಸೆ ಮೂಡಿಸಿರುವ ‘ಟೆಕ್ನೋ’ ಕಂಪೆನಿಯು ಭಾರತದಲ್ಲಿ ತನ್ನ ಮೊತ್ತ ಮೊದಲ ಪ್ರೀಮಿಯಂ PHANTOM X2 ಸ್ಮಾರ್ಟ್‌ಪೋನ್ ಬಿಡು ಗಡೆಗೊಳಿಸಿ ೩೯,೯೯೯ ರೂ. ದರ ನಿಗದಿ ಮಾಡಿದೆ. ಜ.೨ರಿಂದ ಪ್ರಿ ಬುಕಿಂಗ್ ಆರಂಭವಾಗಿದ್ದು, ಜ.೯ರಿಂದ ಮಾರಾಟಕ್ಕೆ ಲಭ್ಯವಾಗ ಲಿದೆ ಎಂದು ಕಂಪೆನಿ ತಿಳಿಸಿದೆ. ೫ಜಿ ಫೋನ್ ಇದಾಗಿದ್ದು, ಡ್ಯುಯಲ್ ಸಿಮ್, 4nm Dimensity ೯೦೦೦ ಪ್ರೊಸೆಸರ್, ೬೪ ಎಂಪಿ ಕ್ಯಾಮೆರಾ, ಅಲ್ಟ್ರಾ ಕ್ಲಿಯರ್ ನೈಟ್ ಕ್ಯಾಮೆರಾ, ಇಮೇಜ್ ಸ್ಟೆಬಿಲೈಸೇಷನ್, ಡ್ಯುಯಲ್ ವಿಡಿಯೋ, ೪ಕೆ ವಿಡಿಯೋ, ೬.೮ ಇಂಚಿನ ಸ್ಕ್ರೀನ್, ಉತ್ತಮ ಬ್ಯಾಟರಿ ಸಾಮರ್ಥ್ಯ ಹೊಂದಿದೆ.


ಸೂರ್ಯ, ಚಂದ್ರನತ್ತ ನೌಕೆ ರವಾನೆ ಯೋಜನೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು(ಇಸ್ರೊ) ೨೦೨೩ರಲ್ಲಿ ಹಲವು ವೈಜ್ಞಾನಿಕ ಆವಿಷ್ಕಾರಗಳನ್ನು ನಡೆಸುವ ಬಗ್ಗೆ ಗಮನ ಹರಿಸಲಿದೆ. ಪರೀಕ್ಷಾರ್ಥವಾಗಿ ಹಲವು ಗಗನಯಾನ ಸಂಬಂಽಸಿದ ಯೋಜನೆ ಸಂಬಂಧ ಕಾರ್ಯಾಚರಣೆಗಳನ್ನು ನಡೆಸಲು ಇಸ್ರೊ ಸಂಸ್ಥೆಯು ನಿರ್ಧರಿಸಿದ್ದು, ಪೂರಕವಾಗಿ ೨೦೨೩ರಲ್ಲಿ ಸೂರ್ಯನಲ್ಲಿಗೆ ಒಂದು ಉಪಗ್ರಹ ಹಾಗೂ ಚಂದ್ರನಲ್ಲಿಗೆ ನೌಕೆ ರವಾನಿಸುವ ಯೋಜನೆಯನ್ನು ಸಂಸ್ಥೆ ಹೊಂದಿದೆ. ಭಾರತದ ಹಲವು ನವೋದ್ಯಮಗಳೂ ಬಾಹ್ಯಾಕಾಶದಲ್ಲಿ ಅನೇಕ ಹೊಸ ಆವಿಷ್ಕಾರಗಳನ್ನು ನಡೆಸುವ ಬಗ್ಗೆ ಚಿಂತನೆಯನ್ನು ನಡೆಸುತ್ತಿದ್ದು, ೨೦೨೩ಕ್ಕೆ ಕಾರ್ಯರೂಪಕ್ಕೆ ತರಲು ಚಿಂತಿಸುತ್ತಿವೆ.


ಕಾವೇರಿ ನದಿ ದಂಡೆಯ ಮೇಲಿನ ಜಪದ ಕಟ್ಟೆ

ಕಾವೇರಿ ನದಿಯ ದಂಡೆಯ ಮೇಲಿನ ನಿಶ್ಶಬ್ದದ ಪರಿಸರದ ನಡುವೆ ರಮಣೀಯವಾಗಿರುವ ಒಂದು ಸುಂದರ ತಾಣ ಜಪದಕಟ್ಟೆ ಎಂಬ ಸ್ಥಳದಲ್ಲಿ ಜಪೇಶ್ವರ ಎಂಬ ಹೆಸರಿನಲ್ಲಿ ಶಿವನು ನೆಲೆಸಿದ್ದಾನೆ ಎಂಬ ನಂಬಿಕೆ ಇದೆ. ಅನೇಕ ಋಷಿ ಮುನಿಗಳು ಇಲ್ಲಿ ತಪಸ್ಸನ್ನು ಆಚರಿಸುತ್ತಿದ್ದರಿಂದ ಈ ಕ್ಷೇತ್ರಕ್ಕೆ ಜಪದಕಟ್ಟೆ ಎಂಬ ಹೆಸರು ಬಂದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನಲ್ಲಿರುವ ಕ್ಷೇತ್ರವು ಮೈಸೂರಿನಿಂದ ೭೪ ಕಿ.ಮೀ., ಕೆ.ಆರ್.ನಗರದಿಂದ ೩೫ ಕಿ.ಮೀ. ಮತ್ತು ಸಾಲಿಗ್ರಾಮದಿಂದ ೧೦ ಕಿ.ಮೀ. ದೂರದಲ್ಲಿದೆ. ಹೆಸರೇ ಸೂಚಿಸುವಂತೆ ಶಾಂತಿ ಮತ್ತು ಮನಸ್ಸಿಗೆ ನೆಮ್ಮದಿಯ ವಾತಾವರಣವನ್ನು ನೀಡುವ ಕ್ಷೇತ್ರವಾಗಿ ಪ್ರಕೃತಿಯ ಮಡಿಲಲ್ಲಿ ಅರಳಿ ನಿಂತಿದೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

17 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

21 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

21 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

21 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

21 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

21 hours ago