ಎಡಿಟೋರಿಯಲ್

ಆಂದೋಲನ ನಾಲ್ಕು ದಿಕ್ಕಿನಿಂದ : 01 ಸೋಮವಾರ 2022

ಗುಜರಾತಿನಲ್ಲಿ ಸಾರಾಯಿ ದುರಂತಕ್ಕೆ ೪೨ ಬಲಿ

ವರ್ಷಾಂತ್ಯದಲ್ಲಿ ಚುನಾವಣೆ ಎದುರಿಸಲಿರುವ ಗುಜರಾತ್ ರಾಜ್ಯದಲ್ಲೀಗ ಸರಣಿ ಸಾರಾಯಿ ದುರಂತಗಳು ನಡೆಯುತ್ತಿವೆ. ಮದ್ಯಪಾನ ನಿಷೇಧಿಸಿರುವುದರಿಂದ ಅಕ್ರಮ ಮದ್ಯತಯಾರಿಕೆ ಮತ್ತು ಮಾರಾಟ ವ್ಯಾಪಕವಾಗಿದ್ದು, ಜನರು ಅಕ್ರಮ ಸಾರಾಯಿ ಕುಡಿದು ಸಾಯುತ್ತಿದ್ದಾರೆ. ಇತ್ತೀಚಿನ ದುರಂತದಲ್ಲಿ ೪೨ ಜನರು ಮೃತಪಟ್ಟಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ೧೨ ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ. ಗುಜರಾತ್ ಸರ್ಕಾರದ ಗೃಹ ಇಲಾಖೆಯು ಬೊಟಾಡ್ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕರಂರಾಜ್ ವಘೇಲಾ ಮತ್ತು ಅಹಮದಾಬಾದ್ ಗ್ರಾಮಾಂತರ ಎಸ್ಪಿ ವೀರೇಂದ್ರ ಸಿಂಗ್ ಯಾದವ್ ಅವರನ್ನು ವರ್ಗಾವಣೆ ಮಾಡಿದ ಒಂದು ದಿನದ ನಂತರ ಮತ್ತು ಕರ್ತವ್ಯದಲ್ಲಿ ನಿರ್ಲಕ್ಷ್ಯದ ಆರೋಪದ ಮೇಲೆ ಇಬ್ಬರು ಉಪ ಎಸ್ಪಿ ಶ್ರೇಣಿಯ ಅಧಿಕಾರಿಗಳು ಸೇರಿದಂತೆ ಆರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಅಹಮದಾಬಾದ್ ಮತ್ತು ಬೊಟಾಡ್ ಗ್ರಾಮಗಳಲ್ಲಿ ೪೨ ಜನರನ್ನು ಬಲಿತೆಗೆದುಕೊಂಡ ಸಾರಾಯಿ ದುರಂತದ ಕುರಿತಂತೆ ನ್ಯಾಯಾಂಕ ತನಿಖೆಗೆ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಪಟ್ಟು ಹಿಡಿದಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ದುರಂತಗಳ ಸಂಖ್ಯೆ ಹೆಚ್ಚುತ್ತಿದೆ. ಅಪಾಯಕಾರಿ ಮೆಥನಾಲ್ ರಾಸಾಯನಿಕವನ್ನು ಸಾರಾಯಿಯೆಂದು ಅಕ್ರಮವಾಗಿ ಮಾರಾಟಮಾಡಲಾಗುತ್ತಿದೆ.


ಇಡಿ ವಶಕ್ಕೆ ಸಂಜಯ್ ರಾವತ್

ಮಹಾರಾಷ್ಟ್ರದಲ್ಲಿ ಕ್ಷಿಪ್ರಕ್ರಾಂತಿ ನಡೆಸಿ ಮುಖ್ಯಮಂತ್ರಿಯಾದ ಏಕನಾಥ್ ಶಿಂಧೆಗೆ ಬಿಜೆಪಿ ಬೆಂಬಲ ನೀಡಿದ್ದನ್ನು ಪ್ರಬಲವಾಗಿ ಟೀಕಿಸಿದ್ದ ಶಿವಸೇನಾ ನಾಯಕ ಸಂಜಯ್ ರಾವತ್ ಅವರನ್ನು ಇಡಿ ಕೊನೆಗೂ ವಶಕ್ಕೆ ಪಡೆದಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನೆ ನಾಯಕ ಎರಡು ಬಾರಿ ವಿಚಾರಣೆಗೆ ಗೈರು ಹಾಜರಾಗಿದ್ದರು. ಮುಂಬೈನಲ್ಲಿರುವ ಶಿವಸೇನಾ ಸಂಸದ ಸಂಜಯ್ ರಾವತ್ ಅವರ ಮನೆಯಲ್ಲಿ ಶೋಧ ಮತ್ತು ವಿಚಾರಣೆ ನಡೆಸಿದ ನಂತರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಭಾನುವಾರ ವಶಕ್ಕೆ ಪಡೆದಿದ್ದಾರೆ. ಬೆಳಿಗ್ಗೆ ೭ ಗಂಟೆಗೆ, ತನಿಖಾ ಸಂಸ್ಥೆ ತಂಡವು ಸಿಐಎಸ್‌ಎಫ್ ಅಧಿಕಾರಿಗಳೊಂದಿಗೆ ಮುಂಬೈನ ಪೂರ್ವ ಉಪನಗರದಲ್ಲಿರುವ ಬಂಡಪ್‌ನಲ್ಲಿರುವ ರಾವುತ್ ಅವರ ಮನೆಗೆ ತೆರಳಿ ಶೋಧ ನಡೆಸಿತು. ಮುಂಬೈನಲ್ಲಿ ಚಾಲ್‌ನ ಮರು-ಅಭಿವೃದ್ಧಿ ಮತ್ತು ಅವರ ಪತ್ನಿ ಮತ್ತು ನಿಕಟ ಸಹಚರರನ್ನು ಒಳಗೊಂಡಿರುವ ಸಂಬಂಧಿತ ವಹಿವಾಟುಗಳಿಗೆ ಸಂಬಂಧಿಸಿದಂತೆ ಇಡಿ ಪ್ರಶ್ನಿಸಿದ ನಂತರ ವಶಕ್ಕೆ ಪಡೆದಿದೆ. ‘ಸುಳ್ಳು ಕ್ರಮ, ಸುಳ್ಳು ಸಾಕ್ಷಿ…ನಾನು ಶಿವಸೇನೆಯನ್ನು ಬಿಡುವುದಿಲ್ಲ…ನಾನು ಸತ್ತರೂ ಶರಣಾಗುವುದಿಲ್ಲ…ನನಗೂ ಯಾವುದೇ ಹಗರಣಕ್ಕೂ ಸಂಬಂಧವಿಲ್ಲ …’ ಎಂದು ರಾವುತ್ ಟ್ವೀಟ್ ಮಾಡಿದ್ದಾರೆ.


ಬಂಗಾಲದಲ್ಲಿ ಸಿಕ್ಕ ನಗದುರಾಶಿ ಯಾರದ್ದು?

ಬಂಗಾಲದಲ್ಲಿ ಭಾರಿ ನಗದಿನೊಂದಿಗೆ ಸಿಕ್ಕಿಬಿದ್ದಿದ್ದ ಜಾರ್ಖಂಡ್‌ನ ಮೂವರು ಕಾಂಗ್ರೆಸ್ ಶಾಸಕರನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ವಹಿಸಲಾಗಿದೆ. ಈ ನಡುವೆ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ. ರಾಜ್ಯ ಸರ್ಕಾರ ಪತನವಾಗಲು ಮೂವರು ನಾಯಕರಿಗೆ ಹಣ ನೀಡಲಾಗಿದೆ ಎಂದು ಹೇಳುವ ಮೂಲಕ ನಗದು ಹಗರಣವನ್ನು ಬಿಜೆಪಿಗೆ ತಲೆಗೆ ಕಟ್ಟಲು ಕಾಂಗ್ರೆಸ್ ಯತ್ನಿಸಿತ್ತು.

ಆದರೆ ಈ ಹಣ ಜಾರ್ಖಂಡ್ ಮುಕ್ತಿ ಮೋರ್ಚಾ- ಕಾಂಗ್ರೆಸ್ ಮೈತ್ರಿ ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಟೀಕಿಸಿದೆ. ಪ್ರತಿ ಶಾಸಕರಿಗೆ ೧೦ ಕೋಟಿ ರೂ.ನೀಡುವ ಮೂಲಕ ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಸರ್ಕಾರವನ್ನು ಬೀಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪಶ್ಚಿಮ ಬಂಗಾಳದ ಹೌರಾದಲ್ಲಿ ಬಂಧಿಸಲಾದ ತನ್ನ ಮೂವರು ಶಾಸಕರ ವಿರುದ್ಧ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ ತಲಾ ೧೦ ಕೋಟಿ ರೂ. ಆಮಿಷ ಒಡ್ಡಿದ ಆರೋಪದ ಮೇಲೆ ಪೊಲೀಸ್ ದೂರನ್ನು ಕಾಂಗ್ರೆಸ್ ದಾಖಲಿಸಿದೆ.


ನಗದು ನನ್ನದಲ್ಲವೇ ಅಲ್ಲ!!

ಕೋಲ್ಕತ್ತಾದಲ್ಲಿರುವ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ಮನೆಗಳಿಂದ ವಶಪಡಿಸಿಕೊಂಡ ಕೋಟಿಗಟ್ಟಲೆ ನಗದು ಮತ್ತು ಕಿಲೋಗಟ್ಟಲೆ ಚಿನ್ನ ತನಗೆ ಸೇರಿದ್ದಲ್ಲವೇ ಅಲ್ಲ ಎಂದು ವಜಾಗೊಂಡಿರುವ ಬಂಗಾಳದ ಸಚಿವ ಪಾರ್ಥ ಚಟರ್ಜಿ ಹೇಳಿದ್ದಾರೆ. ಶಿಕ್ಷಕರ ನೇಮಕಾತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದಾಳಿಯ ವೇಳೆ ಮುಖರ್ಜಿ ಅವರಿಗೆ ಸೇರಿದ ಎರಡು ಮನೆಗಳಿಂದ ಸುಮಾರು ೫೦ ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿತ್ತು. ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಇಬ್ಬರನ್ನೂ ಈ ತಿಂಗಳ ಆರಂಭದಲ್ಲಿ ಬಂಧಿಸಲಾಗಿತ್ತು. ಇದೀಗ ಪಾರ್ಥ ಅವರನ್ನು ಸಂಪುಟದಿಂದಷ್ಟೇ ಅಲ್ಲ ಪಕ್ಷದಿಂದಲೂ ಅಮಾನತು ಮಾಡಲಾಗಿದೆ. ತಮ್ಮ ವಿರುದ್ಧ ಯಾರೋ ಷಡ್ಯಂತ್ರ ನಡೆಸುತ್ತಿದ್ದರೆ, ಸಮಯ ಬಂದಾಗ ಎಲ್ಲವನ್ನೂ ತಿಳಿದುಕೊಳ್ಳುತ್ತೇನೆ ಎಂದು ಪಾರ್ಥ ಚಟರ್ಜಿ ಹೇಳಿಕೊಂಡಿದ್ದಾರೆ. ಆರಂಭದಲ್ಲಿ ಇಡಿ ಅಧಿಕಾರಿಗಳು ಕಾರ್ಯನಿರ್ವಹಿಸಲು ಪಶ್ಚಿಮಬಂಗಾಳ ಸರ್ಕಾರ ಅವಕಾಶ ನೀಡಿರಲಿಲ್ಲ ಎಂದು ದೂರಲಾಗಿತ್ತು. ಆದರೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಪ್ಪಿತಸ್ಥರು ಯಾರೇ ಆದರು ಶಿಕ್ಷೆಗೊಳಗಾಗುತ್ತಾರೆ ಎಂದು ಘೋಷಿಸಿ, ಪಾರ್ಧರನ್ನು ಸಂಪುಟದಿಂದ ವಜಾ ಮಾಡಿದ್ದರು.

andolana

Recent Posts

ಕಾಡುಹಂದಿ ಬೇಟೆಗಾಗಿ ಮನೆಯಲ್ಲಿ ಸಂಗ್ರಹಿಸಿದ್ದ ಸಿಡಿಮದ್ದು ಸಿಡಿದು ವ್ಯಕ್ತಿಗೆ ಗಂಭೀರ ಗಾಯ

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್‌…

16 mins ago

ಓದುಗರ ಪತ್ರ:  ತಡೆಗೋಡೆ ನಿರ್ಮಿಸಿ

ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…

29 mins ago

ಓದುಗರ ಪತ್ರ:  ಗಂಗೋತ್ರಿ ವಿದ್ಯಾರ್ಥಿನಿಲಯಗಳಿಗೆ ಮೂಲ ಸೌಕರ್ಯ ಬೇಕಿದೆ

ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ…

31 mins ago

ಓದುಗರ ಪತ್ರ: ಪ್ರೇಕ್ಷಣೀಯ ಸ್ಥಳಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಇರಲಿ

ಮೈಸೂರಿನ ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಸಾವನ್ನಪ್ಪಿದ್ದಾರೆ. ಅರಮನೆ ವೀಕ್ಷಣೆಗೆ ಹೆಚ್ಚಿನ ಜನರು ಸೇರುತ್ತಾರೆ. ಕ್ರಿಸ್‌ಮಸ್…

32 mins ago

ಓದುಗರ ಪತ್ರ: ಕುವೆಂಪುನಗರ ಮಾರ್ಗಕ್ಕೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಕುವೆಂಪುನಗರ ‘ಎಂ ಬ್ಲಾಕ್’ನಿಂದ ಹೆಚ್ಚಿನ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ನಗರ ಸಾರಿಗೆ ಬಸ್ಸುಗಳು ಬೆಳಗಿನ ಸಮಯ ಸರಿಯಾಗಿ…

34 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ:  ನಿತಿನ್ ನೇಮಕ: ಬಿಜೆಪಿ ಹಿಡಿತ ಮೋದಿ, ಶಾ ಕೈಯಲ್ಲೇ

ಯಶಸ್ವಿ ರಾಜಕೀಯ ನಾಯಕತ್ವಕ್ಕೆ ಈಗ ಬೇಕಾಗಿರುವುದು ವರ್ಚಸ್ಸು ಮತ್ತು ಜನಪ್ರಿಯತೆ. ಈ ಗುಣಗಳಿದ್ದರೆ ಸರ್ಕಾರ ಮತ್ತು ಪಕ್ಷದಲ್ಲಿ ಏನು ಬೇಕಾದರೂ…

49 mins ago