ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ನರ್ಮದಾ ಬಚಾವೋ ಆಂದೋಲನದ ಮೇಧಾ ಪಾಟ್ಕರ್ ಹೆಜ್ಜೆ ಹಾಕಿದ್ದರ ಬಗ್ಗೆ ಪ್ರಧಾನಿ ಮೋದಿ ವ್ಯಂಗ್ಯವಾಡಿದ್ದಾರೆ. ಗುಜರಾತ್ನ ಜೀವನಾಡಿಯಾಗಿರುವ ನರ್ಮದಾ ಅಣೆಕಟ್ಟೆ ಯೋಜನೆ ವಿರುದ್ಧ ಅಭಿಯಾನ ನಡೆಸಿದ್ದವರು ಮೇಧಾ ಪಾಟ್ಕರ್. ಮೂರು ದಶಕಗಳಿಂದ ನರ್ಮದಾ ಅಣೆಕಟ್ಟೆ ಯೋಜನೆಯನ್ನು ಸ್ಥಗಿತಗೊಳಿಸಿದ ಮಹಿಳೆಯೊಂದಿಗೆ ಕಾಂಗ್ರೆಸ್ ನಾಯಕರೊಬ್ಬರು ಪಾದಯಾತ್ರೆ ನಡೆಸುತ್ತಿರುವುದು ಕಂಡುಬಂದಿದೆ ಎಂದು ಮೋದಿ ಟೀಕಿಸಿದ್ದಾರೆ. ಗುಜರಾತ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಅವರು ಪರೋಕ್ಷವಾಗಿ ‘ಭಾರತ್ ಜೋಡೊ ಯಾತ್ರೆ’ ನಡೆಸುತ್ತಿರುವ ರಾಹುಲ್ ಗಾಂಧಿ ಅವರನ್ನು ಟೀಕಿಸಿದರು. ಗುಜರಾತ್ ಅಭಿವೃದ್ಧಿಗೆ ನಾವು ಶ್ರಮಿಸಿದ್ದೇವೆ ಮುಂದೆಯೂ ಗುಜರಾತ್ ಅನ್ನು ಶ್ರೇಷ್ಠರಾಜ್ಯವನ್ನಾಗಿ ರೂಪಿಸುತ್ತೇವೆ ಎಂದು ಮೋದಿ ಹೇಳಿದರು. ಗುಜರಾತ್ ನಲ್ಲೀಗ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು, ಬಿಜೆಪಿ- ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಹಣಾಹಣಿಗೆ ಇಳಿದಿವೆ.
ಸಮಾಜವಾದಿ ಪಕ್ಷದ ನೇತಾರ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ತೆರವಾಗಿರುವ ಮೈನ್ಪುರಿ ಲೋಕಸಭಾ ಉಪಚುನಾವಣೆಯ ಪ್ರಚಾರ ತಾರಕಕ್ಕೇರಿದೆ. ಸಮಾಜವಾದಿ ಪಕ್ಷದ ತೆಕ್ಕೆಯಲ್ಲಿರುವ ಈ ಕ್ಷೇತ್ರವನ್ನು ಹೇಗಾದರೂ ವಶಪಡಿಸಿಕೊಳ್ಳುವ ಇರಾದೆ ಆಡಳಿತಾರೂಢ ಬಿಜೆಪಿಗೆ ಇದೆ. ಆದರೆ, ತಮ್ಮ ಕೋಟೆಯನ್ನು ರಕ್ಷಿಸಿಕೊಳ್ಳಲು ಹರಸಾಹಸ ಮಾಡುತ್ತಿರುವ ಅಖಿಲೇಶ್ ಯಾದವ್ ತಮ್ಮ ಪತ್ನಿ ಡಿಂಪಲ್ ಯಾದವ್ ಅವರನ್ನೇ ಕಣಕ್ಕೆ ಇಳಿಸಿದ್ದಾರೆ. ಅಲ್ಲದೇ ರಾಜಕೀಯ ಕೌಟುಂಬಿಕ ಕಲಹದಿಂದಾಗಿ ದೂರವಿದ್ದ ಚಿಕ್ಕಪ್ಪ ಶಿವಪಾಲ್ ಯಾದವ್ ಅವರ ನೆರವನ್ನು ಅಖಿಲೇಶ್ ಯಾದವ್ ಪಡೆದಿದ್ದಾರೆ. ಚುನಾವಣಾ ಪ್ರಚಾರದ ಸಭೆಯಲ್ಲೇ ಅಖಿಲೇಶ್ ಯಾದವ್ ಅವರು ಚಿಕ್ಕಪ್ಪ ಶಿವಪಾಲ್ ಯಾದವ್ ಅವರ ಪಾದಗಳಿಗೆ ಶಿರಸಾಷ್ಟಾಂಗ ನಮಸ್ಕಾರ ಮಾಡಿದ್ದಾರೆ. ತಮ್ಮ ಮತ್ತು ಚಿಕ್ಕಪ್ಪನವರ ಸಂಬಂಧದಲ್ಲಿ ಯಾವುದೇ ಒಡಕು ಉಂಟಾಗಿಲ್ಲ ಎಂದು ಬಹಿರಂಗವಾಗಿ ಸಾರಿದ್ದಾರೆ. ಕೌಟುಂಬಿಕ ಕಲಹದ ಮತಲಾಭ ಪಡೆಯಲು ಮುಂದಾಗಿದ್ದ ಬಿಜೆಪಿಗೆ ಈ ಬೆಳವಣಿಗೆಯಿಂದ ಕೊಂಚ ಹಿನ್ನಡೆಯಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಈಗಷ್ಟೇ ಮತದಾನ ನಡೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಸೇಬಿನ ಸಾಮ್ರಾಜ್ಯ ಹಿಮಾಲಯ ಪ್ರದೇಶದಲ್ಲೀಗ ಪ್ರವಾಸಿಗರ ಪ್ರವಾಹವೇ ಹರಿಯುತ್ತಿದೆ. ಕೋವಿಡ್ ಕಾರಣಕ್ಕಾಗಿ ಪ್ರವಾಸಿಗರ ಸಂಖ್ಯೆ ಕಳೆದ ವರ್ಷ ಕುಂಠಿತಗೊಂಡಿತ್ತು. ಈ ವರ್ಷ ಜನವರಿಯಿಂದೀಚೆಗೆ ೧.೩೦ ಕೋಟಿ ಪ್ರವಾಸಿಗರು ಭೇಟಿ ನೀಡಿದ್ದಾರೆ. ಇದು ಕೋವಿಡ್ ಪೂರ್ವದಲ್ಲಿದ್ದ ಪ್ರಮಾಣಕ್ಕಿಂತಲೂ ಹೆಚ್ಚಿದೆ. ಕಳೆದ ವರ್ಷ ಭೇಟಿ ಕೊಟ್ಟವರ ಸಂಖ್ಯೆಗೆ ಹೋಲಿಸಿದರೆ ಮೂರು ಪಟ್ಟು ಹೆಚ್ಚು. ಹಿಮಾಚಲ ಪ್ರದೇಶದ ಪ್ರವಾಸೋದ್ಯಮವು ಕೋವಿಡ್-ಪ್ರೇರಿತ ವಿರಾಮದ ನಂತರ ತೀವ್ರ ವೇಗವನ್ನು ಪಡೆದುಕೊಂಡಿದೆ ಮತ್ತು ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಅಕ್ಟೋಬರ್ ೩೧ ರವರೆಗೆ ಮೂರು ಪಟ್ಟು ಹೆಚ್ಚಾಗಿದೆ. ಅತಿಯಾದ ಚಳಿ ಇರುವ ಜನವರಿ ತಿಂಗಳಲ್ಲೇ ೭.೭೦ ಲಕ್ಷ ಜನರು ಬಂದಿದ್ದರು. ಜೂನ್ ತಿಂಗಳಲ್ಲಿ ಬಂದವರ ಸಂಖ್ಯೆ ೨೦ ಲಕ್ಷ ದಾಟಿತ್ತು. ಪ್ರವಾಸೋದ್ಯಮ ಇಲಾಖೆಯ ಅಂಕಿಅಂಶಗಳ ಪ್ರಕಾರ ಜನವರಿ ೧ ರಿಂದ ಅಕ್ಟೋಬರ್ ೩೧ ರ ನಡುವೆ ೨೮,೨೩೨ ವಿದೇಶಿಯರು ಭೇಟಿ ನೀಡಿದ್ದಾರೆ.
ಹಣದುಬ್ಬರ ಕೊಂಚ ಪ್ರಮಾಣದಲ್ಲಿ ತಗ್ಗಿರುವುದರಿಂದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಡಿಸೆಂಬರ್ನಲ್ಲಿ ನಡೆಯಲಿರುವ ಹಣಕಾಸು ನೀತಿ ದ್ವೈಮಾಸಿಕ ಸಭೆಯಲ್ಲಿ ಹಿಂದಿನಂತೆ ಶೇ.೦.೫೦ರಷ್ಟು ಬಡ್ಡಿ ಏರಿಸುವ ಸಾಧ್ಯತೆ ಇಲ್ಲ. ಆದರೆ, ಏರಿಕೆ ಪ್ರಮಾಣವು ಶೇ.೦. ೩೫ರಷ್ಟು ಇರಲಿದೆ. ಹಣದುಬ್ಬರ ನಿಯಂತ್ರಿಸುವ ಸಲುವಾಗಿ ಈಗಾಗಲೇ ಶೇ.೧.೯೦ರಷ್ಟು ಬಡ್ಡಿದರ ಏರಿಕೆ ಮಾಡಲಾಗಿದೆ. ಇದರಿಂದ ಗ್ರಾಹಕರಿಗೆ ಹೆಚ್ಚಿನ ಹೊರೆಯಾಗಿದೆ. ಹಣದುಬ್ಬರ ನಿಗದಿತ ಪ್ರಮಾಣಕ್ಕೆ ತಗ್ಗುವವರೆಗೂ ಬಡ್ಡಿದರ ಯಥಾಸ್ಥಿತಿ ಕಾಯ್ದುಕೊಳ್ಳುವ ಅಥವಾ ತಗ್ಗಿಸುವ ಸ್ಥಿತಿಯಲ್ಲಿ ಆರ್ಬಿಐ ಇಲ್ಲ. ಹೀಗಾಗಿ ಹಣಕಾಸು ನೀತಿ ಸಮಿತಿ ಶೇ.೦.೩೫ರಷ್ಟು ಬಡ್ಡಿದರ ಏರಿಸಲಿದೆ ಎಂಬುದು ಮಾರುಕಟ್ಟೆ ತಜ್ಞರ ಅಂದಾಜು. ೨೦೨೩ರ ಉತ್ತರಾರ್ಧದೊಳಗೆ ಹಣದುಬ್ಬರ ನಿಗದಿತ ಮಿತಿಯೊಳಗೆ ಬರಲಿದೆ ಎಂದ ನಿರೀಕ್ಷೆ ಆರ್ಬಿಐ ಗವರ್ನರ್ ಶಕ್ತಿಕಾಂತದಾಸ್ ಅವರದು. ಅಲ್ಲಿಯವರೆಗೆ ಅಲ್ಪಪ್ರಮಾಣದ ಬಡ್ಡಿದರ ಏರಿಕೆ ಅನಿವಾರ್ಯ. ಆನಂತರ ಯಥಾಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆ ಇದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…