ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 15 ಶುಕ್ರವಾರ 2022

ಬೃಹತ್ ಗಾತ್ರದಲ್ಲಿ ಸೊಗಸಾಗಿ ಮೂಡಿಬಂದ ೫೦ ರ ಹರೆಯದ ‘ಆಂದೋಲನ’

ಐವತ್ತೇನೇ ವರ್ಷದ ಸಂಭ್ರಮಾಚರಣೆ ಕಂಡ ಆಂದೋಲನ ಅಂದು ೧೧೪ ಪುಟಗಳ ಬೃಹತ್ ಗಾತ್ರದಲ್ಲಿ ತುಂಬಾ ಅಚ್ಚು ಕಟ್ಟಾಗಿ ಸೊಗಸಾಗಿ ಮೂಡಿ ಬಂದಿದೆ. ನಿರ್ಮಲಾ ಕೋಟಿಯವರ ‘ ಕೋಟಿ ನೆನಪುಗಳ ಸಿಹಿ ಪಾಕ’ ಕೆ ವೆಂಕಟರಾಜು ಅವರ ‘ತಿಟ್ಹತ್ತಿ ತಿರುಗಿ ನೋಡಿದಾಗ’ ‘ಆಂದೋಲನದ ಹೆಜ್ಜೆ ಗುರುತು’ ‘ಜನಾಂದೋಲನಗಳೇ ಆಂದೋಲನವಾದಾಗ’ ‘ ತಾಯಿ ಮಮತೆಯ ಕೋಟಿ ಹೃದಯ’ ‘ ಕಾಡುಗಳ್ಳ ವೀರಪ್ಪನ್ ಅಟ್ಟಹಾಸಕ್ಕೆ ನಡುಗಿದ ಏಳುಮಲೆ’ ಡಾ.ಶಿವಾನಂದ ಗವಿಮಠರವರ ‘ ಮೆಸೂರು ಪ್ರಾಂತ್ಯದಲ್ಲಿ ಆಯುರ್ವೇದ ಹೆಜ್ಜೆ ಗುರುತು’ ಬಿ.ಆರ್. ಜೋಯಪ್ಪರವರ ‘ಭಾವುಕ ಕ್ಷಣಗಳಿಗೆ ಸಾಕ್ಷಿಯಾದ ದಿನಗಳು’ ಮಹಾರಾಣಿ ತ್ರಿಷಿಕಾ ಕುಮಾರಿಯವರ ‘ಬದುಕು ಬದಲಾಗಿಲ್ಲ ಜವಾಬ್ದಾರಿ ಬಂದಿದೆಯಷ್ಟೆ ’ ಲೇಖನಗಳು ಮನಸೊರೆಗೊಂಡವು.

ಹೆಚ್.ಎಸ್ . ಉಮೇಶ್, ಈಚನೂರು ಕುಮಾರ್, ಎ.ಎನ್ ಮಣಿಕಂಠ, ಆರ್.ಎಲ್.ಮಂಜುನಾಥ, ಸಿ.ಮರಿ ಜೋಸೆಫ್, ಜಿ. ಹೇಮಂತ್ ಕುಮಾರ್, ಬಿ.ಟಿ. ಮೋಹನ್ ಕುಮಾರ್, ಪ್ರಸಾದ್ ಲಕ್ಕೂರು, ಹೆಚ್.ಟಿ. ಅನಿಲ್, ಕೆ.ಬಿ. ರಮೇಶ್ ನಾಯಕ, ಆರ್.ವೀರೆಂದ್ರ ಪ್ರಸಾದ್, ಸುರೇಶ್ .ಆರ್. ಕಂದೇಗಾಲ, ಹಾರೋಹಳ್ಳಿ ರವೀಂದ್ರ, ಉತ್ತನ ಹಳ್ಳಿ ಮಹದೇವ, ಹೆಚ್.ಎಸ್ .ದಿನೇಶ್ ಕುಮಾರ್, ಬಾ.ನಾ.ಸುಬ್ರಹ್ಮಣ್ಯ , ಪ. ಮಲ್ಲೇಶ್, ಜನಾರ್ಧನ್ ಜನ್ನಿ, ಸುಮನಾ, ಬೆಟ್ಟಯ್ಯ ಕೋಟೆ, ರತಿರಾವ್, ನವೀನ್ ಡಿಸೋಜ. ಡಾ.ಕೆ.ರಾಘವೇಂದ್ರ ಪೈ, ಪರಮಶಿವ ನಡುಬೆಟ್ಟ, ಸ.ರಾ.ಸುದರ್ಶನ, ಸುಜಾತ ರೋಹಿತ್ , ಬಿ.ಎಸ್. ಹರೀಶ್ ಬಂದಗದ್ದೆ, ಆಲಕಾ ಕಟ್ಟೆಮನೆ, ಭವ್ಯ ತಿಮ್ಮಯ್ಯ, ಶೆಲಜಾ ವೇಣುಗೋಪಾಲ್, ವಿ.ಶ್ರೀನಿವಾಸ್ ಪ್ರಸಾದ್, ಅಂಶಿ ಪ್ರಸನ್ನ ಕುಮಾರ್, ಶ್ರೀಧರ್ .ಆರ್.ಭಟ್- ಇವರೆಲ್ಲರ ಲೇಖನಗಳು ನಮ್ಮನ್ನು ಆಸಕ್ತಿಯಿಂದ ಓದುವಂತೆ ಮಾಡಿದವು. ನಮಗೆ ಇಂದಿಗೂ ಗೊತ್ತಾಗದಿರುವ ಹಲವು ವಿಷಯಗಳು ಈ ವಿಶೇಷ ಸಂಚಿಕೆಯಿಂದ ಗೊತ್ತಾಯಿತು ಎಂದು ತಿಳಿಸಲು ಹರ್ಷಿಸುತ್ತೇನೆ. ಪ್ರತಿಯೊಬ್ಬರು ಈ ವಿಶೇಷ ಸಂಚಿಕೆಯನ್ನು ಜೋಪಾನವಾಗಿ ಇಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ವಿಶೇಷ ಸಂಚಿಕೆಯನ್ನು ಹೊರತರಲು ಹಗಲಿರುಳು ಶ್ರಮಿಸಿದ ‘ಆಂದೋಲನ’ದ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಲಕ್ಷಾಂತರ ಓದುಗರ ಪರವಾಗಿ ಧನ್ಯವಾದಗಳು!

ಅಹಲ್ಯ ಸಿ.ನಾ. ಚಂದ್ರ, ಜನತಾನಗರ, ಮೆಸೂರು.


ಶ್ರೀಲಂಕಾ ಸ್ಥಿತಿ ನೆರೆಹೊರೆಗೆ ಎಚ್ಚರಿಕೆಯ ಗಂಟೆ

ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ದ್ವೀಪ ರಾಷ್ಟ್ರ ಶ್ರೀಲಂಕಾ ಹೊತ್ತಿ ಉರಿಯುವ ಸ್ಥಿತಿಗೆ ತಲುಪಿದೆ. ಬೊಕ್ಕಸ ಬರಿದಾಗಿದೆ, ದೇಶದ ಆಡಳಿತದ ಚುಕ್ಕಾಣಿ ಹಿಡಿದ ಸ್ವತ: ಅಧ್ಯಕ್ಷ ಗೋಟಬಾಯಿ ರಾಜಪಕ್ಷ ಅವರು ಪರಾರಿಯಾಗಿ ಅಜ್ಞಾತ ಸ್ಥಳದಲ್ಲಿ ಅವಿತುಕೊಳ್ಳುವಂತ ಸ್ಥಿತಿ ನಿಜಕ್ಕೂ ಆ ದೇಶದ ಮಟ್ಟಿಗೆ ಆತಂಕಕಾರಿ. ಇತ್ತ ಆಹಾರ ,ಇಂಧನ ,ಅಗತ್ಯ ವಸ್ತುಗಳಿಗೆ ಪರಿತಪಿಸುತ್ತಿರುವ ಪ್ರಜೆಗಳು ಬೀದಿಗಿಳಿದು ನಾಯಕರು ಮನೆಗಳಿಗೆ ಬೆಂಕಿ ಹಚ್ಚುವ ಕೃತ್ಯಕ್ಕೆ ಇಳಿದಿದ್ದಾರೆ ಇದನ್ನು ಗಮನಿಸಿದರೆ ಅಲ್ಲಿಯ ಜನರ ಪರಿಸ್ಥಿತಿ ಹೇಗಿರಬಹುದು ಎಂಬುದು ಊಹಿಸಲು ಅಸಾಧ್ಯ. ಇದು ನಮ್ಮ ದೇಶಕ್ಕೂ ಎಚ್ಚರಿಕೆಯ ಗಂಟೆಯಾಗಿದೆ. ಮಿತಿಮೀರಿದ ಭ್ರಷ್ಟಾಚಾರ, ನಮ್ಮನ್ನು ಆಳುವವರು ,ಅಧಿಕಾರಿ ಶಾಹಿಯ ಸರ್ಕಾರದ ಹಣವನ್ನು ಸಾಧ್ಯವಾದಷ್ಟು ಮಟ್ಟಿಗೆ ಕೊಳ್ಳೆ ಹೊಡೆಯಬೇಕೆಂಬ ಮನ:ಸ್ಥಿತಿಗೆ ತಲುಪಿರುವುದು ಆರ್ಥಿಕ ಶಿಸ್ತು ಮರೆತು ಕೇವಲ ಪಕ್ಷಗಳ ಜನಪ್ರಿಯತೆಗಾಗಿ ಬೊಕ್ಕಸ ಹಣವನ್ನುಅನುತ್ಪಾದಕ ಯೋಜನೆಗಳಿಗೆ ತೊಡಗಿಸುವುದು, ದುಡಿದು ತಿನ್ನುವ ಮನೋಭಾವ ಕಡಿಮೆಯಾಗಿ ಸರ್ಕಾರದ ಸೌಲಭ್ಯಕ್ಕೆ ಕೈಯೊಡ್ಡಿ ನಿಲ್ಲುವ ಸ್ಥಿತಿಗೆ ಜನ ತಲುಪಿರುವುದು ದೇಶದ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ. ಶ್ರೀಲಂಕಾದ ಸ್ಥಿತಿ ಎಲ್ಲಾ ದೇಶಗಳಿಗೂ ಎಚ್ಚರಿಕೆಯ ಗಂಟೆ.

ಶುಭ ಎಸ್, ಮಹಾರಾಜ ಕಾಲೇಜ್, ಮೈಸೂರು.

 

andolanait

Recent Posts

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

4 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

5 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

5 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

9 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

9 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

10 hours ago