ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 15 ಶುಕ್ರವಾರ 2022

ಬೃಹತ್ ಗಾತ್ರದಲ್ಲಿ ಸೊಗಸಾಗಿ ಮೂಡಿಬಂದ ೫೦ ರ ಹರೆಯದ ‘ಆಂದೋಲನ’

ಐವತ್ತೇನೇ ವರ್ಷದ ಸಂಭ್ರಮಾಚರಣೆ ಕಂಡ ಆಂದೋಲನ ಅಂದು ೧೧೪ ಪುಟಗಳ ಬೃಹತ್ ಗಾತ್ರದಲ್ಲಿ ತುಂಬಾ ಅಚ್ಚು ಕಟ್ಟಾಗಿ ಸೊಗಸಾಗಿ ಮೂಡಿ ಬಂದಿದೆ. ನಿರ್ಮಲಾ ಕೋಟಿಯವರ ‘ ಕೋಟಿ ನೆನಪುಗಳ ಸಿಹಿ ಪಾಕ’ ಕೆ ವೆಂಕಟರಾಜು ಅವರ ‘ತಿಟ್ಹತ್ತಿ ತಿರುಗಿ ನೋಡಿದಾಗ’ ‘ಆಂದೋಲನದ ಹೆಜ್ಜೆ ಗುರುತು’ ‘ಜನಾಂದೋಲನಗಳೇ ಆಂದೋಲನವಾದಾಗ’ ‘ ತಾಯಿ ಮಮತೆಯ ಕೋಟಿ ಹೃದಯ’ ‘ ಕಾಡುಗಳ್ಳ ವೀರಪ್ಪನ್ ಅಟ್ಟಹಾಸಕ್ಕೆ ನಡುಗಿದ ಏಳುಮಲೆ’ ಡಾ.ಶಿವಾನಂದ ಗವಿಮಠರವರ ‘ ಮೆಸೂರು ಪ್ರಾಂತ್ಯದಲ್ಲಿ ಆಯುರ್ವೇದ ಹೆಜ್ಜೆ ಗುರುತು’ ಬಿ.ಆರ್. ಜೋಯಪ್ಪರವರ ‘ಭಾವುಕ ಕ್ಷಣಗಳಿಗೆ ಸಾಕ್ಷಿಯಾದ ದಿನಗಳು’ ಮಹಾರಾಣಿ ತ್ರಿಷಿಕಾ ಕುಮಾರಿಯವರ ‘ಬದುಕು ಬದಲಾಗಿಲ್ಲ ಜವಾಬ್ದಾರಿ ಬಂದಿದೆಯಷ್ಟೆ ’ ಲೇಖನಗಳು ಮನಸೊರೆಗೊಂಡವು.

ಹೆಚ್.ಎಸ್ . ಉಮೇಶ್, ಈಚನೂರು ಕುಮಾರ್, ಎ.ಎನ್ ಮಣಿಕಂಠ, ಆರ್.ಎಲ್.ಮಂಜುನಾಥ, ಸಿ.ಮರಿ ಜೋಸೆಫ್, ಜಿ. ಹೇಮಂತ್ ಕುಮಾರ್, ಬಿ.ಟಿ. ಮೋಹನ್ ಕುಮಾರ್, ಪ್ರಸಾದ್ ಲಕ್ಕೂರು, ಹೆಚ್.ಟಿ. ಅನಿಲ್, ಕೆ.ಬಿ. ರಮೇಶ್ ನಾಯಕ, ಆರ್.ವೀರೆಂದ್ರ ಪ್ರಸಾದ್, ಸುರೇಶ್ .ಆರ್. ಕಂದೇಗಾಲ, ಹಾರೋಹಳ್ಳಿ ರವೀಂದ್ರ, ಉತ್ತನ ಹಳ್ಳಿ ಮಹದೇವ, ಹೆಚ್.ಎಸ್ .ದಿನೇಶ್ ಕುಮಾರ್, ಬಾ.ನಾ.ಸುಬ್ರಹ್ಮಣ್ಯ , ಪ. ಮಲ್ಲೇಶ್, ಜನಾರ್ಧನ್ ಜನ್ನಿ, ಸುಮನಾ, ಬೆಟ್ಟಯ್ಯ ಕೋಟೆ, ರತಿರಾವ್, ನವೀನ್ ಡಿಸೋಜ. ಡಾ.ಕೆ.ರಾಘವೇಂದ್ರ ಪೈ, ಪರಮಶಿವ ನಡುಬೆಟ್ಟ, ಸ.ರಾ.ಸುದರ್ಶನ, ಸುಜಾತ ರೋಹಿತ್ , ಬಿ.ಎಸ್. ಹರೀಶ್ ಬಂದಗದ್ದೆ, ಆಲಕಾ ಕಟ್ಟೆಮನೆ, ಭವ್ಯ ತಿಮ್ಮಯ್ಯ, ಶೆಲಜಾ ವೇಣುಗೋಪಾಲ್, ವಿ.ಶ್ರೀನಿವಾಸ್ ಪ್ರಸಾದ್, ಅಂಶಿ ಪ್ರಸನ್ನ ಕುಮಾರ್, ಶ್ರೀಧರ್ .ಆರ್.ಭಟ್- ಇವರೆಲ್ಲರ ಲೇಖನಗಳು ನಮ್ಮನ್ನು ಆಸಕ್ತಿಯಿಂದ ಓದುವಂತೆ ಮಾಡಿದವು. ನಮಗೆ ಇಂದಿಗೂ ಗೊತ್ತಾಗದಿರುವ ಹಲವು ವಿಷಯಗಳು ಈ ವಿಶೇಷ ಸಂಚಿಕೆಯಿಂದ ಗೊತ್ತಾಯಿತು ಎಂದು ತಿಳಿಸಲು ಹರ್ಷಿಸುತ್ತೇನೆ. ಪ್ರತಿಯೊಬ್ಬರು ಈ ವಿಶೇಷ ಸಂಚಿಕೆಯನ್ನು ಜೋಪಾನವಾಗಿ ಇಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ವಿಶೇಷ ಸಂಚಿಕೆಯನ್ನು ಹೊರತರಲು ಹಗಲಿರುಳು ಶ್ರಮಿಸಿದ ‘ಆಂದೋಲನ’ದ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಲಕ್ಷಾಂತರ ಓದುಗರ ಪರವಾಗಿ ಧನ್ಯವಾದಗಳು!

ಅಹಲ್ಯ ಸಿ.ನಾ. ಚಂದ್ರ, ಜನತಾನಗರ, ಮೆಸೂರು.


ಶ್ರೀಲಂಕಾ ಸ್ಥಿತಿ ನೆರೆಹೊರೆಗೆ ಎಚ್ಚರಿಕೆಯ ಗಂಟೆ

ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ದ್ವೀಪ ರಾಷ್ಟ್ರ ಶ್ರೀಲಂಕಾ ಹೊತ್ತಿ ಉರಿಯುವ ಸ್ಥಿತಿಗೆ ತಲುಪಿದೆ. ಬೊಕ್ಕಸ ಬರಿದಾಗಿದೆ, ದೇಶದ ಆಡಳಿತದ ಚುಕ್ಕಾಣಿ ಹಿಡಿದ ಸ್ವತ: ಅಧ್ಯಕ್ಷ ಗೋಟಬಾಯಿ ರಾಜಪಕ್ಷ ಅವರು ಪರಾರಿಯಾಗಿ ಅಜ್ಞಾತ ಸ್ಥಳದಲ್ಲಿ ಅವಿತುಕೊಳ್ಳುವಂತ ಸ್ಥಿತಿ ನಿಜಕ್ಕೂ ಆ ದೇಶದ ಮಟ್ಟಿಗೆ ಆತಂಕಕಾರಿ. ಇತ್ತ ಆಹಾರ ,ಇಂಧನ ,ಅಗತ್ಯ ವಸ್ತುಗಳಿಗೆ ಪರಿತಪಿಸುತ್ತಿರುವ ಪ್ರಜೆಗಳು ಬೀದಿಗಿಳಿದು ನಾಯಕರು ಮನೆಗಳಿಗೆ ಬೆಂಕಿ ಹಚ್ಚುವ ಕೃತ್ಯಕ್ಕೆ ಇಳಿದಿದ್ದಾರೆ ಇದನ್ನು ಗಮನಿಸಿದರೆ ಅಲ್ಲಿಯ ಜನರ ಪರಿಸ್ಥಿತಿ ಹೇಗಿರಬಹುದು ಎಂಬುದು ಊಹಿಸಲು ಅಸಾಧ್ಯ. ಇದು ನಮ್ಮ ದೇಶಕ್ಕೂ ಎಚ್ಚರಿಕೆಯ ಗಂಟೆಯಾಗಿದೆ. ಮಿತಿಮೀರಿದ ಭ್ರಷ್ಟಾಚಾರ, ನಮ್ಮನ್ನು ಆಳುವವರು ,ಅಧಿಕಾರಿ ಶಾಹಿಯ ಸರ್ಕಾರದ ಹಣವನ್ನು ಸಾಧ್ಯವಾದಷ್ಟು ಮಟ್ಟಿಗೆ ಕೊಳ್ಳೆ ಹೊಡೆಯಬೇಕೆಂಬ ಮನ:ಸ್ಥಿತಿಗೆ ತಲುಪಿರುವುದು ಆರ್ಥಿಕ ಶಿಸ್ತು ಮರೆತು ಕೇವಲ ಪಕ್ಷಗಳ ಜನಪ್ರಿಯತೆಗಾಗಿ ಬೊಕ್ಕಸ ಹಣವನ್ನುಅನುತ್ಪಾದಕ ಯೋಜನೆಗಳಿಗೆ ತೊಡಗಿಸುವುದು, ದುಡಿದು ತಿನ್ನುವ ಮನೋಭಾವ ಕಡಿಮೆಯಾಗಿ ಸರ್ಕಾರದ ಸೌಲಭ್ಯಕ್ಕೆ ಕೈಯೊಡ್ಡಿ ನಿಲ್ಲುವ ಸ್ಥಿತಿಗೆ ಜನ ತಲುಪಿರುವುದು ದೇಶದ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ. ಶ್ರೀಲಂಕಾದ ಸ್ಥಿತಿ ಎಲ್ಲಾ ದೇಶಗಳಿಗೂ ಎಚ್ಚರಿಕೆಯ ಗಂಟೆ.

ಶುಭ ಎಸ್, ಮಹಾರಾಜ ಕಾಲೇಜ್, ಮೈಸೂರು.

 

andolanait

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

31 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

4 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

4 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

7 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago