ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 19 ಮಂಗಳವಾರ 2022

ಜನಾಕ್ರೋಶಕ್ಕೆ ಮಣಿದ ಸರ್ಕಾರ

ಸರ್ಕಾರಿ ಕಚೇರಿಗಳಲ್ಲಿ ಫೋಟೋ ತೆಗೆಯುವುದು ಹಾಗೂ ವಿಡಿಯೋ ಚಿತ್ರೀಕರಣ ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು ವಿರೋಧ ಪಕ್ಷಗಳ ಮತ್ತು ಸಂಘ-ಸಂಸ್ಥೆಗಳ ಟೀಕೆ ಹಾಗೂ ಜನಕ್ರೋಶಕ್ಕೆ ಮಣಿದು ಸರ್ಕಾರ ಮಧ್ಯರಾತ್ರಿ ಹಿಂಪಡೆದಿದೆ. ಭ್ರಷ್ಟಾಚಾರ ತಾಂಡವಾಡುತ್ತಿರುವ ಸಂದರ್ಭದಲ್ಲಿ ಈ ಆದೇಶವು ಪರೋಕ್ಷವಾಗಿ ಭ್ರಷ್ಟಾಚಾರಕ್ಕೆ ಸರ್ಕಾರವೇ ಕುಮಕ್ಕು ನೀಡುವಂತಿತ್ತು ಎಂಬ ಸಂಶಯ ಎಲ್ಲರಲ್ಲಿ ಮನೆ ಮಾಡಿತ್ತು. ಇದನ್ನರಿತ್ತ ಮುಖ್ಯಮಂತ್ರಿಗಳು ಆದೇಶ ವಾಪಾಸ್ ಪಡೆದಿರುವುದು ಉತ್ತಮ ನಿರ್ಧಾರ.

-ಸಿದ್ದರಾಜು ಕೆ.ಎಸ್. ಮೈಸೂರು.


ರಾಜಕಾರಣಿಗಳು ಪಾಠ ಕಲಿಯಲಿ

ವಿರೋಧ ಪಕ್ಷದ ನಾಯಕ ರಾದ ಶ್ರೀ ಸಿದ್ದರಾಮಯ್ಯ ನವರು ತಮ್ಮ ವಿಧಾನಸಭಾ ಕ್ಷೇತ್ರದ ಕೆರೂರಿನಲ್ಲಿ ನಡೆದ ಒಂದು ಗಲಭೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡುತ್ತಿರುವವರ ಯೋಗಕ್ಷೇಮ ವಿಚಾರಿಸಿ, ಚಿಕಿತ್ಸೆಗಾಗಿ ಧನ ಸಹಾಯ ಮಾಡಿದ್ದನ್ನು, ಗಾಯಾಳುಗಳು ಮತ್ತು ಅವರ ಕುಟುಂಬದ ವರು ನಿರಾಕರಿಸಿದ ಘಟನೆ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ರಾಜಕೀಯ ನೇತಾರರು ತಮ್ಮ ಕ್ಷೇತ್ರದಲ್ಲಿ ಯಾವುದಾದರು ಗಲಾಟೆಯಾಗಿ ಹೊಡೆದಾಟಗಳಾದರೆ, ಆ ಗಲಾಟೆಯ ಮೂಲ ಹುಡುಕಿ ಅದನ್ನು ಶಾಶ್ವತವಾಗಿ ನಿವಾರಣೆ ಮಾಡುವುದನ್ನು ಬಿಟ್ಟು, ಒಂದಿಷ್ಟು ಹಣವನ್ನು ಅಂಥಹವರ ಕೈಯಲ್ಲಿಟ್ಟು ಮಾಧ್ಯಮಗಳಲ್ಲಿ ಪ್ರಚಾರ ತೆಗೆದುಕೊಳ್ಳುವುದು ಸಾಮಾನ್ಯ. ಆದರೆ ಕೆರೂರಿನಲ್ಲಿ ಸಿದ್ದರಾಮಯ್ಯ ನವರಿಗೆ ಆದ ಮುಖಭಂಗದಿಂದಲಾದರೂ ರಾಜಕೀಯ ನೇತಾರರು ಪಾಠ ಕಲಿಯಬೇಕು. ಎಲ್ಲವನ್ನೂ ದುಡ್ಡಿನಿಂದ ಅಳೆಯದೆ ಮಾನವೀಯವಾಗಿ ವರ್ತಿಸುವುದನ್ನು ಕಲಿಯಬೇಕು ಎಂಬುದಕ್ಕೆ ಕೆರೂರು ಘಟನೆ ನಾಂದಿ ಹಾಡಿದೆ ಎಂದರೆ ತಪ್ಪಾಗಲಾರದು.

-ಬ್ಯಾಂಕ್ ಶಿವಕುಮಾರ್, ಜೆ.ಪಿ.ನಗರ,ಮೈಸೂರು.


ಸಮಿತಿ ಏಕೆ? ಸಚಿವರೇ ಸಾಕು!

ಸರಕಾರವೇ ನೇಮಕ ಮಾಡಿದ ತಜ್ಞರ ಸಮಿತಿ ಶ್ರಮವಹಿಸಿ ಸಿದ್ಧಮಾಡಿ ಕೊಟ್ಟ ವರದಿಯನ್ನು ಜನಪ್ರತಿನಿಧಿಗಳು ರದ್ದುಮಾಡಿಸುತ್ತಾರೆ. ತಜ್ಞರ ವರದಿಯ ಮೌಲ್ಯ ಮಾಪನ ಮಾಡುವುದು ತಜ್ಞರಲ್ಲ, ರಾಜಕಾರಣಿಗಳು! ಖ್ಯಾತ ಪರಿಸರ ತಜ್ಞ ಕಸ್ತೂರಿ ರಂಗನ್ ಸಮಿತಿ ನೀಡಿದ ಶಿಫಾರಸ್ಸು ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ ಉಳಿವಿಗೂ, ಜೀವ ಪರಿಸರ ಹಾಗೂ ಮಾನವರ ಉಳಿವಿಗೂ ತೀರಾ ಅಗತ್ಯವಿದೆ. ಆದರೆ ಅದು ರಾಜಕಾರಣಿಗಳಿಗೆ ಬೇಡ. ತಜ್ಞರ ವರದಿ ಒಪ್ಪಿ ಪರಿಸರ ಉಳಿದರೆ ಮಲೆನಾಡಿನ ಜನರಿಗೆ ತೊಂದರೆಯಾಗುತ್ತದೆ ಎಂಬ ನೆಪ ಒಡ್ಡಿ ಗೃಹ ಸಚಿವರು ರದ್ದು ಮಾಡಿಸಲು ಮುಂದಾಗಿದ್ದಾರೆಂದು ವರದಿಯಾಗಿದೆ. ವಿಜ್ಞಾನಿಗಳಿಗೆ ಅವಮಾನವಾದರೂ ಸರಿ ಸಚಿವರನ್ನು ಸಿಎಂ ಬಿಡುವಂತಿಲ್ಲ. ಬಹುಶ: ಸರಕಾರ ಉಳಿವುದೇ ಮುಖ್ಯವಿರಬಹುದು. ಹೀಗಾಗುವುದಾದರೆ ಇನ್ನು ಮುಂದೆ ಪರಿಣಿತರ ಅಭಿಪ್ರಾಯಗಳಿಗೆ ಬದಲು ಆಯಾ ಶಾಸಕರು ಸಚಿವರನ್ನೇ ಕೇಳಿ ಬೇಕಾದದ್ದು ಮಾಡಿಕೊಳ್ಳಬಹುದು. ಪರಿಸರ ಹಾಳಾದರೂ ತಜ್ಞರ ಸಮಿತಿಯ ಖರ್ಚಾದರೂ ಬೊಕ್ಕಸಕ್ಕೆ ಉಳಿದಂತಾಗುತ್ತದೆಯಲ್ಲವೇ.

ಡಾ. ಟಿ. ಗೋವಿಂದರಾಜು, ಬೆಂಗಳೂರು .


ತೆರಿಗೆ ಹೇರಿಕೆ ಖಂಡನೀಯ

ಕೇಂದ್ರ ಸರ್ಕಾರ ಆಹಾರ ಪದಾರ್ಥಗಳು ಹಾಗೂ ಮೊಸರು ಮಜ್ಜಿಗೆಗಳ ಮೇಲೆ ತೆರಿಗೆ ಹೇರಿರುವುದು ಖಂಡನೀಯ. ದೇಶದ ಜನರು ಮೊದಲೇ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದಾರೆ. ಪ್ಯಾಕ್ ಮಾಡಲಾದ ಬ್ರಾಂಡೆಂಡ್ ಮತ್ತು ಬ್ರಾಂಡೆಡ್ ಅಲ್ಲ ಆಹಾರ ಪದಾರ್ಥಗಳ ಮೇಲೆ ಶೇ.೫ರಷ್ಟು ತೆರಿಗೆ ಹೇರಿರುವುದು ಸಮರ್ಥನೀಯವಲ್ಲ.

-ನಿತಿನ್ ಹೆಚ್ ಸಿ, ಮಹಾರಾಜ ಕಾಲೇಜು, ಮೈಸೂರು.

andolanait

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

3 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

4 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

4 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

5 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

5 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

6 hours ago