ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 19 ಮಂಗಳವಾರ 2022

ಜನಾಕ್ರೋಶಕ್ಕೆ ಮಣಿದ ಸರ್ಕಾರ

ಸರ್ಕಾರಿ ಕಚೇರಿಗಳಲ್ಲಿ ಫೋಟೋ ತೆಗೆಯುವುದು ಹಾಗೂ ವಿಡಿಯೋ ಚಿತ್ರೀಕರಣ ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು ವಿರೋಧ ಪಕ್ಷಗಳ ಮತ್ತು ಸಂಘ-ಸಂಸ್ಥೆಗಳ ಟೀಕೆ ಹಾಗೂ ಜನಕ್ರೋಶಕ್ಕೆ ಮಣಿದು ಸರ್ಕಾರ ಮಧ್ಯರಾತ್ರಿ ಹಿಂಪಡೆದಿದೆ. ಭ್ರಷ್ಟಾಚಾರ ತಾಂಡವಾಡುತ್ತಿರುವ ಸಂದರ್ಭದಲ್ಲಿ ಈ ಆದೇಶವು ಪರೋಕ್ಷವಾಗಿ ಭ್ರಷ್ಟಾಚಾರಕ್ಕೆ ಸರ್ಕಾರವೇ ಕುಮಕ್ಕು ನೀಡುವಂತಿತ್ತು ಎಂಬ ಸಂಶಯ ಎಲ್ಲರಲ್ಲಿ ಮನೆ ಮಾಡಿತ್ತು. ಇದನ್ನರಿತ್ತ ಮುಖ್ಯಮಂತ್ರಿಗಳು ಆದೇಶ ವಾಪಾಸ್ ಪಡೆದಿರುವುದು ಉತ್ತಮ ನಿರ್ಧಾರ.

-ಸಿದ್ದರಾಜು ಕೆ.ಎಸ್. ಮೈಸೂರು.


ರಾಜಕಾರಣಿಗಳು ಪಾಠ ಕಲಿಯಲಿ

ವಿರೋಧ ಪಕ್ಷದ ನಾಯಕ ರಾದ ಶ್ರೀ ಸಿದ್ದರಾಮಯ್ಯ ನವರು ತಮ್ಮ ವಿಧಾನಸಭಾ ಕ್ಷೇತ್ರದ ಕೆರೂರಿನಲ್ಲಿ ನಡೆದ ಒಂದು ಗಲಭೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡುತ್ತಿರುವವರ ಯೋಗಕ್ಷೇಮ ವಿಚಾರಿಸಿ, ಚಿಕಿತ್ಸೆಗಾಗಿ ಧನ ಸಹಾಯ ಮಾಡಿದ್ದನ್ನು, ಗಾಯಾಳುಗಳು ಮತ್ತು ಅವರ ಕುಟುಂಬದ ವರು ನಿರಾಕರಿಸಿದ ಘಟನೆ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ರಾಜಕೀಯ ನೇತಾರರು ತಮ್ಮ ಕ್ಷೇತ್ರದಲ್ಲಿ ಯಾವುದಾದರು ಗಲಾಟೆಯಾಗಿ ಹೊಡೆದಾಟಗಳಾದರೆ, ಆ ಗಲಾಟೆಯ ಮೂಲ ಹುಡುಕಿ ಅದನ್ನು ಶಾಶ್ವತವಾಗಿ ನಿವಾರಣೆ ಮಾಡುವುದನ್ನು ಬಿಟ್ಟು, ಒಂದಿಷ್ಟು ಹಣವನ್ನು ಅಂಥಹವರ ಕೈಯಲ್ಲಿಟ್ಟು ಮಾಧ್ಯಮಗಳಲ್ಲಿ ಪ್ರಚಾರ ತೆಗೆದುಕೊಳ್ಳುವುದು ಸಾಮಾನ್ಯ. ಆದರೆ ಕೆರೂರಿನಲ್ಲಿ ಸಿದ್ದರಾಮಯ್ಯ ನವರಿಗೆ ಆದ ಮುಖಭಂಗದಿಂದಲಾದರೂ ರಾಜಕೀಯ ನೇತಾರರು ಪಾಠ ಕಲಿಯಬೇಕು. ಎಲ್ಲವನ್ನೂ ದುಡ್ಡಿನಿಂದ ಅಳೆಯದೆ ಮಾನವೀಯವಾಗಿ ವರ್ತಿಸುವುದನ್ನು ಕಲಿಯಬೇಕು ಎಂಬುದಕ್ಕೆ ಕೆರೂರು ಘಟನೆ ನಾಂದಿ ಹಾಡಿದೆ ಎಂದರೆ ತಪ್ಪಾಗಲಾರದು.

-ಬ್ಯಾಂಕ್ ಶಿವಕುಮಾರ್, ಜೆ.ಪಿ.ನಗರ,ಮೈಸೂರು.


ಸಮಿತಿ ಏಕೆ? ಸಚಿವರೇ ಸಾಕು!

ಸರಕಾರವೇ ನೇಮಕ ಮಾಡಿದ ತಜ್ಞರ ಸಮಿತಿ ಶ್ರಮವಹಿಸಿ ಸಿದ್ಧಮಾಡಿ ಕೊಟ್ಟ ವರದಿಯನ್ನು ಜನಪ್ರತಿನಿಧಿಗಳು ರದ್ದುಮಾಡಿಸುತ್ತಾರೆ. ತಜ್ಞರ ವರದಿಯ ಮೌಲ್ಯ ಮಾಪನ ಮಾಡುವುದು ತಜ್ಞರಲ್ಲ, ರಾಜಕಾರಣಿಗಳು! ಖ್ಯಾತ ಪರಿಸರ ತಜ್ಞ ಕಸ್ತೂರಿ ರಂಗನ್ ಸಮಿತಿ ನೀಡಿದ ಶಿಫಾರಸ್ಸು ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ ಉಳಿವಿಗೂ, ಜೀವ ಪರಿಸರ ಹಾಗೂ ಮಾನವರ ಉಳಿವಿಗೂ ತೀರಾ ಅಗತ್ಯವಿದೆ. ಆದರೆ ಅದು ರಾಜಕಾರಣಿಗಳಿಗೆ ಬೇಡ. ತಜ್ಞರ ವರದಿ ಒಪ್ಪಿ ಪರಿಸರ ಉಳಿದರೆ ಮಲೆನಾಡಿನ ಜನರಿಗೆ ತೊಂದರೆಯಾಗುತ್ತದೆ ಎಂಬ ನೆಪ ಒಡ್ಡಿ ಗೃಹ ಸಚಿವರು ರದ್ದು ಮಾಡಿಸಲು ಮುಂದಾಗಿದ್ದಾರೆಂದು ವರದಿಯಾಗಿದೆ. ವಿಜ್ಞಾನಿಗಳಿಗೆ ಅವಮಾನವಾದರೂ ಸರಿ ಸಚಿವರನ್ನು ಸಿಎಂ ಬಿಡುವಂತಿಲ್ಲ. ಬಹುಶ: ಸರಕಾರ ಉಳಿವುದೇ ಮುಖ್ಯವಿರಬಹುದು. ಹೀಗಾಗುವುದಾದರೆ ಇನ್ನು ಮುಂದೆ ಪರಿಣಿತರ ಅಭಿಪ್ರಾಯಗಳಿಗೆ ಬದಲು ಆಯಾ ಶಾಸಕರು ಸಚಿವರನ್ನೇ ಕೇಳಿ ಬೇಕಾದದ್ದು ಮಾಡಿಕೊಳ್ಳಬಹುದು. ಪರಿಸರ ಹಾಳಾದರೂ ತಜ್ಞರ ಸಮಿತಿಯ ಖರ್ಚಾದರೂ ಬೊಕ್ಕಸಕ್ಕೆ ಉಳಿದಂತಾಗುತ್ತದೆಯಲ್ಲವೇ.

ಡಾ. ಟಿ. ಗೋವಿಂದರಾಜು, ಬೆಂಗಳೂರು .


ತೆರಿಗೆ ಹೇರಿಕೆ ಖಂಡನೀಯ

ಕೇಂದ್ರ ಸರ್ಕಾರ ಆಹಾರ ಪದಾರ್ಥಗಳು ಹಾಗೂ ಮೊಸರು ಮಜ್ಜಿಗೆಗಳ ಮೇಲೆ ತೆರಿಗೆ ಹೇರಿರುವುದು ಖಂಡನೀಯ. ದೇಶದ ಜನರು ಮೊದಲೇ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದಾರೆ. ಪ್ಯಾಕ್ ಮಾಡಲಾದ ಬ್ರಾಂಡೆಂಡ್ ಮತ್ತು ಬ್ರಾಂಡೆಡ್ ಅಲ್ಲ ಆಹಾರ ಪದಾರ್ಥಗಳ ಮೇಲೆ ಶೇ.೫ರಷ್ಟು ತೆರಿಗೆ ಹೇರಿರುವುದು ಸಮರ್ಥನೀಯವಲ್ಲ.

-ನಿತಿನ್ ಹೆಚ್ ಸಿ, ಮಹಾರಾಜ ಕಾಲೇಜು, ಮೈಸೂರು.

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

9 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

11 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

13 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

13 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

14 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

15 hours ago