ಎಡಿಟೋರಿಯಲ್

ಆಂದೋಲನ ಓದುಗರಪತ್ರ : 22 ಶುಕ್ರವಾರ 2022

ನಂದಿನಿ ಬುಡಕ್ಕೆ ಬಿದ್ದ ತೆರಿಗೆ ಏಟು!

ನಂದಿನಿ ಮೊಸರು ಕೊಳ್ಳಲು ಹೋಗಿದ್ದೆ. ಅರ್ಧ ಲೀಟರ್ ಮೊಸರಿಗೆ ಎರಡು ರೂಪಾಯಿ ಹೆಚ್ಚಳವಾಗಿದೆ. ಮಜ್ಜಿಗೆ, ಪನೀರ್ ಬೆಲೆಯೂ ಏರಿಕೆಯಾಗಿದೆ. ಅರ್ಧ ಲೀಟರ್ ಮೊಸರು ಕೊಳ್ಳುವ ಬದಲಿಗೆ ೨೦೦ ಮಿಲಿ ಮೊಸರು ಖರೀದಿಸಿದೆ. ನಂತರ ಮತ್ತೊಬ್ಬ ಗ್ರಾಹಕರೂ ಅರ್ಧ ಲೀಟರ್ ಬದಲಿಗೆ ೨೦೦ ಮಿಲಿ ಮೊಸರು ಖರೀದಿಸಿದರು. ನಂದಿನಿ ಬೂತ್ ನವರಿಗೆ ಕೇಳಿದೆ ‘ಮೊಸರು ಮಾರಾಟ ಹೇಗಿದೆ’ ಅಂತಾ. ‘ಬೆಲೆ ಏರಿದೆ ಅಂತಾ ಮೊಸರು ತಿನ್ನದೇ ಇರಲು ಸಾಧ್ಯವಿಲ್ಲ. ಆದರೆ, ತಿನ್ನುವ ಪ್ರಮಾಣ ಕಡಮೆಯಾಗುತ್ತಿದೆ. ಒಂದು ಲೀಟರ್ ಮೊಸರು ಕೊಳ್ಳುತ್ತಿದ್ದವರು ಅರ್ಧ ಲೀಟರ್ ಕೊಳ್ಳುತ್ತಿದ್ದಾರೆ. ಅರ್ಧ ಲೀಟರ್ ಕೊಳ್ಳುತ್ತಿದ್ದವರು ೨೦೦ ಮಿಲಿ ಕೊಳ್ಳುತ್ತಿದ್ದಾರೆ’ ಅಂತ ವಿವರಿಸಿದರು. ಕೇಂದ್ರ ಸರ್ಕಾರ ನೀಡಿರುವ ಜಿಎಸ್‌ಟಿ ಏಟು ‘ನಂದಿನಿ’ಯ ಬುಡಕ್ಕೆ ಬಿದ್ದಿದೆ ಎನಿಸಿತು.
ನಂದಿನಿ ಬುಟಕ್ಕೆ ಏಟು ಬಿದ್ದರೆ, ಅದು ಲಕ್ಷಾಂತರ ಹಾಲು ಉತ್ಪಾದರ ಬುಡಕ್ಕೂ ಬಿದ್ದಂತೆಯೇ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ!

-ದೊಡ್ಡೇಗೌಡ, ಕುವೆಂಪುನಗರ, ಮೈಸೂರು.


ಶಿಕ್ಷಣ ವಿರೋಧಿ ಜಿಎಸ್‌ಟಿ ಹೇರಿಕೆ

ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಶಿಕ್ಷಣದ ಸಾಮಾಗ್ರಿಗಳಾದ ಪೆನ್ಸಿಲ್, ಷಾರ್ಪನರ್, ರೈಟಿಂಗ್-ಡ್ರಾಯಿಂಗ್-ಪ್ರಿಂಟಿಂಗ್ ಇಂಕ್, ಪೇಪರ್, ಗ್ರಾಫ್ ಪೇಪರ್, ನೋಟ್‌ಬುಕ್ ಮೇಲೆ ಜಿಎಸ್ಟಿ ಹಾಕಿರುವುದು ವಿದ್ಯಾರ್ಥಿಗಳಿಗೆ ಹೊರೆಯಾಗಲಿದೆ. ಮೋದಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಶಿಕ್ಷಣದ ಮೇಲೆ ದಾಳಿಗಳು ಹೆಚ್ಚಾಗಿವೆ. ಶಿಕ್ಷಣದ ವ್ಯಾಪಾರೀಕರಣ ತೀವ್ರಗೊಂಡು ತಳಸಮುದಾಯದ ಮಕ್ಕಳು ಶಿಕ್ಷಣದಿಂದ ಹೊರ ಹೋಗುತ್ತಿರುವ ಹೆಚ್ಚಾಗುತ್ತಿ . ಇಂತಹ ವಿಷಮ ಸಂಧರ್ಭದಲ್ಲಿ ಅಪ್ರಜಾಸತ್ತತ್ಮಕವಾಗಿ, ಅವೈಜ್ಞಾನಿಕವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಎನ್‌ಇಪಿ ಜಾರಿಗೊಳಿಸುತ್ತಿದೆ. ಇದರ ನಡುವೆಯೇ ಒಕ್ಕೂಟ ಸರ್ಕಾರ ಶಿಕ್ಷಣದ ಸಾಮಾಗ್ರಿಗಳ ಮೇಲೆ ಶೇ.೧೨ರಿಂದ ೧೮ರಷ್ಟು ಜಿಎಸ್‌ಟಿ ಹೇರಿರುವುದು ಶಿಕ್ಷಣ ವಿರೋಧಿ ನೀತಿಯಾಗಿದೆ. ಒಕ್ಕೂಟ ಸರ್ಕಾರದ ಈ ನೀತಿಯು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಶಿಕ್ಷಣದ ವೆಚ್ಚ ವಿಪರೀತ ಏರಿಕೆ ಮಾಡಲಿದೆ. ಇದು ತಳಸಮುದಾಯಗಳ ಬಡ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿಸುವ ಕ್ರಮಗಳಾಗಿವೆ.

-ಮದನ್ ಹಾದನೂರು, ಮೈಸೂರು.


ಸರ್ಕಾರದ ಎಡವಟ್ಟು!

ರಾಜ್ಯ ಸರ್ಕಾರಕ್ಕೆ ವಿದ್ಯಾರ್ಥಿಗಳ ಹಿತಾಸಕ್ತಿಗಿಂತ ತನ್ನ ಪ್ರತಿಷ್ಠೆಯೇ ಮುಖ್ಯ ಎಂಬುದು ಪಠ್ಯ ಪರಿಷ್ಕರಣೆ ಪ್ರಹಸನದಲ್ಲಿ ಬಯಲಾಗಿದೆ. ಇದೀಗ ವಿದ್ಯಾರ್ಥಿಗಳು ಪಠ್ಯಗಳೇ ಇಲ್ಲದೇ ಪರೀಕ್ಷೆ ಬರೆಯುವ ಪರಿಸ್ಥಿತಿ ಎದುರಾಗಿದೆ (‘ಆಂದೋಲನ’ ವರದಿ). ವರದಿಯಲ್ಲಿ ಉಲ್ಲೇಖಿಸಿದಂತೆ ಸಾವಿರಾರು ಶಾಲೆಗಳ ಮಕ್ಕಳಿಗೆ ಪಠ್ಯಪುಸ್ತಕಗಳೇ ತಲುಪಿಲ್ಲ. ಪರಿಷ್ಕರಣೆ ವಿಚಾರದಲ್ಲಿ ಸರ್ಕಾರದ ಮಾಡಿದ ಎಡವಟ್ಟು ನಿರ್ಧಾರದಿಂದ ಲಕ್ಷಾಂತರ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ. ಸರ್ಕಾರ ಇನ್ನು ಮುಂದಾದರೂ ಇಂತಹ ಎಡವಟ್ಟು ನಿರ್ಧಾರ ತೆಗೆದುಕೊಳ್ಳುವುದನ್ನು ನಿಲ್ಲಿಸಲಿ. ವಿದ್ಯಾರ್ಥಿಗಳ ಹಿತಾಸಕ್ತಿ ಆದ್ಯತೆಯಾಗಲಿ.

-ನಂದಕುಮಾರ್, ಸರಸ್ವತಿಪುರಂ, ಮೈಸೂರು.


ಶಿಕ್ಷಕರ ದುಸ್ಥಿತಿ

ರಾಜ್ಯದಲ್ಲಿ ನರೇಗಾ ಕೂಲಿಗಿಂತಲೂ ಕಡಿಮೆ ವೇತನಕ್ಕೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕಾರ್ಯನಿರ್ವಹಿಸಬೇಕಾದ ಅನಿವಾರ್ಯ ಪರಿಸ್ಥಿತಿ ಅತಿಥಿ ಶಿಕ್ಷಕರದ್ದಾಗಿದೆ. ಒಂದು ಲೆಕ್ಕದಲ್ಲಿ ಬಿಇಡಿ ಪದವಿ ಪಡೆದು ಅತಿಥಿ ಶಿಕ್ಷಕರಾಗಿ ಕಾರ್ಯನಿರ್ವಹಿಸುವುದಕ್ಕಿಂತ ಯಾವುದೇ ಖರ್ಚು ವೆಚ್ಚವಿಲ್ಲದೆ ನರೇಗಾದಲ್ಲಿ ಕೆಲಸ ಮಾಡುವವರ ಜೀವನವೇ ಲೇಸು ಎಂಬಂತಾಗಿದೆ . ಪ್ರಸ್ತುತ ನರೇಗಾ ಕೂಲಿ ದಿನವೊಂದಕ್ಕೆ ೨೮೯ ರೂ ನೀಡಲಾಗುತ್ತಿದೆ. ಆದರೆ ಅತಿಥಿ ಶಿಕ್ಷಕರಾಗಿ ಕಾರ್ಯನಿರ್ವಹಿಸುವವರಿಗೆ ದಿನವೊಂದಕ್ಕೆ ೨೫೦ ರೂ. ಮಾತ್ರ ನೀಡಲಾಗುತ್ತಿದೆ. ಇದು ಕನಿಷ್ಠ ವೇತನದ ಅರ್ಧದಷ್ಟು ಕೂಡ ಇಲ್ಲದಂತಾಗಿದೆ. ಕೇವಲ ೭,೫೦೦ ರೂ.ಗಳಿಗೆ ಕಾರ್ಯನಿರ್ವಹಿಸಿದರೆ ಶಿಕ್ಷಕರು ಜೀವನ ನಿರ್ವಹಣೆ ಮಾಡುವುದು ಹೇಗೆ? ಶಿಕ್ಷಣ ಸಚಿವರು ಈ ಬಗ್ಗೆ ಚಿಂತಿಸಬೇಕಿದೆ.

-ಪುಟ್ಟಸ್ವಾಮಿ ಹೆಚ್ ಎಂ, ಮಹಾರಾಜ ಕಾಲೇಜು, ಮೈಸೂರು.


ಸಂತ್ರಸ್ತರಿಗೆ ತ್ವರಿತ ನೆರವಾಗಿ

ರಾಜ್ಯದಲ್ಲಿ ನೆರೆಯಿಂದ ಹಲವಾರು ಊರು ಕೇರಿಗಳು ಜಲಾವೃತಗೊಂಡು ರಾಜ್ಯದ ಜನರು ಸಂಕಷ್ಟದಲ್ಲಿದ್ದಾರೆ. ಆದರೆ ಸರ್ಕಾರವು ಅಲ್ಲಿನ ಜನರ ಸ್ಥಿತಿ ಗತಿಗಳ ಬಗ್ಗೆ ಅವಲೋಕನ ಮಾಡಿ ಅವರ ಸಂಕಷ್ಟಗಳಿಗೆ ಪರಿಹಾರ ನೀಡದೆ, ಅದ್ಧೂರಿ ದಸರಾ ಆಚರಣೆಯ ಬಗೆ ಚಿಂತನೆ ನಡೆಸಿದೆ. ರಾಜ್ಯ ಸರ್ಕಾರವು ತನ್ನ ಪ್ರತಿಷ್ಠೆಗಾಗಿ ಅದ್ದೂರಿ ದಸರಾ ಆಚರಣೆ ಚಿಂತನೆಯನ್ನು ಬಿಟ್ಟು, ಮೊದಲು ನೆರೆ ಸಂತ್ರಸ್ತರ ನೆರವಿಗೆ ಧಾವಿಸಬೇಕಿದೆ. ದಸರಾ ಹಬ್ಬಕ್ಕೆ ಇನ್ನೂ ಹೆಚ್ಚು ಕಾಲವಿದೆ. ಮಳೆಯಿಂದ ಸಂತ್ರಸ್ತರಾದವರಿಗೆ ಪರಿಹಾರ ನೀಡಬೇಕಾಗಿರುವುದು ಸರ್ಕಾರದ ತುರ್ತು ಕೆಲೆಸ ಎಂಬುದನ್ನು ಮರೆಯಬಾರದು.

-ಸ್ವಸ್ತಿಕ್ ಎಸ್, ಮಹಾರಾಜ ಕಾಲೇಜು, ಮೈಸೂರು.

 

andolana

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

8 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

8 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

8 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

8 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

8 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

8 hours ago