ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 02 ಮಂಗಳವಾರ 2022

‘ಆಂದೋಲನ’ ದಿನಪತ್ರಿಕೆಗೆ ಧನ್ಯವಾದಗಳು!

ಎಚ್ ಡಿ ಕೋಟೆ ತಾಲ್ಲೂಕಿನಲಿ ಜರುಗಿದ ‘ಆಂದೋಲನ’ ದಿನಪತ್ರಿಕೆಯ ೫೦ ವರ್ಷಗಳ ಸಾರ್ಥಕ ಪಯಣದ ಮುನ್ನೋಟ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಸಾಧಕರಿಬ್ಬರಿಗೆ ಸನ್ಮಾನಿಸಿರುವುದು ಸಂತಸವಾಗಿದೆ. ಪತ್ರಿಕೆಯು ಎರಡು ತಾಲೂಕುಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಸಮಸ್ಯೆಗಳನ್ನು ಅಧಿಕಾರಿ ವರ್ಗ ಮತ್ತು ಜನಪ್ರತಿನಿಧಿಗಳ ಮುಂದಿಟ್ಟು ಕಣ್ತೆರೆಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದು, ಓದುಗರ ಹೃದಯದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ವಿಶೇಷ ಪುಟಗಳಲ್ಲಿ ವೈವಿಧ್ಯಮಯವಾಗಿ ತಾಲೂಕಿನ ಹಿರಿಮೆಯನ್ನು ಪ್ರಕಟಿಸಿದ್ದೀರಿ. ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜನೆ ಮಾಡಿ ಹಿಂದುಳಿದ ತಾಲ್ಲೂಕಿನ ಬಗ್ಗೆ ತೋರಿದ ಕಾಳಜಿ ಮತ್ತು ಪ್ರೀತಿಗೆ ಧನ್ಯವಾದಗಳು.

-ಪರಶಿವಮೂರ್ತಿ ಎ್.ಪಿ, ನಂಜೀಪುರ, ಸರಗೂರು ತಾಲ್ಲೂಕು.


ಮೇ(ಲ್)ಲುಗೈ!!

ಸಿಇಟಿ ಫಲಿತಾಂಶ: ಬಾಲಕರು ಮೇಲುಗೈ

(ಆಂದೋಲನ, ಜು.೩೧)

ಪ್ರತಿ ಬಾರಿಯೂ ಪಿಯುಸಿ,

ಎಸ್ಸೆಸ್ಸೆಲ್ಸಿ ಪರೀಕ್ಷಾ

ಫಲಿತಾಂಶಗಳಲ್ಲಿ

ಬಾಲಕಿಯರೇ ಮೇಲುಗೈ!

ಸದ್ಯ , ಈ ಸಾರಿ

ಸಿಇಟಿಯಲ್ಲಾದರೂ

ತೋರಿಸಿ ಬಿಟ್ಟರಲ್ಲಾ

ನಮ್ಮಹುಡುಗರು
ನಾವೂ ಸೈ!!
-ಮ.ಗು.ಬಸವಣ್ಣ, ಜೆಎಸ್‌ಎಸ್ ಸಂಸ್ಥೆ, ಸುತ್ತೂರು.


ಧ್ವಜ ನೀತಿ ನಿಯಮ ಪಾಲನೆ ಅಗತ್ಯ

‘ಹರ್ ಘರ್ ತಿರಂಗ’ ಭಾರತ ಸರ್ಕಾರದ ಮಹತ್ವದ ಯೋಜನೆಯೇ ಸರಿ. ಆದರೆ ಜನರಿಗೆ ರಾಷ್ಟ್ರೀಯ ದ್ವಜ ಬಳಸುವಿಕೆ ಕುರಿತಾಗಿ ಇರುವ ನಿಯಮಗಳನ್ನು ತಿಳಿಸುವುದು ಮತ್ತು ಅವುಗಳನ್ನು ಪಾಲಿಸುವಂತೆ ಸೂಚಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕರ್ತವ್ಯ. ದೇಶದ ಗೌರವ, ಸ್ವಾಭಿಮಾನ, ಸರ್ವಭೌಮತೆಯನ್ನು, ಪ್ರದರ್ಶಿಸುವ ದೇಶದ ತ್ರಿವರ್ಣಧ್ವಜವನ್ನು ಹಾರಿಸಲು ಸ್ಪಷ್ಟ ನೀತಿ ನಿಯಮಗಳನ್ನು ರೂಪಿಸಲಾಗಿದೆ.Flag code of India 2000  ಮತ್ತು Prevention of insults to national honour act 1971 ಇದರ ಕುರಿತು ತಿಳಿಸುತ್ತದೆ. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ತಿಳುವಳಿಕೆ ಹೇಳಬೇಕು. ಈ ಮಹತ್ವಕಾಂಕ್ಷಿ ಯೋಜನೆಯಡಿ ಮೇಲಿನ ನೀತಿ ನಿಯಮಗಳನ್ನು ಪಾಲಿಸಿ ದೇಶ ಧ್ವಜದ ಗೌರವ ಉಳಿಸುವುದು ಅಗತ್ಯ.

-ಪ್ರಶಾಂತ. ಜಿ, ಮಹಾರಾಜ ಕಾಲೇಜು ಮೈಸೂರು.


ಕುಡಿಯುವ ನೀರಿಗೂ ಬರ!

ಮೈಸೂರಿನ ವಿಜಯನಗರ ೪ನೇ ಹಂತದಲ್ಲಿ ಕುಡಿಯುವ ನೀರಿಗೂ ಬರ ಬಂದಿದೆ. ನಮ್ಮ ಮನೆ ಇರುವುದು ವಿಜಯನಗರ ೪ನೇ ಹಂತ, ೨ನೇ ಫೇಸ್. ಇಲ್ಲಿ ೨ ದಿನಕ್ಕೆ ಒಮ್ಮೆರಾತ್ರಿ ೩-೦೦ ಗಂಟೆಯಿಂದ ಬೆಳಿಗ್ಗೆ ೬.೦೦ ರವರೆಗೆ ನೀರು ಬಿಡುತ್ತಾರೆ. ಅಂದರೆ ೩ ಗಂಟೆ ಮಾತ್ರ ನೀರು ಸೋರುತ್ತದೆ. ಅರ್ಧ ಸಂಪೂ ತುಂಬುವುದಿಲ್ಲ. ಕೆಲವೊಮ್ಮೆ ೨ನೇ ದಿನವು ನೀರು ಬಿಡುವುದಿಲ್ಲ. ವಾಟರ್ಮೆನ್ ಕೇಳಿದರೆ ೨ ಬೋರ್ವೆಲ್ ಮಾತ್ರ ಇರುವುದು ನೀರು ಸಾಕಾಗುವುದಿಲ್ಲ ಎನ್ನುತ್ತಾರೆ. ನಮಗೂ ಟ್ಯಾಂಕರ್ ನೀರು ಹಾಕಿಸಿ ಸಾಕಾಗಿ ಹೋಗಿದೆ. ನಾನು ಏರಿಯಾ ಇಂಜಿನಿಯರ್ ಗಮನಕ್ಕೂ ತಂದೆ ಏನು ಪ್ರಯೋಜನವಾಗಿಲ್ಲ. ಮೂಲಭೂತ ಸೌಲಭ್ಯ ಕೊಡುವುದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕರ್ತವ್ಯ. ಸಮರ್ಪಕವಾಗಿ ಪ್ರತಿದಿನ ನೀರು ಒದಗಿಸುವಂತೆ ಪ್ರಾಧಿಕಾರದ ಆಯುಕ್ತರಲ್ಲಿ ಮನವಿ ಮಾಡಿಕೊಳ್ಳುತ್ತೇನೆ.

– ಬಿ.ಜಿ.ರಂಗೇಗೌಡ, ವಿಜಯನಗರ ಮೈಸೂರು. 

andolana

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

2 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

2 hours ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

3 hours ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

3 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

3 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

5 hours ago