ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 02 ಮಂಗಳವಾರ 2022

‘ಆಂದೋಲನ’ ದಿನಪತ್ರಿಕೆಗೆ ಧನ್ಯವಾದಗಳು!

ಎಚ್ ಡಿ ಕೋಟೆ ತಾಲ್ಲೂಕಿನಲಿ ಜರುಗಿದ ‘ಆಂದೋಲನ’ ದಿನಪತ್ರಿಕೆಯ ೫೦ ವರ್ಷಗಳ ಸಾರ್ಥಕ ಪಯಣದ ಮುನ್ನೋಟ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಸಾಧಕರಿಬ್ಬರಿಗೆ ಸನ್ಮಾನಿಸಿರುವುದು ಸಂತಸವಾಗಿದೆ. ಪತ್ರಿಕೆಯು ಎರಡು ತಾಲೂಕುಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಸಮಸ್ಯೆಗಳನ್ನು ಅಧಿಕಾರಿ ವರ್ಗ ಮತ್ತು ಜನಪ್ರತಿನಿಧಿಗಳ ಮುಂದಿಟ್ಟು ಕಣ್ತೆರೆಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದು, ಓದುಗರ ಹೃದಯದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ವಿಶೇಷ ಪುಟಗಳಲ್ಲಿ ವೈವಿಧ್ಯಮಯವಾಗಿ ತಾಲೂಕಿನ ಹಿರಿಮೆಯನ್ನು ಪ್ರಕಟಿಸಿದ್ದೀರಿ. ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜನೆ ಮಾಡಿ ಹಿಂದುಳಿದ ತಾಲ್ಲೂಕಿನ ಬಗ್ಗೆ ತೋರಿದ ಕಾಳಜಿ ಮತ್ತು ಪ್ರೀತಿಗೆ ಧನ್ಯವಾದಗಳು.

-ಪರಶಿವಮೂರ್ತಿ ಎ್.ಪಿ, ನಂಜೀಪುರ, ಸರಗೂರು ತಾಲ್ಲೂಕು.


ಮೇ(ಲ್)ಲುಗೈ!!

ಸಿಇಟಿ ಫಲಿತಾಂಶ: ಬಾಲಕರು ಮೇಲುಗೈ

(ಆಂದೋಲನ, ಜು.೩೧)

ಪ್ರತಿ ಬಾರಿಯೂ ಪಿಯುಸಿ,

ಎಸ್ಸೆಸ್ಸೆಲ್ಸಿ ಪರೀಕ್ಷಾ

ಫಲಿತಾಂಶಗಳಲ್ಲಿ

ಬಾಲಕಿಯರೇ ಮೇಲುಗೈ!

ಸದ್ಯ , ಈ ಸಾರಿ

ಸಿಇಟಿಯಲ್ಲಾದರೂ

ತೋರಿಸಿ ಬಿಟ್ಟರಲ್ಲಾ

ನಮ್ಮಹುಡುಗರು
ನಾವೂ ಸೈ!!
-ಮ.ಗು.ಬಸವಣ್ಣ, ಜೆಎಸ್‌ಎಸ್ ಸಂಸ್ಥೆ, ಸುತ್ತೂರು.


ಧ್ವಜ ನೀತಿ ನಿಯಮ ಪಾಲನೆ ಅಗತ್ಯ

‘ಹರ್ ಘರ್ ತಿರಂಗ’ ಭಾರತ ಸರ್ಕಾರದ ಮಹತ್ವದ ಯೋಜನೆಯೇ ಸರಿ. ಆದರೆ ಜನರಿಗೆ ರಾಷ್ಟ್ರೀಯ ದ್ವಜ ಬಳಸುವಿಕೆ ಕುರಿತಾಗಿ ಇರುವ ನಿಯಮಗಳನ್ನು ತಿಳಿಸುವುದು ಮತ್ತು ಅವುಗಳನ್ನು ಪಾಲಿಸುವಂತೆ ಸೂಚಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕರ್ತವ್ಯ. ದೇಶದ ಗೌರವ, ಸ್ವಾಭಿಮಾನ, ಸರ್ವಭೌಮತೆಯನ್ನು, ಪ್ರದರ್ಶಿಸುವ ದೇಶದ ತ್ರಿವರ್ಣಧ್ವಜವನ್ನು ಹಾರಿಸಲು ಸ್ಪಷ್ಟ ನೀತಿ ನಿಯಮಗಳನ್ನು ರೂಪಿಸಲಾಗಿದೆ.Flag code of India 2000  ಮತ್ತು Prevention of insults to national honour act 1971 ಇದರ ಕುರಿತು ತಿಳಿಸುತ್ತದೆ. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ತಿಳುವಳಿಕೆ ಹೇಳಬೇಕು. ಈ ಮಹತ್ವಕಾಂಕ್ಷಿ ಯೋಜನೆಯಡಿ ಮೇಲಿನ ನೀತಿ ನಿಯಮಗಳನ್ನು ಪಾಲಿಸಿ ದೇಶ ಧ್ವಜದ ಗೌರವ ಉಳಿಸುವುದು ಅಗತ್ಯ.

-ಪ್ರಶಾಂತ. ಜಿ, ಮಹಾರಾಜ ಕಾಲೇಜು ಮೈಸೂರು.


ಕುಡಿಯುವ ನೀರಿಗೂ ಬರ!

ಮೈಸೂರಿನ ವಿಜಯನಗರ ೪ನೇ ಹಂತದಲ್ಲಿ ಕುಡಿಯುವ ನೀರಿಗೂ ಬರ ಬಂದಿದೆ. ನಮ್ಮ ಮನೆ ಇರುವುದು ವಿಜಯನಗರ ೪ನೇ ಹಂತ, ೨ನೇ ಫೇಸ್. ಇಲ್ಲಿ ೨ ದಿನಕ್ಕೆ ಒಮ್ಮೆರಾತ್ರಿ ೩-೦೦ ಗಂಟೆಯಿಂದ ಬೆಳಿಗ್ಗೆ ೬.೦೦ ರವರೆಗೆ ನೀರು ಬಿಡುತ್ತಾರೆ. ಅಂದರೆ ೩ ಗಂಟೆ ಮಾತ್ರ ನೀರು ಸೋರುತ್ತದೆ. ಅರ್ಧ ಸಂಪೂ ತುಂಬುವುದಿಲ್ಲ. ಕೆಲವೊಮ್ಮೆ ೨ನೇ ದಿನವು ನೀರು ಬಿಡುವುದಿಲ್ಲ. ವಾಟರ್ಮೆನ್ ಕೇಳಿದರೆ ೨ ಬೋರ್ವೆಲ್ ಮಾತ್ರ ಇರುವುದು ನೀರು ಸಾಕಾಗುವುದಿಲ್ಲ ಎನ್ನುತ್ತಾರೆ. ನಮಗೂ ಟ್ಯಾಂಕರ್ ನೀರು ಹಾಕಿಸಿ ಸಾಕಾಗಿ ಹೋಗಿದೆ. ನಾನು ಏರಿಯಾ ಇಂಜಿನಿಯರ್ ಗಮನಕ್ಕೂ ತಂದೆ ಏನು ಪ್ರಯೋಜನವಾಗಿಲ್ಲ. ಮೂಲಭೂತ ಸೌಲಭ್ಯ ಕೊಡುವುದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕರ್ತವ್ಯ. ಸಮರ್ಪಕವಾಗಿ ಪ್ರತಿದಿನ ನೀರು ಒದಗಿಸುವಂತೆ ಪ್ರಾಧಿಕಾರದ ಆಯುಕ್ತರಲ್ಲಿ ಮನವಿ ಮಾಡಿಕೊಳ್ಳುತ್ತೇನೆ.

– ಬಿ.ಜಿ.ರಂಗೇಗೌಡ, ವಿಜಯನಗರ ಮೈಸೂರು. 

andolana

Recent Posts

ಮದ್ದೂರು: ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ಸಾವು

ಮದ್ದೂರು: ತಾಲ್ಲೂಕಿನ ಭಾರತೀನಗರ ಸಮೀಪದ ಚಿಕ್ಕರಸಿನಕೆರೆ ಗ್ರಾಮದಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಳವಳ್ಳಿ ತಾಲ್ಲೂಕಿನ ಬಾಣಸಮುದ್ರ…

21 mins ago

ಉಪಚುನಾವಣೆ ಸಿಎಂಗೆ ಕಬ್ಬಿಣದ ಕಡಲೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ದಾವಣಗೆರೆ: ಈ ಉಪಚುನಾವಣೆಗಳು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…

37 mins ago

ಇಟಲಿ ಬಳಿ ಘೋರ ದುರಂತ: ಸಮುದ್ರದಲ್ಲಿ ದೋಣಿ ಮುಳುಗಿ 71 ಜನ ನಾಪತ್ತೆ

ರೋಮ್:‌ ಇಟಲಿ ಕರಾವಳಿಯಲ್ಲಿ ಭೀಕರ ಬೋಟ್‌ ದುರಂತ ಸಂಭವಿಸಿದ್ದು, ಮೆಡಿಟೇರಿಯನ್‌ ಸಮುದ್ರದಲ್ಲಿ ಬೋಟ್‌ ಮುಳುಗಿ 71 ಜನರು ನಾಪತ್ತೆಯಾಗಿದ್ದಾರೆ. ಈಸ್ಟರ್‌…

58 mins ago

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ವಿಚಾರ: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಮೈಸೂರು: ಕಾಳಸಂತೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಮಾರಾಟವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌…

1 hour ago

ಇನ್ನೂ ಎರಡು ವರ್ಷ ಸಿದ್ದರಾಮಯ್ಯನವರೇ ಸಿಎಂ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್‌ ಅವರು ಸಿಎಂ…

1 hour ago

ಡೊನಾಲ್ಡ್‌ ಟ್ರಂಪ್‌ ಡೆಡ್‌ಲೈನ್‌ಗೆ ಇರಾನ್‌ ಕೌಂಟರ್‌: ಏನದು ಗೊತ್ತಾ.?

ಟೆಹರಾನ್:‌ ನಷ್ಟ ಪರಿಹಾರವಿಲ್ಲದೇ ಹಾರ್ಮುಜ್‌ ಜಲಸಂಧಿ ಓಪನ್‌ ಮಾಡಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಇರಾನ್‌ ಕೌಂಟರ್‌ ಕೊಟ್ಟಿದೆ.…

2 hours ago