ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 02 ಮಂಗಳವಾರ 2022

‘ಆಂದೋಲನ’ ದಿನಪತ್ರಿಕೆಗೆ ಧನ್ಯವಾದಗಳು!

ಎಚ್ ಡಿ ಕೋಟೆ ತಾಲ್ಲೂಕಿನಲಿ ಜರುಗಿದ ‘ಆಂದೋಲನ’ ದಿನಪತ್ರಿಕೆಯ ೫೦ ವರ್ಷಗಳ ಸಾರ್ಥಕ ಪಯಣದ ಮುನ್ನೋಟ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಸಾಧಕರಿಬ್ಬರಿಗೆ ಸನ್ಮಾನಿಸಿರುವುದು ಸಂತಸವಾಗಿದೆ. ಪತ್ರಿಕೆಯು ಎರಡು ತಾಲೂಕುಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಸಮಸ್ಯೆಗಳನ್ನು ಅಧಿಕಾರಿ ವರ್ಗ ಮತ್ತು ಜನಪ್ರತಿನಿಧಿಗಳ ಮುಂದಿಟ್ಟು ಕಣ್ತೆರೆಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದು, ಓದುಗರ ಹೃದಯದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ವಿಶೇಷ ಪುಟಗಳಲ್ಲಿ ವೈವಿಧ್ಯಮಯವಾಗಿ ತಾಲೂಕಿನ ಹಿರಿಮೆಯನ್ನು ಪ್ರಕಟಿಸಿದ್ದೀರಿ. ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜನೆ ಮಾಡಿ ಹಿಂದುಳಿದ ತಾಲ್ಲೂಕಿನ ಬಗ್ಗೆ ತೋರಿದ ಕಾಳಜಿ ಮತ್ತು ಪ್ರೀತಿಗೆ ಧನ್ಯವಾದಗಳು.

-ಪರಶಿವಮೂರ್ತಿ ಎ್.ಪಿ, ನಂಜೀಪುರ, ಸರಗೂರು ತಾಲ್ಲೂಕು.


ಮೇ(ಲ್)ಲುಗೈ!!

ಸಿಇಟಿ ಫಲಿತಾಂಶ: ಬಾಲಕರು ಮೇಲುಗೈ

(ಆಂದೋಲನ, ಜು.೩೧)

ಪ್ರತಿ ಬಾರಿಯೂ ಪಿಯುಸಿ,

ಎಸ್ಸೆಸ್ಸೆಲ್ಸಿ ಪರೀಕ್ಷಾ

ಫಲಿತಾಂಶಗಳಲ್ಲಿ

ಬಾಲಕಿಯರೇ ಮೇಲುಗೈ!

ಸದ್ಯ , ಈ ಸಾರಿ

ಸಿಇಟಿಯಲ್ಲಾದರೂ

ತೋರಿಸಿ ಬಿಟ್ಟರಲ್ಲಾ

ನಮ್ಮಹುಡುಗರು
ನಾವೂ ಸೈ!!
-ಮ.ಗು.ಬಸವಣ್ಣ, ಜೆಎಸ್‌ಎಸ್ ಸಂಸ್ಥೆ, ಸುತ್ತೂರು.


ಧ್ವಜ ನೀತಿ ನಿಯಮ ಪಾಲನೆ ಅಗತ್ಯ

‘ಹರ್ ಘರ್ ತಿರಂಗ’ ಭಾರತ ಸರ್ಕಾರದ ಮಹತ್ವದ ಯೋಜನೆಯೇ ಸರಿ. ಆದರೆ ಜನರಿಗೆ ರಾಷ್ಟ್ರೀಯ ದ್ವಜ ಬಳಸುವಿಕೆ ಕುರಿತಾಗಿ ಇರುವ ನಿಯಮಗಳನ್ನು ತಿಳಿಸುವುದು ಮತ್ತು ಅವುಗಳನ್ನು ಪಾಲಿಸುವಂತೆ ಸೂಚಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕರ್ತವ್ಯ. ದೇಶದ ಗೌರವ, ಸ್ವಾಭಿಮಾನ, ಸರ್ವಭೌಮತೆಯನ್ನು, ಪ್ರದರ್ಶಿಸುವ ದೇಶದ ತ್ರಿವರ್ಣಧ್ವಜವನ್ನು ಹಾರಿಸಲು ಸ್ಪಷ್ಟ ನೀತಿ ನಿಯಮಗಳನ್ನು ರೂಪಿಸಲಾಗಿದೆ.Flag code of India 2000  ಮತ್ತು Prevention of insults to national honour act 1971 ಇದರ ಕುರಿತು ತಿಳಿಸುತ್ತದೆ. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ತಿಳುವಳಿಕೆ ಹೇಳಬೇಕು. ಈ ಮಹತ್ವಕಾಂಕ್ಷಿ ಯೋಜನೆಯಡಿ ಮೇಲಿನ ನೀತಿ ನಿಯಮಗಳನ್ನು ಪಾಲಿಸಿ ದೇಶ ಧ್ವಜದ ಗೌರವ ಉಳಿಸುವುದು ಅಗತ್ಯ.

-ಪ್ರಶಾಂತ. ಜಿ, ಮಹಾರಾಜ ಕಾಲೇಜು ಮೈಸೂರು.


ಕುಡಿಯುವ ನೀರಿಗೂ ಬರ!

ಮೈಸೂರಿನ ವಿಜಯನಗರ ೪ನೇ ಹಂತದಲ್ಲಿ ಕುಡಿಯುವ ನೀರಿಗೂ ಬರ ಬಂದಿದೆ. ನಮ್ಮ ಮನೆ ಇರುವುದು ವಿಜಯನಗರ ೪ನೇ ಹಂತ, ೨ನೇ ಫೇಸ್. ಇಲ್ಲಿ ೨ ದಿನಕ್ಕೆ ಒಮ್ಮೆರಾತ್ರಿ ೩-೦೦ ಗಂಟೆಯಿಂದ ಬೆಳಿಗ್ಗೆ ೬.೦೦ ರವರೆಗೆ ನೀರು ಬಿಡುತ್ತಾರೆ. ಅಂದರೆ ೩ ಗಂಟೆ ಮಾತ್ರ ನೀರು ಸೋರುತ್ತದೆ. ಅರ್ಧ ಸಂಪೂ ತುಂಬುವುದಿಲ್ಲ. ಕೆಲವೊಮ್ಮೆ ೨ನೇ ದಿನವು ನೀರು ಬಿಡುವುದಿಲ್ಲ. ವಾಟರ್ಮೆನ್ ಕೇಳಿದರೆ ೨ ಬೋರ್ವೆಲ್ ಮಾತ್ರ ಇರುವುದು ನೀರು ಸಾಕಾಗುವುದಿಲ್ಲ ಎನ್ನುತ್ತಾರೆ. ನಮಗೂ ಟ್ಯಾಂಕರ್ ನೀರು ಹಾಕಿಸಿ ಸಾಕಾಗಿ ಹೋಗಿದೆ. ನಾನು ಏರಿಯಾ ಇಂಜಿನಿಯರ್ ಗಮನಕ್ಕೂ ತಂದೆ ಏನು ಪ್ರಯೋಜನವಾಗಿಲ್ಲ. ಮೂಲಭೂತ ಸೌಲಭ್ಯ ಕೊಡುವುದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕರ್ತವ್ಯ. ಸಮರ್ಪಕವಾಗಿ ಪ್ರತಿದಿನ ನೀರು ಒದಗಿಸುವಂತೆ ಪ್ರಾಧಿಕಾರದ ಆಯುಕ್ತರಲ್ಲಿ ಮನವಿ ಮಾಡಿಕೊಳ್ಳುತ್ತೇನೆ.

– ಬಿ.ಜಿ.ರಂಗೇಗೌಡ, ವಿಜಯನಗರ ಮೈಸೂರು. 

andolana

Recent Posts

ಮಕ್ಕಳ ಸಂಕಷ್ಟಕ್ಕೆ ಎಣೆಯಿಲ್ಲ

ಚಿರಂಜೀವಿ ಸಿ. ಹುಲ್ಲಹಳ್ಳಿ  ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ…

2 hours ago

ಬೀದಿ ನಾಯಿಗಳ ಹಾವಳಿ; ಬಸವಳಿದ ಜನತೆ

ಚನ್ನೇಶ ಬಿ.ಇದರಮನಿ ಮೈಸೂರಿನ ಶ್ರೀರಾಂಪುರದಲ್ಲಿ ಆವರಿಸಿರುವ ಶ್ವಾನ ಭೀತಿ ಐದಾರು ಜನರಿಗೆ ಕಚ್ಚಿರುವ ನಾಯಿಗಳು; ಜನರ ಮನವಿಗೆ ಸ್ಪಂದಿಸದ ನಗರಪಾಲಿಕೆ:…

2 hours ago

ದರೋಡೆಗೆ ಪ್ರಶಸ್ತವಾಯಿತೇ ಬೈಪಾಸ್?

ಹೇಮಂತ್‌ಕುಮಾರ್ ಮಂಡ್ಯ: ಭೀಕರ ಅಪಘಾತಗಳ ಹೆಚ್ಚಳದಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು-ಮೈಸೂರು ಹೆದ್ದಾರಿ-ಸರ್ವಿಸ್ ರಸ್ತೆಯು ಈಗ ದರೋಡೆಕೋರರ ತಾಣವಾಗಿ ಬದಲಾಗುತ್ತಿರುವುದು ಕಾರು,…

2 hours ago

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

14 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

14 hours ago