ಪಿರಿಯಾಪಟ್ಟಣ ತಾಲ್ಲೂಕಿನ ರಾವಂದೂರು ಮುಂದುವರೆಯುತ್ತಿರುವ ಹೋಬಳಿ ಕೇಂದ್ರವಾಗಿದೆ. ಯಾವುದರಲ್ಲಿ ಮುಂದುವರೆಯುತ್ತಿರುವುದೋ ಗೊತ್ತಿಲ್ಲ, ಆದರೆ ಬಾರ್ಗಳು ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ದುರಂತದ ಹಾಗೂ ಕಳವಳಕಾರಿ ಸಂಗತಿಯೆನಿಸಿವೆ. ಈ ಮೊದಲು ಒಂದಿದ್ದರೆ ಈಗ ರಾವಂದೂರಿನಲ್ಲಿ ಎರಡು ಖಾಸಗಿ, ಒಂದು ಎಂಎಸ್ಐಎಲ್, ಜತೆಗೆ ಈಗ ಹೊಸದಾಗಿ ಭೋಗನಹಳ್ಳಿ ತಿರುವಿನಲ್ಲಿ ಒಂದು, ಹೀಗೆ ನಾಲ್ಕು ಬಾರ್ಗಳು ತೆರೆದಿವೆ. ಹೀಗಾದರೆ ಜನರ ಆರೋಗ್ಯ ಹಾಗೂ ಆರ್ಥಿಕ ಪರಿಸ್ಥಿತಿ ಹೇಗೆ ಸುಧಾರಿಸಬೇಕು? ದಿನದ ಸಂಪಾದನೆಯೆಲ್ಲವೂ ರ್ಬಾ ಪಾಲಾದರೆ ಮನೆಯ ನಿರ್ವಹಣೆ ಹೇಗೆ ? ಕುಡಿತದ ಚಟ ಬೆಳೆಸಿಕೊಂಡ ಎಷ್ಟೋ ಮಂದಿ ಯುವಕರು, ಮಧ್ಯಮಯಸ್ಕರ ಜೀವನ ಹಾಗೂ ಅವರ ಮನೆಯವರ ಪಾಡು ದೇವರಿಗೆ ಪ್ರೀತಿ! ಸಂತೋಷ ಮತ್ತು ದುಃಖ ಎರಡಕ್ಕೂ ನೆಪಮಾಡಿಕೊಂಡು ಕುಡಿತಕ್ಕೆ ಹೋಗುವ ಜನರಿಗೆ ಈ ರ್ಬಾ ಗಳು ತವರುಮನೆಯಾಗಿವೆ. ಈ ಬಗ್ಗೆ ಸರ್ಕಾರ, ಜಿಲ್ಲಾಡಳಿತ ಹಾಗೂ ಗ್ರಾಮಾಡಳಿತ ಒಂದಷ್ಟು ಯೋಚಿಸಿ ಯಾವ ಪ್ರಭಾವಕ್ಕೂ ಒಳಗಾಗದೇ ಇವುಗಳಿಗೆ ಕಡಿವಾಣ ಹಾಕಬೇಕು.
-ಗೋವಿಂದೇಗೌಡ, ಅರೇನಹಳ್ಳಿ ಗ್ರಾಮ, ಪಿರಿಯಾಪಟ್ಟಣ ತಾಲ್ಲೂಕು.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…