ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 04 ಗುರುವಾರ 2022

 

ಹೆಚ್ಚುತ್ತಿರುವ ವೈನ್ ಸ್ಟೋರು- ಬಾರು!

ಪಿರಿಯಾಪಟ್ಟಣ ತಾಲ್ಲೂಕಿನ ರಾವಂದೂರು ಮುಂದುವರೆಯುತ್ತಿರುವ ಹೋಬಳಿ ಕೇಂದ್ರವಾಗಿದೆ. ಯಾವುದರಲ್ಲಿ ಮುಂದುವರೆಯುತ್ತಿರುವುದೋ ಗೊತ್ತಿಲ್ಲ, ಆದರೆ ಬಾರ್‌ಗಳು ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ದುರಂತದ ಹಾಗೂ ಕಳವಳಕಾರಿ ಸಂಗತಿಯೆನಿಸಿವೆ. ಈ ಮೊದಲು ಒಂದಿದ್ದರೆ ಈಗ ರಾವಂದೂರಿನಲ್ಲಿ ಎರಡು ಖಾಸಗಿ, ಒಂದು ಎಂಎಸ್‌ಐಎಲ್, ಜತೆಗೆ ಈಗ ಹೊಸದಾಗಿ ಭೋಗನಹಳ್ಳಿ ತಿರುವಿನಲ್ಲಿ ಒಂದು, ಹೀಗೆ ನಾಲ್ಕು ಬಾರ್‌ಗಳು ತೆರೆದಿವೆ. ಹೀಗಾದರೆ ಜನರ ಆರೋಗ್ಯ ಹಾಗೂ ಆರ್ಥಿಕ ಪರಿಸ್ಥಿತಿ ಹೇಗೆ ಸುಧಾರಿಸಬೇಕು? ದಿನದ ಸಂಪಾದನೆಯೆಲ್ಲವೂ ರ್ಬಾ ಪಾಲಾದರೆ ಮನೆಯ ನಿರ್ವಹಣೆ ಹೇಗೆ ? ಕುಡಿತದ ಚಟ ಬೆಳೆಸಿಕೊಂಡ ಎಷ್ಟೋ ಮಂದಿ ಯುವಕರು, ಮಧ್ಯಮಯಸ್ಕರ ಜೀವನ ಹಾಗೂ ಅವರ ಮನೆಯವರ ಪಾಡು ದೇವರಿಗೆ ಪ್ರೀತಿ! ಸಂತೋಷ ಮತ್ತು ದುಃಖ ಎರಡಕ್ಕೂ ನೆಪಮಾಡಿಕೊಂಡು ಕುಡಿತಕ್ಕೆ ಹೋಗುವ ಜನರಿಗೆ ಈ ರ್ಬಾ ಗಳು ತವರುಮನೆಯಾಗಿವೆ. ಈ ಬಗ್ಗೆ ಸರ್ಕಾರ, ಜಿಲ್ಲಾಡಳಿತ ಹಾಗೂ ಗ್ರಾಮಾಡಳಿತ ಒಂದಷ್ಟು ಯೋಚಿಸಿ ಯಾವ ಪ್ರಭಾವಕ್ಕೂ ಒಳಗಾಗದೇ ಇವುಗಳಿಗೆ ಕಡಿವಾಣ ಹಾಕಬೇಕು.

-ಗೋವಿಂದೇಗೌಡ, ಅರೇನಹಳ್ಳಿ ಗ್ರಾಮ, ಪಿರಿಯಾಪಟ್ಟಣ ತಾಲ್ಲೂಕು.

 

 

 

 

 

andolana

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

6 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

6 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

7 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

9 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

10 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

12 hours ago