ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 18 ಗುರುವಾರ 2022

ಇದು ಸನ್ನಡತೆ ಅಲ್ಲ!

ಸಾವಕರರ್ ಮತ್ತು ಟಿಪ್ಪು ಫ್ಲೆಕ್ಸ್ ವಿಚಾರವಾಗಿ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ. ಗಲಾಟೆ ಹಿಂಸಾಚರಕ್ಕೂ ತಿರುಗಿದೆ. ಆಯ್ದ ಮತ್ತು ವಿಶೇಷ ಸಂದರ್ಭಗಳಲ್ಲೇ ಇಂತಹ ಅಹಿತಕರ ಘಟನೆಗಳು ಶಿವಮೊಗ್ಗದಲ್ಲಿ ,ಇಲ್ಲವೇ ಕರಾವಳಿ ಪ್ರದೇಶದಲ್ಲಿ ನಡೆಯುತ್ತಿವೆ. ಆಡಳಿತಾರೂಢ ಬಿಜೆಪಿ ಇಂತಹ ಸಂದರ್ಭದಲ್ಲಿ ಒಂದು ಸಮುದಾಯದವರಿಗೆ ಮಾತ್ರ ಸಾಂತ್ವನ ಹೇಳುತ್ತಾ ಮತ್ತೊಂದು ಸಮುದಾಯದ ವಿರುದ್ಧ ಪರೋಕ್ಷವಾಗಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತದೆ. ರಾಜ್ಯ ಸರ್ಕಾರ ತನ್ನ ಆಡಳಿತ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಇಂತಹ ಘಟನೆಗಳು ಪದೇ ಪದೇ ಆಗುವುದನ್ನು ತಡೆಯುವ ಪ್ರಯತ್ನ ಮಾಡುತ್ತಲೇ ಇಲ್ಲ. ಜನರ ಗಮನವನ್ನು ಭಾವನಾತ್ಮಕ ವಿಚಾರಗಳತ್ತ ಸೆಳೆಯುವ ಮೂಲಕ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳುತ್ತದೆ. ಇದು ಸನ್ನಡತೆ ಅಲ್ಲ.

-ನಂದಕುಮಾರ್, ಸರಸ್ವತಿಪುರಂ, ಮೈಸೂರು.


ಎಲ್ಲಿಗೆ ಬಂದಿದೆ ಸ್ವಾತಂತ್ರ್ಯ!?

ಸ್ವಾತಂತ್ರ್ಯ ಬಂದು ೭೫ ವರ್ಷಗಳೇ ಕಳೆದಿದೆ.

ಅಮೃತಮಹೋತ್ಸವದ ಸಂಭ್ರಮ ಮುಗಿಲು ಮುಟ್ಟಿದೆ.

ಹರ್ ಘರ್ ತಿರಂಗಾ ಅಂದುಕೊಂಡಂತೆಯೇ ಜರುಗಿದೆ.

ಬಡತನ, ನಿರುದ್ಯೋಗ, ಭ್ರಷ್ಟಾಚಾರ ಹಾಗೆಯೇ ಉಳಿದಿದೆ!

ಹೀಗಾದರೆ ಅಮೃತಮಹೋತ್ಸವದ ಸಂತೋಷಕ್ಕೆ ಅರ್ಥವೇನಿದೆ!?

-ಹರಳಹಳ್ಳಿಪುಟ್ಟರಾಜು, ಪಾಂಡವಪುರ.


ಪ್ರತಿಭಾವಂತರಿಗೆ ಮನ್ನಣೆ ನೀಡಿ

ಭ್ರಷ್ಟಾಚಾರ ನಮ್ಮ ದೇಶದಲ್ಲಿ ಕುಣಿದು ಕುಪ್ಪಳಿಸುತ್ತಿದೆ. ಪಿ.ಎಸ್.ಐ. ನೇಮಕ ಸೇರಿದಂತೆ ಹಲವು ನೇಮಕಾತಿಗಳಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಭ್ರಷ್ಟಾಚಾರ ಎಲ್ಲೆಡೆ ವ್ಯಾಪಿಸುತ್ತಿದೆ. ಇದರಿಂದಾಗಿ ಪ್ರತಿಭಾವಂತರಿಗೆ ಅನ್ಯಾಯವಾಗುತ್ತಿದೆ. ದೇಶದಲ್ಲಿ ಪ್ರತಿಭಾವಂತರಿಗೆ ಕೊರತೆ ಇಲ್ಲ. ಆದರೆ, ಅವರ ಪ್ರತಿಭೆಗೆ ಮನ್ನಣೆ ದೊರೆಯದ ಕಾರಣ ಬೇರೆ ದೇಶಗಳಲ್ಲಿ ನೆಲೆಸುತ್ತಿದ್ದಾರೆ. ಅವರ ಪ್ರತಿಭೆಯ ಫಲ ನಮಗೆ ದಕ್ಕದಂತಾಗುತ್ತಿದೆ. ಯುವಜನತೆಯ ಪ್ರತಿಭೆಗೆ ಮನ್ನಣೆ ಕೊಟ್ಟು ನಮ್ಮ ದೇಶದ ಪ್ರಗತಿಗೆ ಅವಕಾಶ ಮಾಡಿಕೊಟ್ಟರೆ ದೇಶದ ಭವಿಷ್ಯ ಉಜ್ವಲವಾಗುತ್ತದೆ. ಪ್ರತಿಭಾವಂತ ಯುವಜನತೆ ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತು ಹಾಕಿ ದೇಶವನ್ನು ಉಳಿಸಲು ಸಾಧ್ಯವಾಗುತ್ತದೆ.

-ನಿಸರ್ಗ ಮುತ್ತಪ್ಪ ಎಂ, ಮಹಾರಾಜ ಕಾಲೇಜು, ಮೈಸೂರು.


ಉತ್ತಮ ನಿರ್ಧಾರ

ಕರ್ನಾಟಕ ರಾಜ್ಯ ಸರ್ಕಾರ ಈ ವರ್ಷ ದಸರಾ ಮಹೋತ್ಸವದ ಉದ್ಘಾಟನೆಗೆ ಮಣ್ಣಿನ ಮಗ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಅವರನ್ನುಆಹ್ವಾನಿಸುವ ಪ್ರಸ್ತಾಪ ಮಾಡಿರುವುದು ಸ್ವಾಗತಾರ್ಹ ನಿರ್ಧಾರ. ಈ ವಯಸ್ಸಿನಲ್ಲಿಯೂ ನಾಡು ನುಡಿ ಸಂಸ್ಕೃತಿ ಬಗ್ಗೆ ಕಾಳಜಿ ಇರುವ ಮೇರು ವ್ಯಕ್ತಿ ದೇವೇಗೌಡರು. ಕಾವೇರಿ ನದಿ ನೀರಿನಲ್ಲಿ ಅಗ್ರಪಾಲು ನಮಗೆ ದಕ್ಕಿರುವುದರಲ್ಲಿ ದೇವೆಗೌಡರ ಪಾತ್ರ ಬಹಳ ಮುಖ್ಯ. ದೇವೇಗೌಡರು ಎಲ್ಲ ಪಕ್ಷಗಳ ಮುಖಂಡರ ಜೊತೆ ಉತ್ತಮ ಬಾಂಧವ್ಯದಿಂದ ಇದ್ದಾರೆ. ದೇವೆಗೌಡರು ಪ್ರಬುದ್ಧ ರಾಜಕೀಯ ಮುತ್ಸದ್ದಿ. ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸುವುದೆಂದರೆ ರಾಜ್ಯದ ಮಣ್ಣಿನ ಮಕ್ಕಳಾದ ರೈತರನ್ನೇ ಗೌರವಿಸಿದಂತಾಗುತ್ತದೆ.

-ಸಿದ್ದಲಿಂಗೆಗೌಡ. ಹೈರಿಗೆ ಗ್ರಾಮ. ಎಚ್ ಡಿ ಕೊಟೆ ತಾಲ್ಲೂಕು.


ಶೌಚಾಲಯ ಸೌಲಭ್ಯ ಒದಗಿಸಿ

ಹುಣಸೂರಿನಲ್ಲಿರುವ ಡಿ . ದೇವರಾಜು ಅರಸು ಕಾಲೇಜು ವ್ಯಾಸಂಗಕ್ಕೆ ಉತ್ತಮ ಶ್ರೇಣಿಯ ಕಾಲೇಜಾಗಿದೆ. ಇಲ್ಲಿ ಸುಮಾರು ಎರಡು ಸಾವಿರ ವಿದ್ಯಾರ್ಥಿ, ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ಇಷ್ಟು ಬೃಹತ್ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರೂ ಕಾಲೇಜಿನಲ್ಲಿ ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲ. ಇದರಿಂದಾಗಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ನಿತ್ಯವೂ ಪರದಾಡುವಂತಾಗಿದೆ. ಸಂಬಂಧ ಅಧಿಕಾರಿಗಳು ತಕ್ಷಣ ವ್ಯವಸ್ಥಿತವಾದ ಶೌಚಾಲಯ ಸೌಲಭ್ಯ ಒದಗಿಸಬೇಕಿದೆ.

– ಶಿವರಾಜು, ಮಹಾರಾಜ ಕಾಲೇಜು, ಮೈಸೂರು.

 

 

andolana

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

51 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago